ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಶಿರಾಳಕೊಪ್ಪ |
ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಸ್ಪೋಟ #Blast ಸಂಭವಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ #MithunKumar ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿರುವ ಅವರು, ಸ್ಪೋಟ ಯಾವುದರಿಂದ ಸಂಭವಿಸಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಸುದ್ದಿ ಹಬ್ಬಿರುವಂತೆ ಅಲ್ಲಿ ದೊರೆತ ಬ್ಯಾಗ್’ನಲ್ಲಿ ಯಾವುದೇ ರೀತಿಯ ಒಲೆ ದೊರೆತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಉಮೇಶ್ ಹಾಗೂ ಅವರ ಪತ್ನಿ ರೂಪಾ ಎನ್ನುವವರು ಸಂತೆಗಾಗಿ ಪಟ್ಟಣಕ್ಕೆ ಬಂದಿದ್ದಾರೆ. ದಂಪತಿ ಅಲ್ಲಿ ರಸ್ತೆ ಬದಿಯಲ್ಲಿ ಬ್ಲಾಂಕೆಟ್/ಕಂಬಳಿಯೊಂದನ್ನು ಖರೀದಿಸಿದ್ದಾರೆ. ಮಾರಾಟ ಮಾಡಿದ ವ್ಯಕ್ತಿ ಆಂಟೋನಿ ಹಾಗೂ ಈ ದಂಪತಿ ಪರಿಚಯದವರಾಗಿದ್ದಾರೆ. ಸಂತೆಯಲ್ಲಿ ಖರೀದಿ ಮಾಡಿ ಬರುತ್ತೇವೆ, ಅರ್ಥ ಗಂಟೆ ಬ್ಯಾಗ್ ಇಲ್ಲೇ ಇರಲಿ ಎಂದು ಹೇಳಿ ಬ್ಯಾಗ್ #Bag ಇಟ್ಟು ತೆರಳಿದ್ದಾರೆ. ಅಲ್ಲಿಟ್ಟಿದ್ದ ಬ್ಯಾಗ್’ನಿಂದ ಕೆಲ ಸಮಯದ ನಂತರ ಸ್ಪೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ಯಾರೂ ಸಹ ಸ್ಪಷ್ಟ ಮಾಹಿತಿ ಇಲ್ಲದೇ ಸುಳ್ಳು ಸುದ್ದಿ ಹರಡಿಸಬಾರದು. ಯಾರೇ ಸೂಕ್ಷ್ಮ ಸಂದರ್ಭದಲ್ಲಿ ಸುಳ್ಳು ಮಾಹಿತಿ ಹರಡಿಸಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post