No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಕಥೆ, ಕವನ, ಕಾದಂಬರಿಗಳ ಮೂಲಕ ವೈದ್ಯ ಸಾಹಿತ್ಯವನ್ನು ಜನರಿಗೆ ತಲುಪಿಸಿ: ಡಾ.ಶ್ರೀಧರ್ ಕರೆ

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ರಾಜ್ಯ ಕನ್ನಡ ವೈದ್ಯ ಬರಹಗಾರರ 4ನೆಯ ಸಮ್ಮೇಳನಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2023
in Army
0
ಕಥೆ, ಕವನ, ಕಾದಂಬರಿಗಳ ಮೂಲಕ ವೈದ್ಯ ಸಾಹಿತ್ಯವನ್ನು ಜನರಿಗೆ ತಲುಪಿಸಿ: ಡಾ.ಶ್ರೀಧರ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೋಗಿಗಳ ಅನುಭವ ಕಥನಗಳನ್ನು ಬರೆಸುವುದು, ವೈದ್ಯರು #Doctor ತಮ್ಮ ವೃತ್ತಿ ಅನುಭವಗಳನ್ನು ಕಥೆ, ಕವನ ಹಾಗೂ ಕಾದಂಬರಿಗಳ ಮೂಲಕ ವೈದ್ಯ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು 4ನೆಯ ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಕೆ.ಆರ್. ಶ್ರೀಧರ್ ಕರೆ ನೀಡಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಐಎಂಎ ಕರ್ನಾಟಕ ಶಾಖೆ, #IMA ಕನ್ನಡ ವೈದ್ಯ ಬರಹಗಾರರ ಸಮಿತಿ, ಶಿವಮೊಗ್ಗ #Shivamogga ಭಾರತೀಯ ವೈದ್ಯಕೀಯ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ 4ನೆಯ ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನದ ಡಾ.ಕೆ.ಎ. ಅಶೋಕ್ ಪೈ ವೇದಿಕೆಯಲ್ಲಿ ಅವರು ಮಾತನಾಡಿದರು.
ವೈದ್ಯ ಬರಹಗಾರರಿಗೆ ವೈದ್ಯ ಸಾಹಿತ್ಯ ಹೇಗಿರಬೇಕು. ಅದು ಯಾವ ಅಂಶಗಳನ್ನು ಹೊಂದಿರಬೇಕು. ಲೇಖನ ಸಾಮಾನ್ಯ ಓದುಗರ ಮನ ಮುಟ್ಟುವಂತಿರಲು ಬರವಣಿಗೆಯ ಶೈಲಿ ಹೇಗಿರಬೇಕು ಎಂಬುದನ್ನು ತಿಳಿಸಲು ವೈದ್ಯ ಸಾಹಿತ್ಯ ಶಿಬಿರಗಳನ್ನು ರಾಜ್ಯದ ನಾನಾ ಕಡೆಗಳಲ್ಲಿ ಹಮ್ಮಿಕೊಳ್ಳಬೇಕು ಎಂದರು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ರೋಗಿಗಳೊಂದಿಗಿನ ಅವರ ಅನುಭವಗಳನ್ನು ಬರೆಯಲು ಪ್ರೋತ್ಸಾಹಿಸಬೇಕು. ಇದರಿಂದ ಅವರು ಭವಿಷ್ಯದಲ್ಲಿ ವೈದ್ಯ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ. ಅದಕ್ಕಾಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯ ಸಾಹಿತ್ಯದ ಶಿಬಿರಗಳನ್ನು ವರ್ಷಕ್ಕೊಂದು ಅಥವಾ ಎರಡು ಬಾರಿ ಹಮ್ಮಿಕೊಳ್ಳಬೇಕು ಎಂದರು.
ತಂತ್ರಜ್ಞಾನ ಗಾಢವಾಗಿ ನಮ್ಮನ್ನು ಆವರಿಸಿಕೊಳ್ಳುತ್ತಿರುವ ಹೊತ್ತು ಇದು. ವೈದ್ಯಸಾಹಿತ್ಯವನ್ನೂ ಅದು ಬಿಟ್ಟಿಲ್ಲ. ಹೊಸ ಹೊಸ ಮಾಧ್ಯಮಗಳಲ್ಲಿ, ನವೀನ ತಂತ್ರಗಳನ್ನು ಉಪಯೋಗಿಸಿ ಜ್ಞಾನವನ್ನು ವಿಸ್ತರಿಸಲು ನಾವು ಪ್ರಯತ್ನಿಸಬೇಕಿದೆ. ಹಾಗೆ ಮಾಡುವಾಗ ವೈದ್ಯ ಜಗತ್ತಿನ ಮೂಲದ್ರವ್ಯವಾದ ಜೀವಂತಿಕೆಯನ್ನು, ಯಾಂತ್ರಿಕತೆ ಕಬಳಿಸುವ ಅಪಾಯವನ್ನು ಇಲ್ಲದಂತೆ ಮಾಡಲು ವೈದ್ಯ ಸಾಹಿತ್ಯ ಶ್ರಮಿಸಬೇಕು ಎಂದರು.

ಪ್ರಖ್ಯಾತ ಚಿಂತಕ ಡಾ.ರಾಜೇಂದ್ರ ಚೆನ್ನಿ ಮಾತನಾಡಿ, ಇಂಗ್ಲೀಷ್ ಭಾಷೆಗೆ ಮಾತ್ರ ಸೀಮಿತ ಎಂಬಂತಾಗಿರುವ ವೈದ್ಯ ಸಾಹಿತ್ಯವನ್ನು ಕನ್ನಡದ ಮೂಲಕ ಜಗದಗಲ ಪಸರಿಸುವ ಕಾರ್ಯವನ್ನು ವೈದ್ಯ ಸಾಹಿತಿಗಳು ಮಾಡಬೇಕು ಎಂದರು.

ವೈದ್ಯ ಸಾಹಿತ್ಯ ಅಕ್ಷರ ಬಲ್ಲಂತಹ ಎಲ್ಲರಿಗೂ ತಲುಪಬೇಕು. ಕನ್ನಡ ವೈದ್ಯಕೀಯ ಸಾಹಿತ್ಯ, ಬರಹಗಾರರು ನಿರಂತರವಾಗಿ ಕನ್ನಡ ಭಾಷೆಯ ಮೂಲಕ ಜ್ಞಾನ ಭಂಡಾರವನ್ನು ವೃದ್ದಿಸಬೇಕು. ಬರಹ ಎನ್ನುವುದು ಕೇವಲ ಹವ್ಯಾಸವಲ್ಲ. ಅದೊಂದು ಅಭಿವ್ಯಕ್ತಿಯಾಗಿ ಸಾಹಿತ್ಯದ ಮೂಲಕ ಹೊರಹೊಮ್ಮುವ ಒಂದು ದೊಡ್ಡ ಶಕ್ತಿಯಾಗಿದೆ ಎಂದರು.
ವೈದ್ಯರು ಬರಹವನ್ನು ಹವ್ಯಾಸವನ್ನಾಗಿ ನೋಡಬಾರದು. ಮನುಷ್ಯ ಕುಲದಲ್ಲಿ ನಾಗರಿಕತೆ ಸೃಷ್ಠಿಯಾದಾಗಿನಿಂದಲೂ ವಿಶಿಷ್ಟ ರೀತಿಯಲ್ಲಿ ಬೆಳವಣಿಗೆ ಕಾಣುತ್ತಾ ಬಂದಿದೆ. ಮನುಷ್ಯ ಉಗಮವಾದ ನಂತರ ವೈದ್ಯ ಸಾಹಿತ್ಯ ಪ್ರಮುಖವಾದುದಾಗಿದೆ ಎಂದರು.

ಜನ ಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಇರುವ ಅನಾರೋಗ್ಯಕರ ಭ್ರಮೆಗಳನ್ನು ವೈದ್ಯರುಗಳೇ ದೂರ ಮಾಡಬೇಕಿದೆ. ವೈದ್ಯ ಬರಹಗಾರರು ತಮ್ಮ ಈ ಸಾಹಿತ್ಯದ ಮೂಲಕ ಆರೋಗ್ಯ ಸಂಬಂಧಿತ ಸಾಹಿತ್ಯವನ್ನು ಸರಳವಾಗಿ ಜನರಿಗೆ ತಿಳಿಸಬೇಕು ಎಂದರು.

ಇನ್ನು, ವೈದ್ಯ ವೃತ್ತಿಯಲ್ಲಿ ನೈತಿಕತೆಯೊಂದಿಗೆ ಮಾನವೀಯ ನೆಲೆಯ ಆಧಾರದಲ್ಲಿ ನೋಡಿ ತುರ್ತು ಸಂದರ್ಭಗಳಲ್ಲಿ ನಿರ್ಧಾರ ಕೈಗೊಳ್ಳಬೇಕು. ವೃತ್ತಿ ನೈತಿಕತೆ ಎಷ್ಟು ಮುಖ್ಯವೋ, ಮಾನವೀಯತೆಯೂ ಸಹ ಅಷ್ಟೇ ಮುಖ್ಯ ಎಂದರು.
ಖ್ಯಾತ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ವೀಣಾ ಭಟ್ ಅವರು ರಾಜ್ಯ ಕನ್ನಡ ವೈದ್ಯ ಬರಹಗಾರರ 4ನೆಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.

ವೈದ್ಯ ಸಾಹಿತ್ಯ ಎನ್ನುವುದು ವಿಶಾಲವಾದ ಅವಕಾಶವಾಗಿದೆ. ಇದರಲ್ಲಿ ಕನ್ನಡ ವೈದ್ಯ ಸಾಹಿತ್ಯ ಹೆಚ್ಚು ಹೆಚ್ಚು ಹೊರಬರಬೇಕಿದೆ. ಇದಕ್ಕಾಗಿ ಅಧ್ಯಯನಗಳು ಹೆಚ್ಚಾಗಬೇಕು. ಮಾತ್ರವಲ್ಲ ಇಂತಹ ಸಮ್ಮೇಳನಗಳು ಹೆಚ್ಚು ಹೆಚ್ಚು ನಡೆಯುವ ಮೂಲಕ ಇದರ ಅವಕಾಶಗಳು ಮತ್ತಷ್ಟು ಸೃಷ್ಠಿಯಾಗಬೇಕು ಎಂದರು.

ಹಿರಿಯ ಮನೋವೈದ್ಯ, ವೈದ್ಯ ಸಾಹಿತಿ ಡಾ.ಸಿ.ಆರ್. ಚಂದ್ರಶೇಖರ್ ಅವರು ಮಾತನಾಡಿ, ಡಾ.ಡಿ.ಎಸ್. ಶಿವಪ್ಪ ಅವರು 60 ಸಾವಿರ ಪದಗಳನ್ನು ಕನ್ನಡ ವೈದ್ಯ ಸಾಹಿತ್ಯಕ್ಕೆ ಸೃಷ್ಠಿ ಮಾಡಿದ್ದಾರೆ. ಹಂಪಿ ವಿಶ್ವವಿದ್ಯಾಲಯ ಹಾಗೂ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಜೊತೆಗೂಡಿ ವೈದ್ಯ ಸಾಹಿತ್ಯಕ್ಕಾಗಿ ಕಾರ್ಯಗಳು ನಡೆಯುತ್ತಿದ್ದು, ಇದು ನಿರಂತರವಾಗಿ ನಡೆಯಬೇಕು ಎಂದರು.
ಜನ ಸಾಮಾನ್ಯರಿಗೆ ಹೋಲಿಕೆ ಮಾಡಿದರೆ ಇತ್ತೀಚಿನ ದಿನಗಳಲ್ಲಿ ವೈದ್ಯರುಗಳಲ್ಲಿಯೇ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಒತ್ತಡಯುಕ್ತ ಜೀವನ ಶೈಲಿ, ಹವ್ಯಾಸಗಳು ಹಾಗೂ ಅನಿಯಮಿತ ಆಹಾರ ಪದ್ದತಿ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಇವುಗಳನ್ನು ಸರಿಪಡಿಸಿಕೊಳ್ಳುವಲ್ಲಿ ವೈದ್ಯರುಗಳು ಗಮನ ಹರಿಸಬೇಕು ಎಂದು ಕರೆ ನೀಡಿದರು.

ಅದ್ದೂರಿ ಮೆರವಣಿಗೆ
ಸಮ್ಮೇಳನ ಉದ್ಘಾಟನೆಗೂ ಮುನ್ನ ಸರ್ವಾಧ್ಯಕ್ಷ ಡಾ.ಕೆ.ಆರ್. ಶ್ರೀಧರ್ ಹಾಗೂ ಉದ್ಘಾಟನಾಧ್ಯಕ್ಷ ಡಾ.ರಾಜೇಂದ್ರ ಚೆನ್ನಿ ಅವರುಗಳನ್ನು ಕಾಲೇಜಿನ ಆಡಳಿತ ಕಚೇರಿಯಿಂದ ಡಾ.ಅಶೋಕ್ ಪೈ ವೇದಿಕೆವರೆಗೂ ಅದ್ದೂರಿ ಮೆರಣಿಗೆಯ ಮೂಲಕ ಕರೆತರಲಾಯಿತು.
ಮೆರವಣಿಗೆಗೆ ಡೊಳ್ಳು ಕುಣಿತ, ಜಾನಪದ ಕಲಾ ಪ್ರಕಾರಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ತಂಡಗಳು ಮೆರುಗು ನೀಡಿದವು.

ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷರಾದ ಡಾ.ಎಸ್.ಬಿ. ಲಕ್ಕೋಳ, ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಕನ್ನಡ ವೈದ್ಯ ಬರಹಗಾರರ ಸಮಿತಿ ಅಧ್ಯಕ್ಷ ಡಾ.ಶಿವಾನಂದ ಕುಬಸದ್, ಕಾರ್ಯಾಧ್ಯಕ್ಷ ಡಾ.ಬಿ.ಪಿ. ಕರುಣಾಕರ್, ಕಾರ್ಯದರ್ಶಿ ಡಾ.ಕೆ.ಎನ್. ಗುರುದತ್, ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ.ಎಂ.ಎಸ್. ಅರುಣ್, ಕಾರ್ಯದರ್ಶಿ ಡಾ.ರಕ್ಷಾ ರಾವ್, ಸಂಘಟನಾ ಕಾರ್ಯದರ್ಶಿಗಳಾದ ಡಾ.ವಿನಯ ಶ್ರೀನಿವಾಸ್ ಹಾಗೂ ಡಾ.ಕೆ.ಎಸ್. ಶುಭ್ರತಾ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: Indian Medical AssociationKannada News WebsiteLatest News KannadaLocal NewsMalnad NewsMedical literatureShimogaShivamoggaShivamogga NewsState Conference of Kannada Medical Writersಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನಕನ್ನಡ ವೈದ್ಯ ಬರಹಗಾರರ ಸಮಿತಿಭಾರತೀಯ ವೈದ್ಯಕೀಯ ಸಂಘವೈದ್ಯ ಸಾಹಿತ್ಯಶಿವಮೊಗ್ಗ
Share212Tweet124Send
Previous Post

ಸೂರ್ಯನ ಎತ್ತರಕ್ಕೆ ಭಾರತದ ಹಿರಿಮೆ: ಆದಿತ್ಯ ಎಲ್‌1 ಮಿಷನ್ ಯಶಸ್ವಿ ಉಡಾವಣೆ

Next Post

ನೂಲು ಹುಣ್ಣಿಮೆ ಹಿನ್ನೆಲೆ: ಶ್ರೀ ರೇಣುಕಾಂಬ ದೇಗುಲದಲ್ಲಿ ಭಕ್ತರಿಂದ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೂಲು ಹುಣ್ಣಿಮೆ ಹಿನ್ನೆಲೆ: ಶ್ರೀ ರೇಣುಕಾಂಬ ದೇಗುಲದಲ್ಲಿ ಭಕ್ತರಿಂದ ವಿಶೇಷ ಪೂಜೆ ಸಲ್ಲಿಕೆ

ನೂಲು ಹುಣ್ಣಿಮೆ ಹಿನ್ನೆಲೆ: ಶ್ರೀ ರೇಣುಕಾಂಬ ದೇಗುಲದಲ್ಲಿ ಭಕ್ತರಿಂದ ವಿಶೇಷ ಪೂಜೆ ಸಲ್ಲಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL