ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಐಎಸ್’ಎಲ್ ಕಾರ್ಖಾನೆಯ ಆವರಣದಲ್ಲಿ ಇಂದು ಚಿರತೆಯೊಂದು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಕಾರ್ಖಾನೆ ಒಳಭಾಗದ ಬಿಜಿ ವೇಯಿಂಗ್ ಬ್ರಿಡ್ಜ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸನಿಹದಲ್ಲೇ ಇದ್ದ ಸಿಬ್ಬಂದಿಯೊಬ್ಬರು ಇದರ ಫೋಟೋ ತೆಗೆದಿದ್ದಾರೆ.
ಈ ಕುರಿತಂತೆ ಮಾಹಿತಿ ಪ್ರಕಟಿಸಿರುವ ವಿಐಎಸ್’ಎಲ್ ಕಾರ್ಖಾನೆಯ ಹಿರಿಯ ಅಧಿಕಾರಿ ಪ್ರವೀಣ್ ಕುಮಾರ್ ಅವರು, ಕಾರ್ಖಾನೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ. ಹೀಗಾಗಿ, ಸಿಬ್ಬಂದಿಗಳು ಎಚ್ಚರಿಕೆಯಿಂದ ಇರಬೇಕು. ರಾತ್ರಿ ವೇಳೆಯಲ್ಲಿ ಯಾರೂ ಒಬ್ಬರೇ ಓಡಾಡಬಾರದು ಎಂದು ತಿಳಿಸಿದ್ದಾರೆ.
ಒಂದು ವೇಳೆ ಚಿರತೆ ಮತ್ತೆ ಕಾಣಸಿಕೊಂಡರೆ ತತಕ್ಷಣವೇ ಭದ್ರತಾ ವಿಭಾಗವನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















