No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ದಕ್ಷ

ಬುಲೆಟ್ ಸವಾರಿ-21: ಮರೆಯಲಾಗದ ಸರ್ಕಸ್ ದುರಂತ-2

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2018
in ದಕ್ಷ
0
Share on FacebookShare on TwitterShare on WhatsApp

ನಿಯಮ ಪ್ರಕಾರ ಆ ಮೈದಾನದಲ್ಲಿ ಸರ್ಕಸ್ ಪ್ರದರ್ಶನಕ್ಕೆ ಅವಕಾಶ ನೀಡಲು ಸಾಧ್ಯವೇ ಇರಲಿಲ್ಲ. ಏಕೆಂದರೆ ಮೈದಾನ ಸಾಕಷ್ಟು ವಿಶಾಲವಾಗಿರಲಿಲ್ಲ. ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಹಾದು ಹೋಗಿತ್ತು. ಸುರಕ್ಷತೆಗೆ ಯಾವ ಕ್ರಮವನ್ನೂ ಕೈಗೊಂಡಿರಲಿಲ್ಲ. ಇಂಥ ಅಪಾಯಕಾರಿ ಸ್ಥಳದಲ್ಲಿ, ಸಾವಿರಾರು ಜನ ಸೇರುವ ಸರ್ಕಸ್‌ನಂಥ ಕಾರ್ಯಕ್ರಮಕ್ಕೆ ಪರ್ಮಿಶನ್ ನೀಡಿದ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳ ಕರ್ತವ್ಯಲೋಪ ಸ್ಪಷ್ಟವಾಗಿತ್ತು.

ಅಧಿಕಾರಿಗಳ ಲಂಚಕೋರತನದಿಂದಾಗಿ ಅಮಾಯಕ ಜನ ಬೆಂಕಿಯಲ್ಲಿ ಬೆಂದು ಹೋಗಬೇಕಾಯಿತು. ಹೈಟೆಕ್ಷನ್ ತಂತಿಯಿಂದಾಗಿ ಬೆಂಕಿ ಹರಡಿತು ಎಂದು ಕೆಲವರು ವಾದಿಸಿದರು. ಸರ್ಕಸ್ ಶೋನ ಕೊನೆಯಲ್ಲಿ ದೇವರಿಗೆ ಆರತಿ ಮಾಡುವಾಗ ಡೇರೆಗೆ ಬೆಂಕಿ ತಗುಲಿತು ಎಂದು ಶಂಕೆ ವ್ಯಕ್ತಪಡಿಸಲಾಯಿತು. ಡೇರೆಯ ಒಳಗೆ ಯಾರೋ ಸಿಗರೇಟ್ ಸೇದಿ ಎಸೆದಿದ್ದೇ ಈ ಅನಾಹುತಕ್ಕೆ ಮೂಲ ಎಂಬ ವಾದವೂ ಕೇಳಿ ಬಂತು. ಈ ದುರ್ಘಟನೆ ಕುರಿತು ಸಮಗ್ರ ತನಿಖೆಗೆ ಸರಕಾರ ಆದೇಶಿಸಿತು. ಆದರೆ ಬೆಂಕಿ ಬೀಳಲು ಮೂಲ ಏನು ಎನ್ನುವುದು ಕೊನೆಗೂ ನಿಗೂಢವಾಗಿಯೇ ಉಳಿಯಿತು. ಈ ಘಟನೆಯಲ್ಲಿ ತಪ್ಪಿತಸ್ಥರಾದ ಯಾರೊಬ್ಬರಿಗೂ ಶಿಕ್ಷೆಯಾಗಲಿಲ್ಲ. ಯಾವ ಅಧಿಕಾರಿಯೂ ಕೆಲಸ ಕಳೆದುಕೊಳ್ಳಲಿಲ್ಲ!

ಈ ಕಹಿ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಆದೇ ವರ್ಷ (1981) ಇದಕ್ಕಿಂತ ಭೀಕರವಾದ ಮತ್ತೊಂದು ದುರಂತ ನಡೆದು ಹೋಯಿತು. ಅದು ಕಳ್ಳಬಟ್ಟಿ ದುರಂತ. ಅಕ್ರಮ ಸರಾಯಿ ಕುಡಿದು ಸುಮಾರು 300 ಜನ ನೊಣಗಳಂತೆ ಹೀನಾಯವಾಗಿ ಸತ್ತುಹೋದರು. ಬೆಂಗಳೂರಿನ ಲಿಂಗರಾಜಪುರ, ಸಗಾಯ್‌ಪುರ, ಮುನಿರೆಡ್ಡಿಪಾಳ್ಯ, ಟ್ಯಾನರಿ ರಸ್ತೆಯ ಸುತ್ತಮುತ್ತಲಿನ ಕೊಳಗೇರಿ ಪ್ರದೇಶಗಳ ಮನೆಮನೆಗಳಲ್ಲಿ ಅಂದು ಸೂತಕದ ಛಾಯೆ ಆವರಿಸಿತ್ತು. ಲಾರಿಗಳಲ್ಲಿ ಹೆಣಗಳನ್ನು ಮರಳಿನಂತೆ ತುಂಬಿ, ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಚಿಂದಿಯ ಮೂಟೆಗಳಂತೆ ಇಳಿಸಲಾಯಿತು.

ಅಲ್ಲಿಯ ವೈದ್ಯರಂತೂ ಪೋಸ್‌ಟ್ಮಾರ್ಟ್‌ಂ ಮಾಡಿ ಮಾಡಿ ಸುಸ್ತಾಗಿ ಕೊನೆಗೆ ಹೆಣ ಕೊಯ್ಯದೆ ಸುಮ್ಮನೆ ಶವಗಳ ಹಣೆಗೊಂದು ಪ್ಲಾಸ್ಟರ್ ಅಂಚಿಸಿ ಯುಡಿಆರ್ ಕೇಸ್ ನಂಬರ್ ಬರೆದು ಕೈತೊಳೆದುಕೊಳ್ಳ ತೊಡಗಿದರು! ಆ ಶವಗಳನ್ನು ವಾರಸುದಾರರಿಗೆ ಒಪ್ಪಿಸುವಾಗಿನ ದೃಶ್ಯನೆನಪಾದರೆ ಇಂದಿಗೂ ನಾನು ದುಃಖಿತನಾಗುತ್ತೇನೆ. ಕೆಲವು ಮನೆಗಳಲ್ಲಿ ಅಪ್ಪ-ಅಮ್ಮ ಇಬ್ಬರೂ ಕಳ್ಳಬಟ್ಟಿ ಕುಡಿದು ಸತ್ತಿದ್ದರು. ಅವರ ಪುಟ್ಟ ಮಕ್ಕಳು ಶವಾಗಾರದ ಬಳಿ ಮುಗ್ಧವಾಗಿ ಕೈಕೈ ಹಿಡಿದುಕೊಂಡು ನಿಂತಿರುತ್ತಿದ್ದರು. ಶವವನ್ನು ಸಂಬಂಧಿಕರಿಗೆ ಒಪ್ಪಿಸುತ್ತಿದ್ದಂತೆ ಆ ಮಕ್ಕಳು ಮೌನವಾಗಿ ರೋದಿಸುತ್ತ ಅವರನ್ನು ಹಿಂಬಾಲಿಸುತ್ತಿದ್ದರು.

ಆ ದಿನಗಳಲ್ಲಿ ಕಳ್ಳಬಟ್ಟಿ ದಂಧೆ ಜೋರಾಗಿತ್ತು. ಇದರಲ್ಲಿ ಕೆಲವು ರಾಜಕಾರಣಿಗಳು ಮತ್ತು ಪೊಲೀಸರೂ ಶಾಮೀಲಾಗಿದ್ದರು. ಇಂಡಸ್ಟ್ರಿಯಲ್ ಸ್ಪರಿಟ್, ಪೇಂಟ್ ಮತ್ತು ವಾರ್ನಿಶ್‌ಅನ್ನು ಸರಾಯಿಯಲ್ಲಿ ಸೇರಿಸುತ್ತಿದ್ದರು. ರಾಸಾಯನಿಕ ಗೊಬ್ಬರವನ್ನೂ ಬೆರೆಸುತ್ತಿದ್ದರು. ಇವೆಲ್ಲವುಗಳ ಮಿಶ್ರಣದಿಂದಾಗಿ ಸರಾಯಿ ಹೆಚ್ಚು ಕಿಕ್ ಕೊಡುತ್ತಿತ್ತು. ಆದರೆ ಮಿಶ್ರಣ ಸ್ವಲ್ಪ ಹದ ತಪ್ಪಿದರೂ ಕುಡುಕರಿಗೆ ಮಾರಣಾಂತಿಕವಾಗುತ್ತಿತ್ತು. ಅಂದು ಆಗಿದ್ದೂ ಇದೇ. ಒಬ್ಬ ಮಹಿಳೆ ಈ ದಂಧೆಯಲ್ಲಿ ಮುಂಚೂಣಿಯಲ್ಲಿದ್ದಳು ಅಮೀರ್ ಸುಲ್ತಾನ್ ಎಂಬಾತ ಕಳ್ಳಬಟ್ಟಿ ಸರಬರಾಜು ಮಾಡುವಲ್ಲಿ ಎಕ್‌ಸ್ಪರ್ಟ್ ಆಗಿದ್ದ. ಆತ ಮುಂದೆ ನನ್ನ ಕೊಲೆಗೆ ಯತ್ನಿಸಿ ಜೈಲು ಸೇರಿದ್ದ. ಆತನ ಇಡೀ ಕುಟುಂಬ ಅಪಘಾತದಲ್ಲಿ ಸತ್ತಿದ್ದು, ಬಳಿಕ ಆತ ಮುಲ್ಲಾ ಆಗಿ ಸಮಾಜ ಸೇವೆಯಲ್ಲಿ ತೊಡಗಿದ್ದನ್ನು ಹಿಂದಿನ ಭಾಗದಲ್ಲಿ ನಾನು ಬರೆದಿದ್ದೆ. ಈ ಪ್ರಕರಣದಲ್ಲಿ ಒಟ್ಟು 63 ಮಂದಿಯನ್ನು ಬಂಧಿಸಲಾಗಿತ್ತು. ಅಕ್ರಮ ಸರಾಯಿ ದಂಧೆ ವಿರುದ್ಧ ಭಾರೀ ಪ್ರತಿಭಟನೆ ನಡೆದವು. ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದವು.

ಹಲವು ವರ್ಷಗಳ ಕಾಲ ಈ ಪ್ರಕರಣದ ವಿಚಾರಣೆ ನಡೆಯಿತಾದರೂ, ಒಬ್ಬನೇ ಒಬ್ಬ ಆರೋಪಿಗೂ ಶಿಕ್ಷೆಯಾಗಲಿಲ್ಲ! ನೂರಾರು ಜನರ ಸಾವಿಗೆ ಕಾರಣರಾದವರು ಕಾನೂನಿನ ಬಲೆಯಿಂದ ತಪ್ಪಿಸಿಕೊಂಡು ರಾಜಾರೋಷವಾಗಿ ಓಡಾಡಿದರು. ಸತ್ತವರಿಗೆ ಸರಕಾರ ಕೊಟ್ಟಿದ್ದು ಕೇವಲ 1 ಸಾವಿರ ರೂ. ಪರಿಹಾರ! ಆ ದುರಂತದಲ್ಲಿ ಮುಖ್ಯ ಆರೋಪಿಯಾಗಿದ್ದ ಮಹಿಳೆಯೊಬ್ಬಳು ಮುಂದೆ ಕಾರ್ಪೊರೇಟರ್ ಕೂಡ ಆದಳು. ಪ್ರಮುಖ ಪಕ್ಷವೊಂದನ್ನು ಸೇರಿ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದಳು. ಆಕೆ ಮಹಾನ್ ಸಮಾಜೋದ್ಧಾರಕಳಂತೆ ಭಾಷಣ ಮಾಡುತ್ತಿರುವುದು ಕೇಳಿ ಮೈ ಉರಿದುಹೋಗುತ್ತಿತ್ತು. ಆ ಸಂದರ್ಭದಲ್ಲಿ ಎಸಿಪಿಯಾಗಿದ್ದ ನಾನೇ ಆಕೆಯ ಪ್ರಚಾರ ಸಭೆಯ ಬಂದೋಬಸ್‌ತ್ಗೆ ನಿಲ್ಲಬೇಕಾಯಿತು! ಹೇಗಿದೆ ನಮ್ಮ ವ್ಯವಸ್ಥೆ?

ಸರ್ಕಸ್ ಅಗ್ನಿ ಅನಾಹುತ, ಕಳ್ಳಬಟ್ಟಿ ದುರಂತ, ಗಂಗಾರಾಮ್ ಕಟ್ಟಡ ಕುಸಿತ… 1981ರಿಂದ 83ರ ಅವಧಿಯಲ್ಲಿ ನಡೆದಿದ್ದ ಈ ಅವಘಡಗಳು ಬೆಂಗಳೂರನ್ನು ನಡುಗಿಸಿದ್ದವು. ಈ ಮೂರು ದುರ್ಘಟನೆಯ ವೇಳೆ ಪರಿಹಾರ ಕಾರ್ಯಾಚರಣೆಯಲ್ಲಿ ನಾನು ಭಾಗಿಯಾಗಿದ್ದೆ. ಆ ಕರಾಳ ಘಟನೆಗಳು ನೆನಪಾದರೆ ಇಂದಿಗೂ ದುಃಖವಾಗುತ್ತದೆ. ಬೇಸರದ ಸಂಗತಿಯೆಂದರೆ, ಈ ಪ್ರಕರಣಗಳಲ್ಲಿ ಯಾರೊಬ್ಬರಿಗೂ ಶಿಕ್ಷೆಯಾಗಲಿಲ್ಲ.

Tags: Bangalore PoliceBullet SavariCircus Company Fire AccidentDakshaKalpa NewsTiger BB Ashok Kumar
Share196Tweet123Send
Previous Post

ಇದೊಂದು ಜಗತ್ತು: ಡೆಡ್ ಸೀ

Next Post

ಬುಲೆಟ್ ಸವಾರಿ-22: ಗಂಗಾರಾಮ್ ಕಟ್ಟಡ ಕುಸಿದಾಗ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬುಲೆಟ್ ಸವಾರಿ-22: ಗಂಗಾರಾಮ್ ಕಟ್ಟಡ ಕುಸಿದಾಗ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

June 11, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL