ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣವನ್ನು ನ್ಯಾಯಾಲಯ ವಜಾ ಮಾಡಿದ್ದು, ಅವರಿಗೆ ಬಿಗ್ ರಿಲೀಫ್ ದೊರೆತಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್ ಅವರು ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಯಡಿಯೂರಪ್ಪ ಅವರ ವಿರುದ್ಧ ಸಿರಾಜಿನ್ ಬಾಷಾ ಹಾಗೂ ಬಾಲಕೃಷ್ಣ ಎಂಬುವವರು ದಾಖಲಿಸಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ಸೆಷನ್ಸ್ ಕೋರ್ಟ್ ಇಂದು ವಜಾಗೊಳಿಸಿದೆ.
ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಆರೋಪಿಯಾಗಿದ್ದ ಯಡಿಯೂರಪ್ಪ ಎಲ್ಲ ಪ್ರಕರಣಗಳಿಂದ ಮುಕ್ತಿ ಪಡೆದಿದ್ದಾರೆ.
Discussion about this post