No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ದಕ್ಷ

ಬುಲೆಟ್ ಸವಾರಿ-14: ಕೊಲೆಗಡುಕ ವೈದ್ಯ ವಿದ್ಯಾರ್ಥಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 23, 2018
in ದಕ್ಷ
0
Share on FacebookShare on TwitterShare on WhatsApp

1990

ಕೆಲವೊಮ್ಮೆ ಯಾವುದೇ ಸುಳಿವು ಬಿಡದೆ ಹೋದರೂ ಕೊಲೆಗಾರರು ಸಿಕ್ಕಿ ಬೀಳುತ್ತಾರೆ. ಕೊಲೆಗಾರರು ನಮ್ಮ ಕಣ್ಣೆದುರಿಗೇ ಇದ್ದರೂ ಬೇಗ ಬಲೆಗೆ ಬೀಳುವುದಿಲ್ಲ. ಪಂಜಾಬ್‌ನ ಪ್ರಖ್ಯಾತ ವೈದ್ಯರೊಬ್ಬರು ಬೆಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳಿಂದ ದಾರುಣವಾಗಿ ಕೊಲೆಯಾದ ಘಟನೆ ಇದಕ್ಕೊಂದು ಉದಾಹರಣೆ. ಕುತೂಹಲದ ಸಂಗತಿ ಏನೆಂದರೆ, ರಾಷ್ಟ್ರಪತಿ ಗ್ಯಾನಿ ಜೈಲ್‌ಸಿಂಗ್ ಅವರ ಖಾಸಾ ಮೊಮ್ಮಗ ಹಂತಕರ ನಡುವೆಯೇ ಇದ್ದ! ಕೊಲಡ ನಡೆದಿದ್ದು ಆತನದೇ ಕಾರಿನಲ್ಲಿ!!

ಅವತ್ತು ನಾನು ಯಾವುದೋ ಪ್ರಕರಣದ ಮಾಹಿತಿ ನೀಡಲು ಕ್ರೈಂ ಡಿಸಿಪಿ ಕಚೇರಿಗೆ ಹೋಗಿದ್ದೆದ. ಡಿಸಿಪಿ ಎದುರು ಹೆಂಗಸರೊಬ್ಬರು ಬಿಕ್ಕಳಿಸುತ್ತಿದ್ದುದು ಕಂಡು ಬಂತು. ನಹಾನು ಕುತೂಹಲದಿಂದ ‘ಏನಂತೆ ಸಾರ್ ಇವರ ಪ್ರಾಬ್ಲಂ,’ ಎಂದೆ. ಆಗ ಡಿಸಿಪಿಯವರು ‘ಇವರ ಗಂಡ ಡಾ.ಪ್ಯಾರಾ ಸಿಂಗ್ ಎಂಬುವರು ಮಗನನ್ನು ಮೆಡಿಕಲ್ ಕಾಲೇಜಿಗೆ ಸೇರಿಸಲು ಪಂಜಾಬ್‌ನಿಂದ ಬೆಂಗಳೂರಿಗೆ ನಿಗೂಢವಾಗಿ ನಾಪತ್ತೆಯಾಗಿದ್ದಾರಂತಲ್ಲ,’ ಎಂದರು. ನನಗೆ ತಕ್ಷಣ, ದಾವಣಗೆರೆ ಬಳಿ ಸರ್ದಾಜಿಯೊಬ್ಬರ ಮೃತ ದೇಹ ಪತ್ತೆಯಾದ ಸುದ್ದಿ ಪತ್ರಿಕೆಯಲ್ಲಿ ಬಂದಿದ್ದು ಫ್ಲ್ಯಾಷ್ ಆಯಿತು. ಅವರಿಗೆ ಆ ವಿಷಯ ತಿಳಿಸಿದೆ. ಅಲ್ಲಿಂದ ತನಿಖೆ ವೇಗ ಪಡೆದುಕೊಂಡಿತು. ಹಂತಕರ ಪತ್ತೆಗೆ ಹಲವಾರು ಪೊಲೀಸ್ ತಂಡಗಳನ್ನು ರಚಿಸಿ, ಕೊನೆಗೆ ಕೊಲೆಗಡುಕರು ನನ್ನ ಕೈಗೇ ಸಿಕ್ಕಿಬಿದ್ದರು.

ಡಾ.ಪ್ಯಾರಾ ಸಿಂಗ್ ಅಮೃತಸರದಲ್ಲಿ ದೊಡ್ಡ ಕ್ಲಿನಿಕ್ ನಡೆಸುತ್ತಿದ್ದರು. ಅವರ ಪತ್ನಿಯೂ ವೈದ್ಯೆಯಾಗಿದ್ದರು. ಮಗನಿಗೆ ಪ್ರತಿಷ್ಠಿತ ಮೆಡಿಕಲ್ ಕಾಲೇಜೊಂದರಲ್ಲಿ ಸೀಟು ಕಾಲೇಜಿಗೆ ಡೊನೆಷನ್ ತುಂಬಲೆಂದು 2 ಲಕ್ಷ 30 ಸಾವಿರ ರೂ. ತೆಗೆದುಕೊಂಡು 1990ರ ಜೂನ್ 14ರಂದು ಬೆಂಗಳೂರಿಗೆ ಆಗಮಿಸಿ ಹೋಟೆಲ್ ರಾಜ್‌ಮಹಲ್‌ನಲ್ಲಿ ಉಳಿದುಕೊಂಡಿದ್ದರು. ಪಂಜಾಬ್‌ನಲ್ಲಿಯೇ ಇದ್ದ ಅವರ ಆಪ್ತಮಿತ್ರ ಡಾ|ರಾಮ್ ಲುಬಿಯಾ ಸುಂದರ್ ಎಂಬುವರ ಮಗ ಚಂದನ್ ಸಿಂಗ್ ಆದಾಗಲೇ ಆ ಕಾಲೇಜಿನಲ್ಲಿ ಓದುತ್ತಿದ್ದ. ಹಣ ಕಟ್ಟಲು ತಮ್ಮ ಮಗನ ನೆರವು ಪಡೆಯುವಂತೆ ಸುಂದರ್ ತಿಳಿಸಿದ್ದರು. ಅದರಂತೆ ಪ್ಯಾರಾ ಸಿಂಗ್ ಅವರು ಚಂದನ್‌ನನ್ನು ಸಂಪರ್ಕಿಸಿದರು. ಆತ, ಮರುದಿನ ಬೆಳಗ್ಗೆ ಕರೆದುಕೊಂಡು ಹೋಗುತ್ತೇನೆ ಎಂದ.

ಹೋಟೆಲ್ ರೂಮ್‌ನಲ್ಲಿ ಪ್ಯಾರಾ ಸಿಂಗ್, ತಮ್ಮ ಮಗನ ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿದ್ದರೆ… ಆತ್ತ ಚಂದನ್ ಸಿಂಗ್, ಅವರ ಕೊಲೆ ಮಾಡಿ ಡೊನೆಷನ್ ಹಣ ಲಪಟಾಯಿಸಲು ಸಂಚು ರೂಪಿಸುತ್ತಿದ್ದ. ಮರುದಿನ ಬೆಳಗ್ಗೆ ಚಂದನ್ ಹೋಟೆಲ್ ಬಳಿ ಬಂದು ಅವರನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ಹರಟ. ಆ ಕಾರು ಕಾಲೇಜಿನ ಕಡೆ ಹೋಗುವ ಬದಲು, ಆ ದಿನಗಳಲ್ಲಿ ನಿರ್ಜನ ಪ್ರದೇಶವಾಗಿದ್ದ ಕೋರಮಂಗಲದ ಕಡೆಗೆ ಸಾಗಿತು. ಕಾರಿನ ಸೀಟಿನಲ್ಲಿ ಇನ್ನೂ ಇಬ್ಬರು ವಿದ್ಯಾರ್ಥಿಗಳಿದ್ದರು. ಅವರು-ಸಿರಿಯಾ ಮೂಲಕ ಓರಾಬಿ ಅಲಿ ಹುಸೇನ್ ಬಕ್ರಿ ಮತ್ತು ಅಮ್ಜದ್ ಅಲಿ ಹುಸೇನ್ ಬಕ್ರಿ ಸಹೋದರರು. ಆ ಇಬ್ಬರು ಆಗರ್ಭ ಶ್ರೀಮಂತರಾಗಿದ್ದರು. ಹಾಸ್ಟೆಲ್ ಬದಲಿಗೆ ಅವರು, ಪಂಚತಾರಾ ಹೋಟೆಲ್ ಒಂದರಲ್ಲಿ ರೂಮ್ ಮಾಡಿಕೊಂಡಿದ್ದರು! ಕಾರು ಚಲಿಸುತ್ತಿರುವಂತೆಯೇ ಅವರಿಬ್ಬರು ಹಿಂದಿನಿಂದ ಪ್ಯಾರಾ ಸಿಂಗ್ ಅವರ ಕುತ್ತಿಗೆಗೆ ಹಗ್ಗ ಬಿಗಿದರು. ‘ಗೆರೊಟ್ಟೆ’ ಎಂದು ಕರೆಯಲಾಗುವ ಈ ಮರ್ಡರ್ ಸ್ಟೈಲ್ ಆ ದಿನಗಳ ಸಿನಿಮಾಗಳಲ್ಲಿ  88 ಕುಪ್ರಸಿದ್ಧವಾಗಿತ್ತು. ಈ ದಾಳಿಯಿಂದ ಕಂಗೆಟ್ಟ ಸಿಂಗ್ ತಪ್ಪಿಸಿಕೊಳ್ಳಲು ಚಡಪಡಿಸಿದರು. ಆದರೆ ಕೊನೆಗೂ ಸೋತು ಕೊನೆಯುಸಿರೆಳೆದರು.

ದಾವಣಗೆರೆಗೆ ಹೋಗಿ ಅಲ್ಲಿನ ಡ್ಯಾಮ್‌ವೊಂದರ ಬಳಿ ಹೆಣ ಎಸೆಯಲು ಪ್ರಯತ್ನಿಸಿದರಾದರೂ ಜನ ಸಂಚಾರ ಹೆಚ್ಚಿದ್ದ ಕಾರಣ ಸಾಧ್ಯವಾಗಲಿಲ್ಲ. ಕೊನೆಗೆ, ಶಾಮನೂರು ಕೆರೆಗೆ ಶವ ಎಸೆದು ಬಿಟ್ಟರು. ಈ ದೃಶ್ಯವನ್ನು ದೂರದಿಂದ ನೋಡಿದ ಕೆಲವು ರೈತರು ಕಾರಿನ ಬಳಿ ಓಡಿ ಬರುವಷ್ಟರಲ್ಲಿ ಇವರು ಪರಾರಿಯಾಗಿದ್ದರು. ಆದರೆ ಅಲ್ಲಿನ ಜನ ಎಸೆದ ಕಲ್ಲೇಟಿಗೆ ಕಾರಿನ ಹಿಂದಿನ ಗಾಜು ಜಖಂಗೊಂಡಿತು.

ಸಿಂಗ್ ದೂರವಾಣಿ ಕರೆಗೆ ಸ್ಪಂದಿಸದೆ ಇದ್ದಾಗ ಅವರ ಕುಟುಂಬದವರು ಗಾಬರಿಗೊಂಡು ಬೆಂಗಳೂರಿಗೆ ಬಂದರು. ಚಂದನ್‌ನನ್ನು ವಿಚಾರಿಸಿದರೆ, ತಾನು ಅಂದು ಬೆಳಿಗ್ಗೆ ಹೋಟೆಲ್‌ಗೆ ಹೋಗಿದ್ದಾಗ ಅವರು ಅಲ್ಲಿರಲೇ ಇಲ್ಲ ಎಂದ. ಅಷ್ಟೇ ಅಲ್ಲ. ಅವರನ್ನು ಹುಡುಕಲು ಆ ಕುಟುಂಬಕ್ಕೆ ಸಹಾಯ ಮಾಡುವಂತೆ ನಟಿಸಿದ. ಹಾಗಾಗಿ ಆತನ ಬಗ್ಗೆ ಯಾರಿಗೂ ಅನುಮಾನವೇ ಬರಲಿಲ್ಲ. ದಾವಣಗೆರೆಯ ಪೊಲೀಸ್ ತಂಡ ಆತನ ವಿಚಾರಣೆ ನಡೆಸಿ ಹೋಯಿತು. ಬೆಂಗಳೂರಿನ ವಿಶೇಷ ತನಿಖಾ ತಂಡವೂ ವಿಚಾರಿಸಿ, ಆತ ಎಂದು ನಿರ್ಧರಿಸಿತು. ಹಾಗಾಗಿ ತನಿಖೆ ಬೇರೆ ದಿಕ್ಕಿನಲ್ಲಿ ಸಾಗತೊಡಗಿತು.

ಈ ನಡುವೆ ನನ್ನ ಠಾಣೆ ವ್ಯಾಪ್ತಿಯ ಚರ್ಚ್ ಸ್ಟ್ರೀಟ್‌ನ ರಸ್ತೆಯೊಂದರಲ್ಲಿ ಬಿಟ್ಟು ಹೋಗಿದ್ದ ಕಾರೊಂದು ಗಮನಕ್ಕೆ ಬಂತು.
(ಮುಂದುವರೆಯುವುದು)

Tags: Bangalore PoliceBullet SavariDakshaDavanagereKalpa NewsMedical StudentsTiger BB Ashok Kumar
Share196Tweet123Send
Previous Post

ಇದೊಂದು ಜಗತ್ತು: ಕಾಂಬೋಡಿಯಾದ ಲ್ಯಾಂಡ್‌ಮೈನ್‌ಗಳು-7

Next Post

ಇದೊಂದು ಜಗತ್ತು: ಕಾಂಬೋಡಿಯಾದ ಲ್ಯಾಂಡ್‌ಮೈನ್‌ಗಳು-8

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇದೊಂದು ಜಗತ್ತು: ಕಾಂಬೋಡಿಯಾದ ಲ್ಯಾಂಡ್‌ಮೈನ್‌ಗಳು-8

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

June 11, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL