ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಸಂಕಲ್ಪತೊಟ್ಟಿರುವ ಕೇಂದ್ರ ಚುನಾವಣಾ ಆಯೋಗ, Election Commission of India ಈ ಬಾರಿ ಹಲವು ಹೊಸ ಕ್ರಮಗಳ ಜಾರಿಗೆ ಮುಂದಾಗಿದೆ.
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಭಾಗವಾಗಿ ಮಹತ್ವದ ಕ್ರಮ ಕೈಗೊಂಡಿರುವ ಆಯೋಗ ಸುಳ್ಳು ಸುದ್ದಿ ಹರಡುವವರಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.
ಚುನಾವಣೆ ವೇಳೆಯಲ್ಲಿ ಯಾರೇ ಆದರೂ ಸಾಮಾಜಿಕ ಜಾಲತಾಣ ಸೇರಿದಂತೆ ಅಂತರ್ಜಾಲದಲ್ಲಿ ಯಾವುದೇ ರೀತಿಯಲ್ಲಿ ಸುಳ್ಳು ಸುದ್ದಿ ಹರಡುವಂತಿಲ್ಲ. ಟೀಕಿಸುವ ಹೆಸರಿನಲ್ಲಿ ಸುಳ್ಳು ಸುದ್ದಿ ಹರಡಿಸಿದರೆ ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದೆ.
Also read: ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ
ಆಯೋಗ ಸೇರಿದಂತೆ ಎಲ್ಲರನ್ನೂ ಟೀಕಿಸುವ ಹಕ್ಕಿದೆ. ಆದರೆ, ಟೀಕಿಸುವ ಭರದಲ್ಲಿ ಸುಳ್ಳು ಸುದ್ದಿ ಹರಡುವ ಕೆಲಸ ಮಾಡಿದರೆ ಐಟಿ ಕಾಯ್ದೆ ಅಡಿಯಲ್ಲಿ ಕ್ರಮ ನಿಶ್ಚಿತ ಎಂದರು.
ಪತ್ರಿಕೆ, ಟಿವಿ ಸೇರಿದಂತೆ ಎಲ್ಲ ಮಾಧ್ಯಮಗಳೂ ಸಹ ಸುದ್ದಿ ಪ್ರಕಟಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಜಾತಿ, ಧರ್ಮ ಆಧಾರಿತ ಪ್ರಚಾರ ನೀಡುವುದಕ್ಕೆ ಅವಕಾಶವಿಲ್ಲ. ಅಲ್ಲದೇ ಪ್ರಮುಖವಾಗಿ ಖಾಸಗೀ ಬದುಕಿನ ಮೇಲೆ ವಾಗ್ದಾಳಿ ನಡೆಸುವುದನ್ನೂ ಸಹ ಆಯೋಗ ಸಹಿಸುವುದಿಲ್ಲ. ಅಂತಹ ಕೆಲಸ ಮಾಡುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post