No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರಕ್ತದಾನಿಗಳೇ, ಇಂತಹ ತುರ್ತು ಪರಿಸ್ಥಿತಿಯ್ಲಲೂ ನಿಮ್ಮಿಂದ ಇದು ಸಾಧ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 30, 2020
in Special Articles
0
ರಕ್ತದಾನಿಗಳೇ, ಇಂತಹ ತುರ್ತು ಪರಿಸ್ಥಿತಿಯ್ಲಲೂ ನಿಮ್ಮಿಂದ ಇದು ಸಾಧ್ಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊರೋನಾ ಸೃಷ್ಟಿಸಿರುವ ತ್ರಿಶಂಕು ಸ್ಥಿತಿಯಿಂದ ದೇಶಕ್ಕೆ ದೇಶವೇ ಸ್ಥಬ್ದವಾಗಿರುವ ಈ ಪರಿಸ್ಥಿತಿಯಲ್ಲಿ ಮಾಧ್ಯಮಗಳು ತೋರಿಸುವ ಸಮಸ್ಯೆಗಳ ಸತ್ಯವನ್ನು ಮಾತ್ರ ನೋಡುವ ನಾವು ಕಣ್ಣಿಗೆ ಕಾಣದ ಅದೆಷ್ಟೋ ಜನರ ಯಾತನೆಗಳನ್ನು ನೋಡಲಾಗುವುದಿಲ್ಲ.

ಕೊರೋನಾ ಪೀಡಿತರ ಗೋಳಿನ ಮಧ್ಯೆ ಇತರ ರೋಗಿಗಳ ಪಾಡನ್ನು ಕೇಳುವವರೇ ಇಲ್ಲವಾಗಿದೆ. ಈ ನಡುವೆ ನಿತ್ಯ ನೂರಾರು ಜನರಿಗೆ ಅತ್ಯಗತ್ಯ ಬೇಕಿರುವ ರಕ್ತದ ಕೊರತೆ ನೀಗಿಸುವಲ್ಲಿ ಬ್ಲಡ್ ಬ್ಯಾಂಕುಗಳು ಮೊದಲಿನಂತೆ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಇತರೆ ಅವಶ್ಯಕತೆಗಳನ್ನು ಮುಂದೂಡಬಹುದಾದರೂ ಅನೀಮಿಯಾ, ಡಯಾಲಿಸಿಸ್ ಮತ್ತಿತರೆ ರಕ್ತದ ಅವಶ್ಯವಿರುವ ಖಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದಿನವಿರಲಿ, ಒಂದು ಗಂಟೆಯನ್ನೂ ಮುಂದೂಡಲು ಸಾಧ್ಯವಿಲ್ಲ.

ಬ್ಲಡ್ ಬ್ಯಾಂಕುಗಳ ಸಹಾಯದಿಂದ ಈ ರೋಗಿಗಳ ಅಗತ್ಯತೆ ಹೇಗೋ ಪೂರೈಸುತ್ತಿತ್ತು. ಈಗ ಈ ಕಾಯಕಕ್ಕೂ ಕಂಟಕ ಎದುರಾಗಿರುವುದು ದುರದೃಷ್ಟಕರ. ದಾನಿಗಳ ನೆರವಿನಿಂದ ಸಾಂಗವಾಗಿ ನಡೆಯುತ್ತಿದ್ದ ಪುಣ್ಯದ ಕೆಲಸಕ್ಕೆ ಕೊರೋನಾ ಮಹಾಮಾರಿ ಅಡ್ಡ ಬಂದಿದೆ. ನಿತ್ಯ ರಕ್ತದ ಅವಶ್ಯಕತೆಯಿರುವ ರೋಗಿಗಳು ಪರಿತಪಿಸುವಂತಾಗಿದೆ. ದಾನಿಗಳ ಕೊರತೆ ಅನುಭವಿಸುತ್ತಿರುವ ಬ್ಲಡ್ ಬ್ಯಾಂಕುಗಳು ಲಾಕ್ ಡೌನ್ ಸಮಸ್ಯೆಯಿಂದಾಗಿ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಆಗಾಗ್ಗೆ ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಕೊರತೆ ನೀಗಿಸಿಕೊಳ್ಳುತ್ತಿದ್ದ ಈ ಬ್ಲಡ್ ಬ್ಯಾಂಕುಗಳು ಈಗ ಸ್ವಯಂ ಪ್ರೇರಿತ ದಾನಿಗಳನ್ನು ಮಾತ್ರ ಅವಲಂಬಿಸಬೇಕಿದೆ. ಆದರೆ ಲಾಕ್ ಡೌನ್ ನಿಂದಾಗಿ ಹೊರಬರಲು ದಾನಿಗಳೂ ಹೆದರುತ್ತಿದ್ದಾರೆ.

99 ಬಾರಿ ರಕ್ತದಾನ ಮಾಡಿರುವ ಧರಣೇಂದ್ರ ದಿನಕರ್

ಅಗತ್ಯ ಸೇವೆಗಳ ಅಡಿಯಲ್ಲಿ ರಕ್ತದಾನವೂ ಸೇರುವುದರಿಂದ ದಾನಿಗಳು ರಕ್ತದಾನಕ್ಕೆಂದು ತಿಳಿಸಿ ಬರಬಹುದಾಗಿದೆ ಮತ್ತು ತೆರಳುವಾಗ ರಕ್ತದಾನ ಮಾಡಿದ ಸರ್ಟಿಫಿಕೇಟ್ ಪಡೆದು ಅಗತ್ಯಬಿದ್ದಲ್ಲಿ ಪೋಲೀಸರಿಗೆ ತೋರಿಸಬಹುದಾಗಿದೆ. ಈ ಕುರಿತು ಹೊರಬರಲು ಭಯಬೀಳದೇ ಯುವಕರು ಮುಂದಾಗಬೇಕಿದೆ. ನಮಗೆ ಆಹಾರದ ಕೊರತೆಯಾದಲ್ಲಿ ಪರ್ಯಾಯವಿದೆ. ಆದರೆ ಪರ್ಯಾಯವೇ ಇಲ್ಲದ ಏಕೈಕ ವಸ್ತು ಎಂದರೆ ರಕ್ತ ಮಾತ್ರ. ರಕ್ತಕ್ಕೆ ರಕ್ತವೇ ಪರ್ಯಾಯವಾಗಿದ್ದು ಕೃತಕ ತಯಾರಿಕೆ ಅಸಾಧ್ಯವಾದ್ದರಿಂದ ರಕ್ತದಾನ ಇಂದು ಶ್ರೇಷ್ಠ ದಾನವಾಗಿದೆ.

ಯಾವುದೇ ಕೆಲಸದ ಒತ್ತಡವಿಲ್ಲದ ಹಾಗೂ ಸಮಯಾಭಾವದ ಚಿಂತೆಯಿಲ್ಲದೇ ದಿನಗಳನ್ನು ಒತ್ತಾಯಪೂರ್ವಕವಾಗಿ ಮನೆಯಲ್ಲೇ ಕಳೆಯಬೇಕಾದ ಅನಿವಾರ್ಯತೆಯ ಈ ಸುಸಮಯವನ್ನು ಯುವಕರು, 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿ ವಿದ್ಯಾರ್ಥಿನಿಯರು ರಕ್ತದಾನಕ್ಕಾಗಿ ಸದ್ಬಳಕೆ ಮಾಡಿಕೊಂಡು ಇತರರಿಗೂ ಮಾದರಿಯಾಗುವ ಅವಕಾಶ ಸೃಷ್ಟಿಸಿಕೊಂಡು ಈ ಪುಣ್ಯದ ಕೆಲಸಕ್ಕೆ ಮುಂದಾಗಿ ದೇವರ ಕೃಪೆಗೆ ಒಳಗಾಗಬಹುದಾಗಿದೆ ಮತ್ತು ರೋಗಿಗಳ ಮುಖದಲ್ಲಿ ಮಂದಹಾಸ ಮೂಡಿಸಬಹುದಾಗಿದೆ.

ಪ್ರಥಮ ಬಾರಿ ರಕ್ತದಾನ ಮಾಡುತ್ತಿರುವ ಶಾಂತನು ಉಡುಪ

ಯುವಕರಿಗೆ ಪ್ರೇರಣೆಯಾಗುವ ನಿಟ್ಟಿನಲ್ಲಿ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಿರಪರಿಚಿತ ಯುವ ಉದ್ಯಮಿ ಡಿ.ಎಸ್. ಅರುಣ್ ಒಂದು ಹೆಜ್ಜೆಯನ್ನು ಈಗಾಗಲೇ ಇಟ್ಟು ಅಗತ್ಯವಿರುವವರಿಗೆ ರೋಟರಿ ಬ್ಲಡ್ ಬ್ಯಾಂಕ್ ಮೂಲಕ ರಕ್ತದಾನ ಮಾಡಿ ಮಾದರಿಯಾಗಿದ್ದಾರೆ. ಇವರ ಮಿತ್ರವೃಂದದವರೂ ಇವರನ್ನು ಅನುಸರಿಸಿ ರಕ್ತದಾನ ಮಾಡಿರುವುದು ಈ ಸಮಯದಲ್ಲಿ ಪ್ರಸ್ತುತ. ದಯಮಾಡಿ ದಾನಿಗಳು, ಯುವಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ನಿಟ್ಟಿನಲ್ಲಿ ಮುಂದಾಗಿ ಬಂದು ಪ್ರಸ್ತುತ ಲಾಕ್ ಡೌನ್ ಸಮಯದಲ್ಲಿ ತಮಗೆ ಸಮೀಪವಿರುವ ಯಾವುದೇ ರಕ್ತದಾನ ಕೇಂದ್ರಕ್ಕೆ ತೆರಳಿ ರಕ್ತದಾನ ಮಾಡುವ ಮೂಲಕ ರಕ್ತದ ಅಗತ್ಯವಿರುವ ರೋಗಿಗಳ ಪಾಲಿಗೆ ಮರಳುಗಾಡಿನ ಓಯಸಿಸ್ ಗಳಾಗುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಮನಃಪೂರ್ವಕವಾಗಿ ವಿನಂತಿಸಲಾಗಿದೆ.

ವಿ.ಸೂ: ಆಸಕ್ತ ದಾನಿಗಳು ಕರೆ ಮಾಡಿದಲ್ಲಿ ರೋಟರಿ ರಕ್ತನಿಧಿಯಿಂದ ವಾಹನ ವ್ಯವಸ್ಥೆ ಮಾಡಲಾಗಿದೆ. ದಾನಿಗಳು ಇದರ ಸೌಲಭ್ಯ ಉಪಯೋಗಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕ ಸಂಖ್ಯೆಗಳು
ಸತೀಶ್, ರೋಟರಿ ರಕ್ತನಿಧಿ, ಶಿವಮೊಗ್ಗ
08182-274333,  9449685360
ಧರಣೇಂದ್ರ ದಿನಕರ್
ಸಂಜೀವಿನಿ ರಕ್ತನಿಧಿ,
ಜೆಪಿಎನ್ ರಸ್ತೆ ಶಿವಮೊಗ್ಗ
9481210866, 9844101866


Get in Touch With Us info@kalpa.news Whatsapp: 9481252093

Tags: Blood BankBlood DonationCorona VirusD S ArunKannadaNewsWebsiteLatestNewsKannadaShivamoggaಕೊರೋನಾ ವೈರಸ್ರಕ್ತದಾನ
Share205Tweet123Send
Previous Post

ಹೊಸಪೇಟೆಯಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗ್ರೌಂಡ್ ರಿಪೋರ್ಟ್

Next Post

ಹೊಸಪೇಟೆ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ: ಆತಂಕ ಬೇಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಪೇಟೆ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ: ಆತಂಕ ಬೇಡ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಹೊಳೆಹೊನ್ನೂರು | ಭದ್ರಾ ನದಿಯಲ್ಲಿ ಮುಳುಗಿ ಚಿತ್ರದುರ್ಗದ ಬಾಲಕ ದುರ್ಮರಣ | ಹೇಗಾಯ್ತು ಘಟನೆ?

ಹೊಳೆಹೊನ್ನೂರು | ಭದ್ರಾ ನದಿಯಲ್ಲಿ ಮುಳುಗಿ ಚಿತ್ರದುರ್ಗದ ಬಾಲಕ ದುರ್ಮರಣ | ಹೇಗಾಯ್ತು ಘಟನೆ?

May 5, 2026
ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

May 4, 2026
ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

May 4, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ ಸತತ ಮೂರನೇ ಬಾರಿಗೆ ಆಯ್ಕೆ

May 4, 2026
ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL