Wednesday, November 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಬ್ರಾಹ್ಮಣರು ಎಂದಿಗೂ ಅಭಿಮಾನ ಬಿಡಬಾರದು: ಎಚ್.ಎಸ್. ಸಚ್ಚಿದಾನಂದ ಮೂರ್ತಿ ಕರೆ

ಗಣತಿ ವೇಳೆ ಒಳಪಂಗಡ ತಿಳಿಸದೇ, ಬ್ರಾಹ್ಮಣ ಎಂದು ನಮೂದಿಸಿ

March 7, 2020
in ದಾವಣಗೆರೆ
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚನ್ನಗಿರಿ: ನಮ್ಮ ಒಳಪಂಗಡಗಳ ಬೇಧ ಮರೆತು ನಾವು ಬ್ರಾಹ್ಮಣರು ಎಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ನಾವು ಎಂದಿಗೂ ಅಭಿಮಾನ ಬಿಡಬಾರದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಕರೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭೆಯವರು ಶ್ರೀರಾಘವೇಂದ್ರ ಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ ಗಣತಿಗೆ ಬಂದಾಗ ಸಾಮಾನ್ಯವಾಗಿ ವಿಪ್ರ ಕುಟುಂಬಗಳು ಮಾಹಿತಿ ನೀಡುವ ಸಂದರ್ಭದಲ್ಲಿ ಒಳಪಂಗಡದ ಹೆಸರು ನೀಡುತ್ತಾರೆ. ಹೀಗಾಗಿ ನಮ್ಮವರ ಅಂಕಿಸಂಖ್ಯೆ ಮಾಹಿತಿ ಸರಿಯಾಗಿ ಸಿಕ್ಕುತ್ತಿಲ್ಲ. ಆದುದರಿಂದ ಬ್ರಾಹ್ಮಣ ಎಂದು ನಮೂದಿಸಿ ಬರೆಸಬೇಕು ಎಂದರು.

ನಮ್ಮ ವಿಪ್ರ ಸಮುದಾಯದ ಏಳಿಗೆಗೆ ಈಗಾಗಲೇ ಹಲವು ಯೋಜನೆ ಜಾರಿಗೊಳಿಸಲಾಗಿದೆ. ಅದರಲ್ಲಿ ಜಾತಿ ಪ್ರಮಾಣಪತ್ರ ಪಡೆಯಲು ಯಾವುದೇ ಅಡ್ಡಿಯಿಲ್ಲ. ಏನಾದರೂ ತೊಂದರೆಯಾದಲ್ಲಿ ನನಗೆ ಫೋನ್ ಮಾಡಿ ನಿಮಗೆ ಸೂಕ್ತ ಮಾರ್ಗದರ್ಶನ ನೀಡುತ್ತೇನೆ ಎಂದಿದ್ದಾರೆ.

ಪ್ರಸ್ತುತ ಮೂರು ಯೋಜನೆಗಳನ್ನು ಮಾರ್ಚ್ ಅಂತ್ಯದೊಳಕ್ಕೆ ಜಾರಿಗೆ ತರುತ್ತಿದ್ದೇವೆ. ಅದರಲ್ಲಿ ಹೂಬತ್ತಿ, ಉಪ್ಪಿನಕಾಯಿ ಮುಂತಾಗಿ ಸಣ್ಣಪುಟ್ಟ ಗೃಹ ಕೈಗಾರಿಕೆ ಮಹಿಳೆಯರಿಗೆ ಇಪ್ಪತ್ತೈದು ಸಾವಿರ ರೂಪಾಯಿಗಳ ಅನುದಾನ ನೀಡುವ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮುಖಾಂತರ ಉದ್ಘಾಟಿಸಲಾಗುವುದು ಎಂದರು.

ನಾನು ಆರ್’ಎಸ್’ಎಸ್ ಹಾಗೂ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಪ್ರಸ್ತುತ ಮಂಡಳಿಯ ಅಧ್ಯಕ್ಷ ಹೊಣೆ ವಹಿಸಿಕೊಂಡಿರುವೆ. ಈ ಮೊದಲು ಕೇವಲ ತಮ್ಮ ವಿಪ್ರ ಹಿತ ಚಿಂತನೆಗೆ ಅವಕಾಶವೇ ಸಿಕ್ಕಿರಲಿಲ್ಲ. ಹಳೇಬೀಡಿನಲ್ಲಿ ತಂದೆಯವರು ಶಾನುಭೋಗರಾಗಿದ್ದರು. ಅಲ್ಲಿಂದ ಐಟಿಐ ಓದಿಕೊಂಡು ಬೆಂಗಳೂರಿಗೆ ಬಂದು ಜೀವನ ಸಾಗಿಸಿದೆ. ನಂತರ ರಾಜಕೀಯ ಪ್ರವೇಶ ಪಡೆದೆ ಎಂದು ತಮ್ಮ ಸಾಮಾಜಿಕ, ರಾಜಕೀಯ ಪಯಣದ ಅನುಭವ ಹಂಚಿಕೊಂಡರು.

ಪ್ರಸ್ತುತ ಮಂಡಳಿಯ ಜವಾಬ್ದಾರಿಯಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿದಾಗ ವಿಪ್ರರ ನೋವು ನಲಿವುಗಳು ಸಂವೇದನೆಗೆ ಸಿಕ್ಕವು. ನಿಜಕ್ಕೂ ಮೂರು ವರ್ಷಗಳ ಅವಧಿಯಲ್ಲಿ ಜನಪ್ರಿಯ ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಮಂಡಳಿಯ ಯೋಜನೆಗಳನ್ನು ಸಾರ್ಥಕ ಜಾರಿಗೆ ತರುತ್ತೇನೆ. ಇದಕ್ಕೆ ರಾಜ್ಯದ ಎಲ್ಲ ವಿಪ್ರ ಸಂಘಟನೆಗಳ ಬೆಂಬಲ, ಸಹಕಾರ ನೀಡಬೇಕು ಎಂದು ಕೋರಿದರು.

ರಾಜ್ಯ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶ್ರೀ ದಿನೇಶ್ ಜೋಷಿ ಅಬಸೆ ಅವರು ಮಾತನಾಡಿ, ವಿಪ್ರ ಸಮುದಾಯದ ಹಿತವನ್ನು ಯಾವ ಸರ್ಕಾರವೂ ಕಡೆಗಣಿಸುವ ಹಾಗಿಲ್ಲ. ನಾವೂ ದೇಶದ ನಾಗರಿಕರೇ. ನಮ್ಮನ್ನೂ ಸರ್ಕಾರ ಮುಖ್ಯವಾಹಿನಿಯಲ್ಲಿ ಇರುವಂತೆ ನೋಡಿಕೊಳ್ಳಬೇಕಾದದ್ದು ಅಗತ್ಯ. ಅದಕ್ಕೆ ಸೂಕ್ತವಾದ ಸವಲತ್ತುಗಳನ್ನು ಎಲ್ಲ ಸಮುದಾಯಕ್ಕೆ ನೀಡಿದಂತೆ ವಿಪ್ರ ಸಮುದಾಯಕ್ಕೂ ಕಾಲಕಾಲಕ್ಕೆ ಸಮಯೋಚಿತ ನೀಡಬೇಕಿದೆ. ಈಗ ಮಂಡಳಿಗೆ ಒಬ್ಬ ಸಮರ್ಥ ಅಧ್ಯಕ್ಷರು ದೊರಕಿದ್ದಾರೆ. ತಮ್ಮ ಆತ್ಮೀಯ ಸಂಬಂಧಗಳ ಮೂಲಕ ಅಧಿಕಾರಿಗಳು, ಮುಖ್ಯಮಂತ್ರಿಗಳು, ರಾಜಕೀಯ ಧುರೀಣರು, ವಿಪ್ರ ಹಿರಿಯರ ಮೂಲಕ ಬ್ರಾಹ್ಮಣ ಅಭಿವೃದ್ಧಿ ಮಾಡಲು ಶಕ್ತರಾಗಿದ್ದಾರೆ ಎಂದರು.

ದಾವಣಗೆರೆ ಜಿಲ್ಲಾ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷ ಶ್ರೀ ಬಿ.ಟಿ. ಅಚ್ಯುತ ಅವರು ಮಾತನಾಡಿ, ಸಂಘಟನೆಯ ಕಲಾವಂತಿಕೆಯನ್ನು ಚನ್ನಗಿರಿ ವಿಪ್ರ ಸಮಾಜದಿಂದ ಕಲಿಯಬೇಕಿದೆ. ಕೇವಲ ಬೆರಳೆಣಿಕೆಯ ವಿಪ್ರ ಕುಟುಂಬಗಳಿದ್ದರೂ ಯಾರೂ ಗೈರು ಹಾಜರಾಗದೇ ಸಭೆ, ಸಮ್ಮೇಳನಕ್ಕೆ ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀ ಪಿ. ರಂಗನಾಥ ರಾಯರು ಮಂಡಳಿ ವತಿಯಿಂದ ಏನೇ ಕಾರ್ಯಗಳು ಆಗಬೇಕು ಎಂದು ತಾಲೂಕಿನ ವಿಪ್ರ ಸಮುದಾಯ ತಮ್ಮನ್ನು ಸಂಪರ್ಕಿಸಿದಲ್ಲಿ ಮಂಡಳಿಯೊಂದಿಗೆ ವ್ಯವಹರಿಸಿ ಸೂಕ್ತ ಕ್ತಮಕೈಗೊಳ್ಳಲು ತಾವು ಸದಾ ಸಿದ್ಧವಿರುವುದಾಗಿ ಭರವಸೆ ನೀಡಿದರು.

ನಂತರ ತಾಲೂಕು ಸಭಾವತಿಯಿಂದ ಸಚ್ಚಿದಾನಂದಮೂರ್ತಿಯವರಿಗೆ ರಂಗನಾಥರಾಯರು ಶಾಲು ಹೊದಿಸಿ, ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಅವರು ಫಲಪುಷ್ಪ ನೀಡಿ ಅಭಿನಂದಿಸಿದರು.

ಶ್ರೀ ರಾಘವೇಂದ್ರಸ್ವಾಮಿ ಸೇವಾ ಸಮಿತಿ ಟ್ರಸ್ಟ್‌ ವತಿಯಿಂದ ಅಧ್ಯಕ್ಷ ಶ್ರೀಕೃಷ್ಣ ಉಪಾಧ್ಯ ಶಾಲು, ಫಲಪುಷ್ಪ ನೀಡಿ ಮಂಡಳಿ ಅಧ್ಯಕ್ಷರಿಗೆ ಅಭಿನಂದಿಸಿದರು. ಬಿ.ಟಿ. ಅಚ್ಯುತ ಮತ್ತು ದಿನೇಶ್ ಜೋಷಿ ಅವರನ್ನೂ ಕೂಡ ಆತ್ಮೀಯವಾಗಿ ಸತ್ಕರಿಸಲಾಯಿತು.

ವಿದ್ವಾನ್ ಜಯಶಂಕರ ಶಾಸ್ತ್ರಿ ತಂಡದವರಿಂದ ಮೊದಲಿಗೆ ವೇದಘೋಷ ನಡೆಯಿತು. ವಿಪ್ರ ಮಹಿಳೆಯರು ಅತ್ಯಂತ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಕ್ಕೆ ರಾಜ್ಯಾಧ್ಯಕ್ಷರು ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಪ್ರ ಹಿತ ಚಿಂತನೆ ಕುರಿತು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಹಿರಿಯ ಸಲಹಾ ಸಂಪಾದಕ ಡಾ. ಎನ್ ಸುಧೀಂದ್ರ, ಲೇಖಕ ಶ್ರೀಗುರುರಾಜ್ ಮತ್ತು ಶ್ರೀಮತಿ ಉಮಾ ಫಣಿರಾಜ್ ತಮ್ಮ ಅನಿಕೆಗಳನ್ನು ಹಂಚಿಕೊಂಡರು. ಶ್ರೀರಾಘವೇಂದ್ರ ಸೇವಾ ಸಮಿತಿ ಟ್ರಸ್ಟಿನ ಶ್ರೀ ಸಿ.ವಿ. ಸುಮತೀಂದ್ರ ಅವರು ಚನ್ನಗಿರಿಯ ವಿಪ್ರ ಕುಟುಂಬಗಳ ಚಿತ್ರಣ ನೀಡಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಹವ್ಯಕ ಸಮಾಜದ ಮಾಜಿ ಕಾರ್ಯದರ್ಶಿ ಶ್ರೀ ಕೆ.ಜಿ. ಮಂಜುನಾಥ ಶರ್ಮ ಅವರು ವಿಪ್ರ ಹಿತಚಿಂತನೆಗಳ ಬಗ್ಗೆ ಮಂಡಳಿಯ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದರು.

ಮಂಡಳಿಯ ಅಧ್ಯಕ್ಷರಿಗೆ ಬ್ರಾಹ್ಮಣ ಮಹಾಸಭಾದ ವತಿಯಿಂದ ಸಾರ್ವಜನಿಕ ಸ್ವಾಗತ ಕೋರಲಾಯಿತು. ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶ್ರೀಚಿದಂಬರ ದೀಕ್ಷಿತ್ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಶ್ರೀರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಅರ್ಚನೆ ಮಂಗಳಾರತಿ ಸೇವೆಯಲ್ಲಿ ಅಧ್ಯಕ್ಷರು ಭಕ್ತಿಯಿಂದ ಪಾಲ್ಗೊಂಡಿದ್ದರು. ಶ್ರೀಮತಿ ಲಕ್ಷ್ಮೀ ಶ್ರೀಧರ್ ಅವರು ಪ್ರಾರ್ಥಿಸಿ, ತಾಲೂಕು ಸಭಾದ ಉಪಾಧ್ಯಕ್ಷ ಹಾಗೂ ಹಿರಿಯ ಸಂಶೋಧಕ ಶ್ರೀ ಸಂತೇಬೆನ್ನೂರು ಸುಮತೀಂದ್ರ ನಾಡಿಗ್ ಸ್ವಾಗತ ಬಯಸಿದರು. ಸಭಾದ ನಿರ್ದೇಶಕಿ ಶ್ರೀಮತಿ ಉಮಾ ಫಣಿರಾಜ್ ಆಭಾರ ಮನ್ನಣೆ ಮಾಡಿ, ಶ್ರೀ ಅರುಣ್ ಕಾರ್ಯಕ್ರಮ ನಿರೂಪಿಸಿದರು.

(ವರದಿ: ಡಾ.ಸುಧೀಂದ್ರ)

Get in Touch With Us info@kalpa.news Whatsapp: 9481252093

Tags: Bayalu Seeme NewsBrahminsChannagiriDavanagereH S Sachidananda MurthyKannada News WebsiteLatestNewsKannadaMalnad NewsState Brahmin Development BoardVipra communityಎಚ್.ಎಸ್. ಸಚ್ಚಿದಾನಂದ ಮೂರ್ತಿಚನ್ನಗಿರಿಬ್ರಾಹ್ಮಣ ಮಹಾಸಭೆರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮವಿಪ್ರ ಸಮುದಾಯ
Previous Post

ಪತ್ರಕರ್ತರು ಒಳ್ಳೆಯ ವಿಷಯಗಳನ್ನು ಮಾತ್ರ ಸಮಾಜಕ್ಕೆ ನೀಡಿ: ಡಾ.ವೀರೇಂದ್ರ ಹೆಗ್ಗಡೆ ಕರೆ

Next Post

ಶಾರದಾ ದೇವಿ ಅಂಧರ ವಿಕಾಸ ಶಾಲೆ ಮಕ್ಕಳೊಂದಿಗೆ ಜನ್ಮದಿನ ಆಚರಿಸಿ ಮಾದರಿಯಾದ ಬಿಜೆಪಿ ಮುಖಂಡ ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಾರದಾ ದೇವಿ ಅಂಧರ ವಿಕಾಸ ಶಾಲೆ ಮಕ್ಕಳೊಂದಿಗೆ ಜನ್ಮದಿನ ಆಚರಿಸಿ ಮಾದರಿಯಾದ ಬಿಜೆಪಿ ಮುಖಂಡ ದತ್ತಾತ್ರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

November 19, 2025

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

November 19, 2025

ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ

November 19, 2025

ನಕಲಿ ಕಬ್ಬಿಣದ ಶೀಟ್ ಮಾರಾಟ | ಪ್ರಿಂಟರ್ ಯಂತ್ರ ವಶಕ್ಕೆ | ಪ್ರಕರಣ ದಾಖಲು

November 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

November 19, 2025

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

November 19, 2025

ಅಮಾಯಕರ ಮೇಲೆ ಹಲ್ಲೆ | ಆರೋಪಿಗಳ ಬಂಧನಕ್ಕೆ ರಾಷ್ಟ್ರಭಕ್ತರ ಬಳಗ ಆಗ್ರಹ

November 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!