ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ಮೇ 23ರವರೆಗೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಇಂದು ಆರೆಂಜ್ ಅಲರ್ಟ್ #OrangeAlert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ #IMDKarnataka ಮಾಹಿತಿ ಪ್ರಕಟಿಸಿದ್ದು, ಜಿಲ್ಲೆಯಾದ್ಯಂತ ಇಂದು ಆರೆಂಜ್ ಅಲರ್ಟ್ ಘೋಷಿಸಿ, ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
ಇನ್ನು ಮೇ 22 ಹಾಗೂ 23ರವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎರಡೂ ದಿನವೂ ಗುಡುಗು, ಸಿಡಿಲು ಸಹಿತ ಮಳೆ #HeavyRain ಸುರಿಯುವ ಸೂಚನೆ ನೀಡಲಾಗಿದೆ.ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಬೇಸಿಗೆಯಿಂದ ಬಳಲಿ ಬೆಂಡಾಗಿದ್ದ ಮಲೆನಾಡಿಗೆ ತಂಪನೆರೆದಿದೆ.
ಇನ್ನು, ಶಿವಮೊಗ್ಗ ನಗರ ಹಾಗೂ ಭದ್ರಾವತಿ ಸೇರಿದಂತೆ ಹಲವು ತಾಲೂಕುಗಳಲ್ಲಿ ಇಂದು ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗುವ ಆತಂಕವೂ ಸಹ ಇದೆ.
Also read: ಲೈಂಗಿಕ ದೌರ್ಜನ್ಯ ಕೇಸ್ | ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರು
ಇದರೊಂದಿಗೆ ಸಾಗರ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲೂ ಸಹ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post