No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

Mandya | ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ | ವಿಜಯೇಂದ್ರ ಘೋಷಣೆ | ಕಾರಣವೇನು?

kalpa News by kalpa News
July 29, 2026
in ಮಂಡ್ಯ, ಶಿವಮೊಗ್ಗ
0
BJP Protest in Mandya on July 31 Vijayendra Announces
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಮಂಡ್ಯ  |

ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ಮಂಡ್ಯದಲ್ಲಿ (Mandya) ಭಾರತೀಯ ಜನತಾ ಪಕ್ಷದ ವತಿಯಿಂದ ಭಾರೀ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ (BYVijayendra) ತಿಳಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರತಿಭಟನೆಯನ್ನು ತಮ್ಮ ನೇತೃತ್ವದಲ್ಲಿ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಅವರ ಸಹಭಾಗಿತ್ವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು. ರೈತ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಈ ಹೋರಾಟದಲ್ಲಿ ಭಾಗವಹಿಸಿ, ಸಂಕಷ್ಟದಲ್ಲಿರುವ ರೈತರ ಪರವಾಗಿ ಧ್ವನಿಯಾಗಬೇಕೆಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ

ಕಾವೇರಿ ನೀರಿನ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ, ಸಿಡಬ್ಲ್ಯುಆರ್‌ಸಿ (Cauvery Water Regulation Committee) ಮುಂದೆ ವಾದ ಮಂಡಿಸಲು ನಿಯೋಜಿತ ವಕೀಲರು ಮತ್ತು ಅಧಿಕಾರಿಗಳು ರಾಜ್ಯದ ನೀರಿನ ಲಭ್ಯತೆ ಕುರಿತು ಸಮಗ್ರ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.

ಕರ್ನಾಟಕದ ರೈತರು ಈಗಾಗಲೇ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿದ್ದಾರೆ. ವಿಶೇಷವಾಗಿ ಕಾವೇರಿ ಕಣಿವೆಯ ರೈತರು ಬೆಳೆ ಬಿತ್ತನೆಗೂ ಅಸಮರ್ಥರಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಸಿಡಬ್ಲ್ಯುಆರ್‌ಸಿ ಸೂಚನೆಗೂ ಮುನ್ನವೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅವರು ಕಿಡಿಕಾರಿದರು. Kumadvathi College Shikariura

“ವಾಸ್ತವಾಂಶವನ್ನು ತಿಳಿಸಬೇಕಿತ್ತಲ್ಲವೇ?”

ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸಿಡಬ್ಲ್ಯುಆರ್‌ಸಿಗೆ ಸರಿಯಾಗಿ ತಿಳಿಸಬೇಕಾಗಿತ್ತು. ಆದರೆ ಅದನ್ನು ಮಾಡಲು ಸರ್ಕಾರ ವಿಫಲವಾಗಿದೆ ಎಂದು ಅವರು ಪ್ರಶ್ನಿಸಿದರು. ಕಾವೇರಿ ಕಣಿವೆಯ ಜನರು ಕುಡಿಯುವ ನೀರಿಗೂ ತೊಂದರೆ ಅನುಭವಿಸುತ್ತಿರುವ ಸಂದರ್ಭದಲ್ಲಿ, ರೈತರು ಬಿತ್ತನೆ ಮಾಡಬಾರದು ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತರಿಗೆ ಮೋಸ ಮಾಡಿದ್ದು, ಯುಪಿಎ ಮೈತ್ರಿ ಪಾಲುದಾರರಾದ ತಮಿಳುನಾಡು ಮುಖ್ಯಮಂತ್ರಿಯನ್ನು ಸಂತೋಷಪಡಿಸಲು ಈ ಕ್ರಮ ಕೈಗೊಂಡಿದೆ ಎಂದು ಆರೋಪಿಸಿದರು.

Also Read>> ಕಿರ್ಲೋಸ್ಕರ್’ನಲ್ಲಿ ನಿವೃತ್ತಿ ಹೊಂದಿದ ಇಬ್ಬರು ಹಿರಿಯ ಸಿಬ್ಬಂದಿಗೆ ಸನ್ಮಾನ

“ಮೊದಲು ಕರ್ನಾಟಕಕ್ಕೆ ನೀರು, ಬಳಿಕ ತಮಿಳುನಾಡು”

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಕ್ರಮ ಕೈಗೊಳ್ಳಬೇಕು. ಕರ್ನಾಟಕದಲ್ಲಿ ನೀರಿನ ಲಭ್ಯತೆ ಸಮರ್ಪಕವಾಗಿದ್ದರೆ ಮಾತ್ರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಕಾಂಗ್ರೆಸ್ ಭವಿಷ್ಯ ಕುರಿತು ಭವಿಷ್ಯವಾಣಿ

ಇದೇ ವೇಳೆ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಾನಗಳು 50-60ಕ್ಕೆ ಇಳಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

BJP Protest in Mandya on July 31: Vijayendra Announces

Shivamogga: Condemning the state government’s failure in handling the Cauvery river water issue, the Bharatiya Janata Party (BJP) will stage a major protest in Mandya on July 31, said BJP State President and MLA B.Y. Vijayendra.

Speaking to the media in Shivamogga on Tuesday, Vijayendra stated that the protest will be led by himself along with Leader of the Opposition R. Ashoka. He urged farmer organisations and various groups to participate in the protest and raise their voice in support of distressed farmers.

Sharp Criticism of State Government

Vijayendra accused Chief Minister D.K. Shivakumar of completely failing in addressing the Cauvery water dispute. He alleged that the lawyers and officials representing Karnataka before the Cauvery Water Regulation Committee (CWRC) failed to present comprehensive data regarding water availability in the state.

He noted that farmers in Karnataka are already facing severe distress due to lack of rainfall. Farmers in the Cauvery basin, in particular, are struggling even to begin sowing activities. In such a situation, releasing water to Tamil Nadu even before CWRC directives reflects the negligence of the state government, he criticised.

“Shouldn’t the Facts Have Been Presented?”

Questioning the government’s approach, Vijayendra said the actual ground situation should have been clearly presented before the CWRC. He pointed out that people in the Cauvery basin are facing difficulties even for drinking water. He also criticised the Chief Minister’s reported statement advising farmers not to take up sowing, calling it deeply concerning.

He alleged that the Congress government has betrayed farmers in the state and acted to please its UPA ally, the Tamil Nadu Chief Minister.

“Water for Karnataka First”

Vijayendra stressed that the Chief Minister must respond to the plight of farmers in Karnataka. He asserted that water should be released to Tamil Nadu only after ensuring sufficient availability within the state.

Prediction on Congress Prospects

Commenting on political developments, Vijayendra said that former Chief Minister Siddaramaiah’s decision to step back from electoral politics would weaken the Congress party. He expressed confidence that the party’s tally in the 2028 Assembly elections would drop to around 50–60 seats.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: BY Vijayendracauvery riverKannada News WebsiteLatest News KannadaMandyaRiverShimogaShivamoggaShivamogga Newsಕಾವೇರಿ ನದಿಬಿ.ವೈ. ವಿಜಯೇಂದ್ರಬಿಜೆಪಿಮಂಡ್ಯಶಿವಮೊಗ್ಗ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Koppal | ಕಿರ್ಲೋಸ್ಕರ್’ನಲ್ಲಿ ನಿವೃತ್ತಿ ಹೊಂದಿದ ಇಬ್ಬರು ಹಿರಿಯ ಸಿಬ್ಬಂದಿಗೆ ಸನ್ಮಾನ

Next Post

Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು

kalpa News

kalpa News

Next Post
Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು

Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL