ಕಲ್ಪ ಮೀಡಿಯಾ ಹೌಸ್ | ಉತ್ತರಾಖಂಡ್ |
ಇಲ್ಲಿನ ಹಲ್ದಾನಿಯಲ್ಲಿ ನಡೆದ ಭಾರೀ ಗಲಭೆ ಪೂರ್ವನಿಯೋಜಿತ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಇದರ ಮಾಸ್ಟರ್ ಮೈಂಡ್ #MasterMind ದೆಹಲಿ ಮೂಲದ ಅಬ್ದುಲ್ ಮಲಿಕ್’ನನ್ನು ಬಂಧಿಸಲಾಗಿದೆ.
ಉತ್ತರಾಖಂಡ್ #Uttarakhand ಪೊಲೀಸರು ಈತನನ್ನು ಬಂಧಿಸಿದ್ದು, ಆರೋಪಿ ವಿರುದ್ಧ ಎನ್’ಎಸ್’ಎ #NSI ಮೊಕದ್ದಮೆ ಹೂಡಿದ್ದಾರೆ.
ಗಲಭೆಗೆ ಕಾರಣವೇನು?
ಸ್ಥಳೀಯ ಪೊಲೀಸ್ ಮೂಲಗಳ ಪ್ರಕಾರ ಅಬ್ದುಲ್ ಮಲಿಕ್ ಕೆಲವು ವರ್ಷಗಳ ಹಿಂದೆ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮದರಸಾವನ್ನು #Madarasa ನಿರ್ಮಿಸಿದ್ದ. ಆನಂತರ ಇದು ಅಕ್ರಮವೆಂದು ಸಾಬೀತಾದ ಹಿನ್ನೆಲೆಯಲ್ಲಿ ಅದನ್ನು ಕೆಡವಲಾಗಿತ್ತು.
ಮದರಸಾವನ್ನು ಕೆಡವಿದ ಹಿನ್ನೆಲೆಯಲ್ಲಿ ಸ್ಥಳೀಯರನ್ನು ಅಧಿಕಾರಿಗಳು ಹಾಗೂ ಪೊಲೀಸರ ವಿರುದ್ಧ ಪ್ರಚೋದಿಸಿ ದಾಳಿ ನಡೆಸುವಂತೆ ಸಂಚು ರೂಪಿಸಿದ್ದ ಎಂದು ವರದಿಯಾಗಿದೆ.
ಪ್ರಾಥಮಿಕ ತನಿಖೆಯ ಆಧಾರದಲ್ಲಿ ಗಲಭೆ #Roits ಈತನ ಪೂರ್ವನಿಯೋಜಿತ ಎಂದು ವರದಿಯಾಗಿದ್ದು, ಈತನ ಫೋನ್ ಕರೆ ಹಾಗೂ ಹಿಂದಿನ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿಯಂತೆ ಅಬ್ದುಲ್ ಮಲಿಕ್ ದೆಹಲಿಯಲ್ಲೂ ಸಹ ಬಹಳಷ್ಟು ಅಕ್ರಮ ಆಸ್ತಿಯನ್ನು ಹೊಂದಿದ್ದಾನೆ ಎಂದು ಹೇಳಲಾಗಿದೆ.
ಇಲ್ಲಿನ ಹಲ್ದಾನಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 5000 ಕ್ಕೂ ಅಧಿಕ ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನಷ್ಟವನ್ನು ದುಷ್ಕರ್ಮಿಗಳಿಂದಲೇ ವಸೂಲಿ ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ.
ಈ ಕುರಿತಂತೆ ಖಡಕ್ ನಿರ್ಧಾರ ಕೈಗೊಂಡಿರುವ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಸಿಸಿ ಕ್ಯಾಮೆರಾ, ವೀಡಿಯೋ ತುಣುಕು ಆಧರಿಸಿ ಹಲವಾರು ಜನರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 5000ಕ್ಕೂ ಅಧಿಕ ಮಂದಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.
ಪ್ರಮುಖವಾಗಿ, ಗಲಭೆಯಿಂದ ಬಹಳಷ್ಟು ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post