ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ರಾಮ ಜನ್ಮಭೂಮಿ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದು, ರಾಮಮಂದಿರ ನಿರ್ಮಾಣವಾಗುವ ಕಾರ್ಯಕ್ಕೆ ಚಾಲನೆ ದೊರೆತ ಬೆನ್ನಲ್ಲೇ, ಭಯೋತ್ಪಾದಕರ ಕಣ್ಣು ಇಲ್ಲಿಗೆ ಬಿದ್ದಿದೆ.
ಹೌದು… ಗುಪ್ತಚರ ಇಲಾಖೆಯ ವರದಿಯನ್ನಾಧರಿಸಿ ಝೀ ನ್ಯೂಸ್ ವರದಿಯಂತೆ, ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆಯಲ್ಲಿ ಭಾರೀ ವಿದ್ವಂಸಕ ಕೃತ್ಯ ನಡೆಸಲು ಪಾಕಿಸ್ಥಾನ ಮೂಲದ ನಿಷೇಧಿದ ಜೈಷ್ ಎ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸಿದೆ ಎನ್ನಲಾಗಿದೆ.
ಈ ಕುರಿತಂತೆ ಜೈಷ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಟೆಲಿಗ್ರಾಂ ಆಪ್ ಮೂಲಕ ಚಾಟಿಂಗ್ ನಡೆಸಿರುವ ದಾಖಲೆಗಳನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಕಲೆ ಹಾಕಿವೆ ಎಂದು ವರದಿಯಾಗಿದೆ.
ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಸಂಪರ್ಕಿಸುವ ರಸ್ತೆಗಳು ಹಾಗೂ ಎಲ್ಲ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದು, ಜೈಷ್ ಉಗ್ರ ಸಂಘಟನೆಯ ಚಲನವಲನ ಹಾಗೂ ನೆಟ್’ವರ್ಕ್’ಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post