ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಇಂದು ತೆಂಕಬೆಟ್ಟು ಹಳಗೇರಿಯ ಶ್ರೀ ಕಾಲಭೈರವ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ ಹಾಗೂ ಅಷ್ಟಬಂಧ ಬ್ರಹ್ಮಕಲಶೊತ್ಸವ, ಭವ್ಯ ಪುರ ಮೆರವಣಿಗೆಯೊಂದಿಗೆ ಶ್ರೀ ದೇವರ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಭಾಗವಹಿಸಿದ್ದರು.
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿಯವರು ಶ್ರೀ ಕಾಲಭೈರವ ದೇವರಿಗೆ ಮಹಾಮಂಗಳಾರತಿ ನಡೆಸಿ, ಧಾರ್ಮಿಕ ಸಭಾ ವೇದಿಕೆಯಲ್ಲಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಕಾವೂರು ಮಠ, ಮತ್ತು ಶ್ರೀ ಕೊಡಚಾದ್ರಿ ಹಲವರಿ ಮಠದ ಪೀಠಾಧಿಪತಿ ಪೀರಯೋಗಿ ಜಗದೀಶ್ ನಾಥ ಸ್ವಾಮೀಜಿ, ಗಣ್ಯರು ಹಾಗೂ ಶ್ರೀ ಕ್ಷೇತ್ರದ ಭಕ್ತಾಧಿಗಳು ಉಪಸ್ಥಿತರಿದ್ದರು.
Also read: ಜ.30ರಂದು ಸರ್ವೋದಯ ದಿನಾಚರಣೆ ರಾಜ್ಯಮಟ್ಟದ ಸಮಾವೇಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post