ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳುನಾಡಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ #BJP ಹಾಗೂ ಮಿತ್ರಪಕ್ಷಗಳು 39 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ಅಲ್ಲಿನ ರಾಜ್ಯಾಧ್ಯಕ್ಷ ಅಣ್ಣಾಮಲೈ #KAnnamalai ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದ ರಾಜಕೀಯ ಬದಲಾವಣೆ ಕೊಯಮತ್ತೂರಿನಿಂದ ಆರಂಭವಾಗಲಿದ್ದು, 39 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದಿದ್ದಾರೆ.
ಎಂ.ಕೆ. ಸ್ಟಾಲಿನ್ #MKStalin ಇಲ್ಲಿಗೆ ಬಂದು 40 ದಿನಗಳ ಕಾಲ ಪ್ರಚಾರ ಮಾಡಿದರೂ ಕೊಯಮತ್ತೂರಿನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದರು.
ಕೊಯಮತ್ತೂರಿನ ಚುನಾವಣಾ ಹೋರಾಟ ಧರ್ಮ ಮತ್ತು ಅಧರ್ಮದ ನಡುವೆ ಇದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post