No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕೆರೆಮನೆ ಪ್ರತಿಷ್ಠಾನದ ಬ್ರಾಂಡ್ ಪ್ರಾಡಕ್ಟ್‌-ಅಭಿನೇತ್ರಿ ನೀಲ್ಕೊಡು…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2020
in Special Articles
0
ಕೆರೆಮನೆ ಪ್ರತಿಷ್ಠಾನದ ಬ್ರಾಂಡ್ ಪ್ರಾಡಕ್ಟ್‌-ಅಭಿನೇತ್ರಿ ನೀಲ್ಕೊಡು…
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಯಕ್ಷಗಾನದ ತ್ರಿವಳಿ ಜಿಲ್ಲೆಗಳಲ್ಲಿ ಒಂದಾದ ಉತ್ತರ ಕನ್ನಡದ ಹೊನ್ನಾವರದ ನೀಲ್ಕೋಡು ಗ್ರಾಮೀಣ ಪ್ರದೇಶದ ಪ್ರತಿಭೆ ಇಂದು ಬಲವಾದ ಕನಸಿನೊಂದಿಗೆ ಮುಗಿಲೆತ್ತರಕ್ಕೆ ಹೆಜ್ಜೆ ಹಾಕುತ್ತಿದೆ.

ಹೌದು.. ಪ್ರಸ್ತುತ ತೆಂಕು ಬಡಗು ಉಭಯ ತಿಟ್ಟುಗಳಲ್ಲಿ ತನ್ನದೇ ಛಾಪೊಂದನ್ನು ಮೂಡಿಸುತ್ತಿರುವ ನೀಲ್ಕೊಡು ಶಂಕರ ಹೆಗಡೆ ಸಮಕಾಲೀನ ಯಕ್ಷಗಾನ ಕಲಾವಿದರ ಪಾಲಿಗೆ ರೋಲ್ ಮಾಡೆಲ್. ಯಾರಾದ್ರೂ ಸ್ತ್ರೀ ಪಾತ್ರಧಾರಿಗಳ ಬಳಿ ನಿಮಗೆ ಯಾವ ಯಕ್ಷಗಾನ ಕಲಾವಿದ ಇಷ್ಟ ಎಂದು ಕೇಳಿದ್ರೆ ಕಲಾವಿದರ ಬಾಯಲ್ಲಿ ಕೇಳಿ ಬರೋ ಕೆಲವೇ ಕೆಲವು ಹೆಸರಲ್ಲೊಂದು ನೀಲ್ಕೋಡು ಶಂಕರ ಹೆಗ್ಡೆ…


ಹೊನ್ನಾವರದ ನೀಲ್ಕೊಡು, ಶಂಕರ್ ಹೆಗ್ಡೆಯವರ ಸ್ವಂತ ಊರು, ಹುಟ್ಟೂರು ಎಲ್ಲವೂ.. ಇವರು ಹುಟ್ಟಿದ್ದು ಮೇ 9 1978.. ಇವರ ತಂದೆ ವಿಶ್ವನಾಥ ಹೆಗ್ಡೆ, ತಾಯಿ ಪಾರ್ವತಿ ಹೆಗ್ಡೆ. ತಮ್ಮ ವಿದ್ಯಾಭ್ಯಾಸವನ್ನು ಎಸ್’ಕೆಪಿ ಸ್ಕೂಲ್ ಅರೆಯಂಗಡಿಯಲ್ಲಿ ಮುಗಿಸಿಕೊಂಡ ಇವರು ಪಿಯುಸಿಗೆ ವಿದ್ಯಾಭ್ಯಾಸ ನಿಲ್ಲಿಸಿ ವೃತ್ತಿ ಜೀವನವನ್ನು ಆರಿಸಿಕೊಳ್ತಾರೆ. ಮಣ್ಣಿನ ಗುಣ, ಕಲೆ, ಜಾನಪದ ಮನುಷ್ಯನ ಮೇಲೆ ಸಹಜವಾಗಿ ಪರಿಣಾಮ ಬೀರುವಂತೆ ಇವರನ್ನು ಬಹುವಾಗಿ ಆಕರ್ಷಿಸಿದ್ದು ಯಕ್ಷಗಾನ.. ಕೌಟುಂಬಿಕವಾಗಿ ಯಾವುದೇ ಯಕ್ಷಗಾನದ ಹಿನ್ನಲೆ ಇಲ್ಲದೇ ಹೋದರೂ, ಇವರು ಯಕ್ಷಗಾನ ಕ್ಷೇತ್ರದಲ್ಲಿ ನೆಲೆಯೂರಿದ್ದಷ್ಟೇ ಅಲ್ಲದೆ ಸದ್ಯ ಇವರ ಹೆಸರು ಎಲ್ಲೆಲ್ಲೂ ಶೈನಿಂಗ್.. ಅಂದ ಹಾಗೆ ನೀಲ್ಕೋಡು ಶಂಕರ ಹೆಗಡೆ ಕರ್ನಾಟಕದ ಪ್ರತಿಷ್ಠಿತ ಯಕ್ಷಗಾನ ಕೇಂದ್ರ ಕೆರೆಮನೆಯ ಶ್ರೀಮಯ ಕಲಾ ಕೇಂದ್ರದ ಬ್ರಾಂಡ್ ಪ್ರಾಡಕ್ಟ್‌..


ಸ್ತ್ರೀ ಪಾತ್ರವಿರಲಿ ಪುರುಷ ವೇಷವಿರಲಿ, ಸೌಮ್ಯ ಗುಣದ್ದಾಗಿರಲೀ ಇನ್ನೊಂದಿರಲಿ, ಯಾವ ಪಾತ್ರಕ್ಕೂ ಸೈ ಎನಿಸಿಕೊಳ್ಳಬಲ್ಲ ಕಲಾವಿದ ನೀಲ್ಕೊಡು, ತಾನೊಬ್ಬ ಭಾಗವತನಾಗಬೇಕೆಂದು ಬಯಸಿ ಸೇರಿದ್ದು ಶ್ರೀಮಯ ಕಲಾಕೆಂದ್ರಕ್ಕೆ. ನಂತರ ಭಾಗವತಿಕೆಯಲ್ಲಿ ತಾನ್ಯಾಕೋ ಮುಂದುವರೆಯೋದು ಸಾಧ್ಯವಿಲ್ಲ ಎಂದೆನಿಸಿ ಯಕ್ಷಗಾನದ ಹೆಜ್ಜೆಗಳನ್ನು ಕಲಿಯೋದಕ್ಕೆ ಪ್ರಾರಂಭಿಸ್ತಾರೆ. ಇವರ ಪ್ರಾರಂಭದ ಗುರುಗಳು ಹೆರಂಜಾಲು ಗೋಪಾಲ ಗಾಣಿಗ, ವಿದ್ವಾನ್ ಗಣಪತಿ ಭಟ್.. ಎ.ಪಿ. ಪಾಠಕ್. ಮುಂದೆ ಕೆರೆಮನೆಯ ಇಡಗುಂಜಿ ಮೇಳದಲ್ಲಿ ಇವರ ಪ್ರಥಮ ವರ್ಷದ ತಿರುಗಾಟ ಪ್ರಾರಂಭವಾಗುತ್ತದೆ. ನಂತರ ಮಂದಾರ್ತಿ ಪೆರ್ಡೂರು ಮೇಳದಲ್ಲಿ 10 ವರ್ಷ, ಸೇರಿದಂತೆ ಇನ್ನಿತರ ಮೇಳಗಳಲ್ಲಿ ಒಟ್ಟು 22 ವರ್ಷಗಳ ಅನುಭವ ಇವರ ಜೋಳಿಗೆಯಲ್ಲಿದೆ. ಇದೀಗ 2020ರಲ್ಲಿ ಮೊದಲ ಬಾರಿಗೆ ಸಾಲಿಗ್ರಾಮ ಮೇಳಕ್ಕೆ ಗ್ರಾಂಡ್ ಎಂಟ್ರಿ ನೀಡೋದರ ಮೂಲಕ 2 ನೆಯ ಇನ್ನಿಂಗ್ಸ್‌ ಮತ್ತೆ ಪ್ರಾರಂಭಿಸಿದ್ದಾರೆ.


ಒಂದೇ ರೀತಿಯ ಪಾತ್ರಗಳಿಗೆ ಸೀಮಿತವಾಗದೆ, ಎಲ್ಲ ರೀತಿಯ ಪಾತ್ರಗಳನ್ನೂ ಸಮರ್ಥವಾಗಿ ನಿಭಾಯಿಸಬಲ್ಲ ಕೌಶಲ್ಯ ಇವರದು. ಕೆಲ ವರ್ಷಗಳ ಹಿಂದೆ ಸಿನಿಮಾ ಕಥೆಯನ್ನಾಧರಿಸಿ ಮೂಡಿ ಬಂದ ದೇವದಾಸರ ಪ್ರಸಂಗ ನಾಗವಲ್ಲಿ ಇವರ ತಿರುಗಾಟದ ವೃತ್ತಿ ಜೀವನದಲ್ಲಿ ಒಂದು ಟರ್ನಿಂಗ್ ಪಾಯಿಂಟ್ ಎಂದೇ ಹೇಳಬಹುದು. ಅಲ್ಲಿಂದ ಯಶಸ್ಸಿನ ನಾಗಾಲೋಟಕ್ಕೆ ಶುರು ಮಾಡಿದ ನೀಲ್ಕೋಡು ಮತ್ತೆಂದೂ ಹಿಂದೆ ನೋಡಿಲ್ಲ. ಇವರ ಕೆಲಸಮಯಗಳ ಅನುಪಸ್ಥಿತಿ ಅಭಿಮಾನಿಗಳ ಪಾಲಿಗೆ ಖಾಲಿ ಖಾಲಿ ಎಂಬ ಭಾವನೆ ಹುಟ್ಟಿ ಹಾಕಿದ್ದು ಸುಳ್ಳಲ್ಲ.


ಟೆಂಟ್ ಮೇಳದಲ್ಲಿ ಈ ವರ್ಷ ಯಶಸ್ಸಿನ ಅಲೆ ಹುಟ್ಟು ಹಾಕಿದ ಪ್ರಸಂಗ ಸಾಲಿಗ್ರಾಮ ಮೇಳದ ದೇವದಾಸ ಈಶ್ವರ ಮಂಗಲರ ಚಂದ್ರಮುಖಿ ಸೂರ್ಯಸಖಿ… ಪ್ರಸಂಗದ ಪ್ರಮುಖ ಪಾತ್ರವಾಗಿರೊ ಸೂರ್ಯಸಖಿ ಹಲವಾರು ಕಾರಣಗಳಿಗಾಗಿ ಯಕ್ಷ ಪ್ರೇಮಿಗಳ ಗಮನ ಸೆಳೆದಿದೆ. ಜನರ ಮನಸಿನಲ್ಲಿ ನೆಲೆಯೂರಿದೆ. ಸೂರ್ಯಸಖಿಯ ಪಾತ್ರ ನೀಲ್ಕೋಡು ಅವರಿಗಾಗಿಯೇ ಸೃಷ್ಠಿ ಮಾಡಿದಂತಿದೆ, ಖಳನಾಯಕಿ ಚಂದ್ರಮುಖಿಗೆ ತದ್ವಿರುದ್ಧವಾಗಿರುವ ಸೌಮ್ಯ, ಶಾಂತ ಕರುಣೆಯ ಹೆಣ್ಣಾಗಿ ಸೂರ್ಯಸಖಿಯ ಪಾತ್ರ ಚಿತ್ರಿಣಗೊಂಡಿದೆ. ದುಷ್ಟಳಾದ ಚಂದ್ರಮುಖಿ ಕೆಟ್ಟದ್ದನ್ನೇ ಬಗೆದ್ರೂ ತನ್ನ ಒಳ್ಳೆಯ ಗುಣಗಳಿಂದಲೇ ಕೆಡುಕನ್ನು ಗೆಲ್ಲುವ ಸೂರ್ಯಸಖಿ ಪಾತ್ರದಲ್ಲಿ ನೀಲ್ಕೋಡು ಶಂಕರ್ ಹೆಗಡೆಯವರ ದೈತ್ಯ ಪ್ರತಿಭೆ ಮತ್ತೊಮ್ಮೆ ಅನಾವರಣಗೊಂಡಿದೆ. ಅಂದ ಹಾಗೆ ಈ ಅಭಿನೇತ್ರಿ ಮೊದಲು ವೇಷ ಹಾಕಿದ್ದು ಮಾಯಾ ಹಿಡಿಂಬೆಯಾಗಿ… ಟೆಂಟ್ ಮೇಳಗಳಲ್ಲಿ ಕಲಾವಿದ ಜನರಿಗೆ ತಲುಪೋದು ಸಾಮಾಜಿಕ ಪ್ರಸಂಗಗಳ ಮೂಲಕ ಅನ್ನೋದು ಇವರ ಅಂಬೋಣ. ಇನ್ನು ಸಿನಿಮಾ ಶೈಲಿಯ ಹಾಡುಗಳು ಯಕ್ಷಗಾನದಲ್ಲಿ ಬಳಕೆಯಾಗುವುದರಿಂದ ಯಕ್ಷಗಾನಕ್ಕೆ ಯಾವುದೇ ರೀತಿಯ ಲೋಪಗಳಾಗಲಾರದು ಅನ್ನೋದು ಅವರ ಅನಿಸಿಕೆ.. ಕಲಾವಿದನ ಅಭಿಮಾನಕ್ಕಾಗಿ ಗುಂಪುಗಳನ್ನು ಮಾಡೋದು ಬೇಡ. ಯಕ್ಷಗಾನ ಕಲೆಗಾಗಿ ಒಂದು ಗುಂಪಾಗೋಣ ಎಂದು ಯಕ್ಷಪ್ರೇಮಿಗಳಲ್ಲಿ ವಿನಂತಿಸಿಕೊಳ್ತಾರೆ.


ಕೆರೆಮನೆ ಪ್ರತಿಷ್ಠಾನದಿಂದ ಯಕ್ಷಗಾನದ ಪ್ರದರ್ಶನಕ್ಕಾಗಿ ಸಿಂಗಾಪುರ್’ನ ಲಾವೊಸೆ, ಫಿಲಿಫೈನ್ಸ್‌’ನ ಬರ್ಮಾ, ದುಬೈನ ಬಹರೈನ್ ಯುಎಸ್’ಎ ಮೊದಲಾದ ದೇಶಗಳನ್ನು ಪ್ರವಾಸ ಮಾಡಿದ್ದಷ್ಟೇ ಅಲ್ಲದೇ ಯಕ್ಷಗಾನದ ಕಂಪನ್ನು ಹೊರನಾಡಿನ ಮಣ್ಣಿನಲ್ಲಿ ಪಸರಿಸಿದ ಹಿರಿಮೆಯೂ ಇವರದು..
ಅಂದ ಹಾಗೆ ನೀಲ್ಕೋಡು ಅವರದು ಪ್ರೇಮ ವಿವಾಹ.. ಡಿಸೆಂಬರ್ 13, 2009ರಲ್ಲಿ ಯಕ್ಷಗಾನದ ಕಲೆಯ ಆಸಕ್ತಿ ಎರಡು ಜೀವಗಳನ್ನು ಬೆಸೆಯುತ್ತೆ. ಇವರ ಪ್ರತಿಭೆಯನ್ನು ಮೆಚ್ಚಿ ಪ್ರೇಮಕ್ಕೆ ಬಿದ್ದವರು ತೃಪ್ತಿ ಶಂಕರ್ ಹೆಗಡೆ ಈ ಪ್ರೇಮ ಹಾಗೂ ದಾಂಪತ್ಯದ ಸಂಕೇತವಾಗಿ ದ್ಯುತಿ ಎಂಬ ಮುದ್ದಾದ ಮಗಳನ್ನು ಹೊಂದಿರುವ ಸಂತೃಪ್ತ ಕುಟುಂಬ ಇವರದು…


ಅಭಿನೇತ್ರಿಯ ಕನಸು…
ಹೊನ್ನಾವರದಲ್ಲೊಂದು ಯಕ್ಷಗಾನ ಕಲಾವಿದರಿಗಾಗಿ, ಅವರ ಖಾಸಗಿ ಕಾರ್ಯಕ್ರಮಗಳಿಗಾಗಿ ಸಭಾಭವನ ನಿರ್ಮಾಣದ ಕನಸು, ಅಶಕ್ತ ಕಲಾವಿದರ ಪಾಲಿಗೆ ನೆರವಿನ ಹಸ್ತ ಚಾಚುವ ಕನಸು, ಕಲೆ ಕಲಾವಿದರ ಕಲ್ಯಾಣಕ್ಕಾಗಿ ಒಂದಷ್ಟು ಸೇವಾಕಾರ್ಯಗಳ ಕನಸು ಇವೆಲ್ಲಾ ಒಟ್ಟಾಗಿ ಪ್ರೇರೇಪಿಸಿದ್ದು ಅಭಿನೇತ್ರಿ ಎಂಬ ಸಂಸ್ಥೆಯೊಂದರ ಹುಟ್ಟಿಗೆ. ತಾನು ಗಳಿಸಿದ ಹೆಸರು ಖ್ಯಾತಿಯನ್ನು ತನ್ನ ಸ್ವಂತ ಉದ್ಧಾರಕ್ಕಾಗಿ ಮಾತ್ರ ಬಳಸಿಕೊಳ್ಳದೇ ಸಮಾಜ ಸೇವೆಯ ಕಾರ್ಯಗಳಿಗೂ ವಿನಿಯೋಗಿಸಿಕೊಳ್ಳುತ್ತಿರುವ ಕೆಲವೇ ಕೆಲವು ಕಲಾವಿದರ ಸಾಲಿನಲ್ಲಿ ನೀಲ್ಕೋಡು ನಿಲ್ಲುತ್ತಾರೆ. ತೃಪ್ತಿ ಹಾಗೂ ನೀಲ್ಕೋಡು ಶಂಕರ್ ಹೆಗ್ಡೆಯವರ ಕನಸಿನ ಕೂಸು ಅಭಿನೇತ್ರಿಗೆ ಇದೀಗ ಮೂರು ವರ್ಷ, ನೀಲ್ಕೊಡು ದಂಪತಿಗಳ ಕಲಾ ಸೇವೆಯ ಕನಸಿನ ಕೂಸಿಗೆ ಅಭಿನೇತ್ರಿ ಅಂತ ನಾಮಕರಣ ಮಾಡಿದವರು ವಿದ್ವಾನ್ ಉಮಾಕಾಂತ್ ಭಟ್. ಕಳೆದೆರಡು ವರ್ಷಗಳಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಸಮಾಜಸೇವೆಗೆ ಬಳಸಿಕೊಂಡ ಸಾರ್ಥಕತೆ ಅಭಿನೇತ್ರಿ ಆರ್ಟ್ ಟ್ರಸ್ಟ್‌ ಇದರದು.


2018 ರಲ್ಲಿ ಮೊದಲನೆಯ ವರ್ಷದಲ್ಲಿ ಅಭಿನೇತ್ರಿ ಆರ್ಟ್ ಟ್ರಸ್ಟ್‌ ವತಿಯಿಂದ ಯಕ್ಷಗಾನದ ಇಬ್ಬರು ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆದಿದೆ. ಆ ವರ್ಷ ಕಲಾವಿದರಿಗೆ 3 ಲಕ್ಷ ರೂಪಾಯಿಯೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2019ರ ಅಕ್ಟೋಬರ್ 13ರಂದು ನಡೆದ ಕಾರ್ಯಕ್ರಮದಲ್ಲಿ ಅಭಿನೇತ್ರಿ ಆರ್ಟ್ ಟ್ರಸ್ಟ್‌’ನಿಂದ ಕಲಾವಿದ ಹಡಿನಬಾಳ್ ಶ್ರೀಪಾದ ಹೆಗಡೆಯವರಿಗೆ 3 ಲಕ್ಷ ರೂ. ಗೌರವಧನ ಹಾಗೂ ಸನ್ಮಾನ ಸಮರ್ಪಣೆಯಾಗಿದೆ. ತ್ರಯಂಬಕ ಇಡುವಾಣಿಯವರಿಗೆ 75 ಸಾವಿರ, ದಿ.ಶ್ರೀ ಶಾಂತಾರಾಮ ಭಂಡಾರಿ ಕುಟುಂಬಕ್ಕೆ 50 ಸಾವಿರ ರೂ. ಧನಸಹಾಯ, ಕೋಟ ಸುರೇಶ್ ಕಣ್ಣಿ ಪ್ರಶಸ್ತಿ ಮೊತ್ತ 10 ಸಾವಿರದ ಒಂದು ರೂಪಾಯಿಗಳು, ಶ್ರೀ ಮೂರೂರು ವಿಷ್ಣು ಭಟ್ಟ ಪ್ರಶಸ್ತಿ ಅಭಿನೇತ್ರಿ ಪ್ರಶಸ್ತಿ- 10 ಸಾವಿರದ ಒಂದು ರೂಪಾಯಿ ನೀಡಲಾಗಿದೆ. ಅಲ್ಲದೆ ಟ್ರಸ್ಟ್‌ನ ಮುಖಾಂತರ ಯಕ್ಷಗಾನ ತರಬೇತಿ ಶಾಲೆಯೂ ನಡೆಯುತ್ತಿದ್ದು ಪ್ರತಿವರ್ಷ ಯಕ್ಷಗಾನ ಕಾರ್ಯಕ್ರಮಗಳನ್ನೂ ಸಂಯೋಜಿಸಲಾಗುತ್ತದೆ.


ಶಂಕರ್ ಹೆಗ್ಡೆಯವರು ಕಲಾವಿದ ಮಾತ್ರವಲ್ಲ, ಉತ್ತಮ ಬರಹಗಾರರು ಹೌದು. ಇವರ ಮುಖಪುಟದ ಗೋಡೆಗಳ ಮೇಲೆ ಕಣ್ಣಾಡಿಸಿದರೆ ಜೀವನಾನುಭವಗಾಳ ಸಾಲುಗಳು, ಸೌಜನ್ಯದ ಮಾತುಗಳು ಕಲೆಯ ಮೇಲಿನ ಪ್ರೀತಿ ಇವೆಲ್ಲವೂ ಗೋಚರಿಸುತ್ತವೆ. ಒಟ್ಟಿನಲ್ಲಿ, ಅಭಿನೇತ್ರಿ ಆಗಸದೆತ್ತರಕ್ಕೆ ಬೆಳೆಯಲಿ, ಕಲೆ ಕಲಾವಿದರನ್ನು ಪೋಷಿಸೋ ಆಲದ ಮರವಾಗಲಿ. ನೀಲ್ಕೋಡು ಶಂಕರ ಹೆಗಡೆ ದಂಪತಿಗಳು ಈ ಮೂಲಕ ಸಮಾಜಮುಖಿಯಾಗಿ ಇನ್ನಷ್ಟು ಸಾಧಿಸುವಂತಾಗಲಿ ಎಂಬುದೇ ನಮ್ಮ ಆಶಯ.


Get in Touch With Us info@kalpa.news Whatsapp: 9481252093

Tags: ArtistHonnavaraKannada News WebsiteLatestNewsKannadaNeelkodu Shankara HegdeShubhashaya JainSpecial ArticleYakshaganaನೀಲ್ಕೋಡು ಶಂಕರ ಹೆಗ್ಡೆಯಕ್ಷಗಾನಶುಭಾಶಯ ಜೈನ್ಸ್ತ್ರೀ ಪಾತ್ರಹೊನ್ನಾವರ
Share203Tweet123Send
Previous Post

ಕಳ್ಳ ನಾಯಕರ ಸ್ವಾರ್ಥಕ್ಕಾಗಿ ಸಿಎಎ ವಿರೋಧಿ ನಿರ್ಣಯದ ಫಲ ಎಂತಹ ಅನಾಹುತ ತಂದೀತು ಗೊತ್ತಾ?

Next Post

ಮತಾಂಧರೇ, ಇದು ನಮ್ಮ ಸಂಸ್ಕೃತಿ: ಹರೇಕಳ ಹಾಜಬ್ಬ ಎಂಬ ಅಮೂಲ್ಯರತ್ನವನ್ನು ಜಗತ್ತಿಗೆ ಪರಿಚಯಿಸಿದ ಪ್ರಧಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತಾಂಧರೇ, ಇದು ನಮ್ಮ ಸಂಸ್ಕೃತಿ: ಹರೇಕಳ ಹಾಜಬ್ಬ ಎಂಬ ಅಮೂಲ್ಯರತ್ನವನ್ನು ಜಗತ್ತಿಗೆ ಪರಿಚಯಿಸಿದ ಪ್ರಧಾನಿ

ಮತಾಂಧರೇ, ಇದು ನಮ್ಮ ಸಂಸ್ಕೃತಿ: ಹರೇಕಳ ಹಾಜಬ್ಬ ಎಂಬ ಅಮೂಲ್ಯರತ್ನವನ್ನು ಜಗತ್ತಿಗೆ ಪರಿಚಯಿಸಿದ ಪ್ರಧಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

February 13, 2026
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

February 13, 2026
ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

February 13, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL