ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವರ ಬಾಗೀನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಶಾಸಕ ಟಿ. ರಘುಮೂರ್ತಿ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಆರೋಪಿಸಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ವೇದಾವತಿ ನದಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಪಕ್ಷದಿಂದ ಆಯೋಜಿಸಲಾಗಿತ್ತೇ ಹೊರತು ಸರ್ಕಾರದಿಂದ ಅಲ್ಲ. ಅಲ್ಲದೇ, ಸಾಮಾಜಿಕ ಅಂತರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದು, ತಾವು ಪ್ರತಿ ದಿನ ನಡೆಸುವ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಉಲ್ಲಂಘನೆಯಾಗುತ್ತಿರುವುದು ಶಾಸಕರಿಗೆ ಯಾಕೆ ತಿಳಿಯುತ್ತಿಲ್ಲ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಜನಪ್ರತಿನಿಧಿಗಳನ್ನು ಮೂಲೆಗುಂಪು ಮಾಡಿ ಕೇವಲ ಅಧಿಕಾರಿಗಳನ್ನು ಹಿಂದಿಟ್ಟುಕೊಂಡೇ ಸಭೆ ಸಮಾರಂಭಗಳನ್ನು ಮಾಡುತ್ತಿದ್ದಾರೆ. ನದಿ ನೀರಿನ ವಿಷಯದಲ್ಲಿ ಎಸ್ಸಿ ಸಮುದಾಯವನ್ನು ಎತ್ತಿಕಟ್ಟುವ ಮೂಲಕ ಜನರ ನಡುವೆ ದ್ವೇಷದ ಭಾವನೆ ಬೆಳೆಸುತ್ತಿದ್ದಾರೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಲುವೆಹಳ್ಳಿ ಜಯಪಾಲಯ್ಯ, ವೇದಾವತಿ ನದಿಗೆ ನೀರು ಹದಿರುವುದು ಬಿಜೆಪಿ ಕಾರ್ಯಕರ್ತರ ಪಾದಯಾತ್ರೆಯ ಫಲ. ಮತ್ತು ನೈತಿಕತೆ ಇಲ್ಲದ ಶಾಸಕರು ಜಿಲ್ಲೆಯ ಹಿರಿಯ ರಾಜಕಾರಣಿ ಜಿ.ಎಚ್. ತಿಪ್ಪಾರೆಡ್ಡಿ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ತಾಲೂಕು ಮಂಡಲದ ಮಾಜಿ ಅಧ್ಯಕ್ಷ ಸೋಮಶೇಖರ್ ಮಂಡಮಠ, ಉಪಾಧ್ಯಕ್ಷ ರಾಮದಾಸ್, ಪಕ್ಷದ ಮುಖಂಡ ಎಂ.ಎಸ್. ಜಯರಾಂ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜು ಮಾತನಾಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ಎಸ್. ಶಿವಪುತ್ರಪ್ಪ, ದಿನೇಶರೆಡ್ಡಿ, ತಾಲೂಕು ಪಂಚಾಯ್ತಿ ಸದಸ್ಯ ಸಣ್ಣಸೂರಯ್ಯ ಬಿಜೆಪಿ ಮುಖಂಡರು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093
Discussion about this post