ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವು ನೀಡಿದ್ದು 1500 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳು ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಾಗಿದ್ದು, ಈ ಕಾಮಗಾರಿಗಳ ಕೆಲಸವನ್ನು ಶೀಘ್ರ ಪ್ರಾರಂಭಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿ ಕೊಡಬೇಕು ಎಂದು ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ MP Raghavendra ಸೂಚಿಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಮುಖ್ಯಂಶಗಳು ಹೀಗಿವೆ:
- ಬೈಂದೂರು ಕ್ಷೇತ್ರದ ಸರ್ಕಾರಿ ಸ್ಥಳಗಳಲ್ಲಿ 160 ಕ್ಕೂ ಹೆಚ್ಚು ದೇವಸ್ಥಾನ, 60ಕ್ಕೂ ಅಧಿಕ ನಾಗಬನಗಳಿದ್ದು ಇದನ್ನು ಧಾರ್ಮಿಕ ಕ್ಷೇತ್ರದ ಹೆಸರಿಗೆ ಮಂಜೂರು ಮಾಡಲು ಕ್ರಮ.
- ಗೋಮಾಳ,ರುದ್ರಭೂಮಿ ಸ್ಥಳಗಳ ಗಡಿ ಗುರುತು ಮಾಡಿ ಉತ್ತುವರಿ ಮಾಡದಂತೆ ರಕ್ಷಿಸಿ ಅಭಿವೃದ್ಧಿಗೊಳಿಸುವುದು.
- ಡಿಮ್ಡ್ ಅರಣ್ಯ ಪಟ್ಟಿಯಿಂದ ವಿರಹಿತಗೊಂಡ 94ಇ ಹಾಗೂ ಅಕ್ರಮ ಸಕ್ರಮ ಕಡತ ಒಂದು ತಿಂಗಳ ಒಳಗೆ ಮಂಜೂರು ಮಾಡಲು ಕ್ರಮವಹಿಸಬೇಕು.
- ಕಾಲಸಂಕಗಳು ಮಂಜೂರು ಆಗಿದ್ದು ಒಂದು ವಾರದಲ್ಲಿ ಟೆಂರ್ಡ ಪ್ರಕ್ರಿಯೆ ಗೊಳಿಸಲು ಸೂಚನೆ.
- ಮಾದಕ ವಸ್ತು ಅಕ್ರಮ ಸರಾಯಿ ಮಾರಾಟ ಮಾಡುವವರನ್ನು ಕಾನೂನು ಕ್ರಮಕ್ಕೆ ಒಳಪಡಿಸುಬೇಕು.
- ಬೈಂದೂರು ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ 23 ಆಖಘೆಔ ಟರ್ವ_ಗಳು ಮಂಜುರಾತಿಯಾಗಿದ್ದು, ಶೀಘ್ರ ಸ್ಥಳ ಗುರುತು ಮಾಡಲು ಸೂಚನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post