ಶ್ರೀನಗರ: ಅನಂತನಾಗ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಹಾಗೂ ಸೇನಾ ಯೋಧರ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ದೇಶದ ಹೆಮ್ಮೆಯ ಯೋಧ ಮೇಜರ್ ಕೇತನ್ ಶರ್ಮಾ ವೀರಸ್ವರ್ಗ ಸೇರಿದ್ದಾರೆ.
ಅನಂತನಾಗ್ ಜಿಲ್ಲೆಯ ಅಚಬಲ್ ಪ್ರದೇಶದಲ್ಲಿ ಉಗ್ರರು ಅವಿತಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿದ ಯೋಧರು ನಿನ್ನೆ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಮೇಜರ್ ಕೇತನ್ ಶರ್ಮಾ ಅವರು ವೀರಸ್ವರ್ಗ ಸೇರಿದ್ದು, ಈ ವೇಳೆ ಇಬ್ಬರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಲ್ಲದೇ, ಸೇನಾ ಯೋಧರ ಗುಂಡಿಗೆ ಇಬ್ಬರು ಉಗ್ರರ ಸತ್ತಿದ್ದು, ಅವರ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ.
#ChinarCorpsCdr & all ranks salute the supreme sacrifice of Maj Ketan Sharma, the gallant officer, who was martyred fighting terrorists in Op #Badura (#Anantnag) & offer condolences to the bereaved family #Kashmir #IndianArmy @NorthernComd_IA@adgpi@easterncomd@WhiteKnight_ia pic.twitter.com/0fhpFTKiPV
— Chinar Corps – Indian Army (@ChinarcorpsIA) June 17, 2019
ಇನ್ನು, ಇದೇ ಅನಂತನಾಗ್ ಜಿಲ್ಲೆಯ ಬಿಜ್ಬಿಹಾರ ಪಟ್ಟಣದ ಸಮೀಪವಿರುವ ಮರ್ಹಮಾ ಸಂಗಮ್ ಗ್ರಾಮದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಈ ವೇಳೆ ಯೋಧರೊಬ್ಬರು ಗಾಯಗೊಂಡಿದ್ದಾರೆ.
ಇಬ್ಬರು ಅಥವಾ ಮೂವರು ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಮನೆಯೊಂದನ್ನು ಸುತ್ತುವರಿದ ಭದ್ರತಾಪಡೆ ಸಿಬ್ಬಂದಿ ಶರಣಾಗುವಂತೆ ಉಗ್ರರಿಗೆ ಸೂಚಿಸಿದರು. ಆದರೆ, ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ, ಭದ್ರತಾಪಡೆಗಳು ಪ್ರತಿದಾಳಿ ಮಾಡಿದ್ದಾಗಿ ತಿಳಿದುಬಂದಿದೆ.
19 ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಹಾಗೂ ಜಮ್ಮು ಕಾಶ್ಮೀರ ಪೊಲೀಸ್ ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸುತ್ತಿದೆ.
Discussion about this post