Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಿಮ್ಮ ದರ ಏರಿಕೆಗೆ ಸಮರ್ಥನೆಯಿದೆ, ಮೋದಿಗಿಲ್ಲ ಅಲ್ಲವೇ ಕುಮಾರಸ್ವಾಮಿಯವರೇ?

ಭಾರತ್ ಬಂದ್ ಮಾಡಿದ್ದ ಪಾಷಂಡಿಗಳು ಈಗೆಲ್ಲಿ ಸತ್ತಿದ್ದಾರೆ?

January 5, 2019
in Special Articles
0 0
0
Share on facebookShare on TwitterWhatsapp
Read - 2 minutes

2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದಾಗಿನಿಂದ ಇಂದಿನವರೆಗೂ ಅವರ ವಿರುದ್ಧ ಸೀಳುನಾಯಿಗಳಂತೆ ಮುಗಿಬೀಳುತ್ತಾ, ಸೋಲನ್ನು ಅನುಭವಿಸುತ್ತಾ, ಕಂಡ ಕಂಡಲ್ಲಿ ಮೋದಿ ವಿರುದ್ಧ ಬಾಯಿಗೆ ಬಂದಂತೆ ಹರಟುವ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಡಪಕ್ಷಗಳ ನಾಯಕರು ಈಗೆಲ್ಲಿ ಸತ್ತಿದ್ದಾರೆ?

ಒಂದೆಡೆ ಜಾಗತಿಕ ಮಟ್ಟದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇವುಗಳ ಮೇಲಿನ ದರ ಇಳಿಕೆಗೆ ಕ್ರಮ ಕೈಗೊಂಡಿದೆ. ಆದರೆ, ಇಲ್ಲಿ, ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮಾತ್ರ ತೈಲ ಬೆಲೆ ಏರಿಕೆ ಮಾಡುವ ಮೂಲಕ ಕರುನಾಡಿಗರಿಗೆ ಹೊಸ ವರ್ಷದ ಉಡುಗೊರೆ(?) ನೀಡಿದೆ.

ನಾವು ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ಜೆಡಿಎಸ್, ನಾವೂ ಜನಪರ ಎಂದು ಬೀಗುವ ಕಾಂಗ್ರೆಸ್ ಎರಡೂ ಸೇರಿಕೊಂಡು ಕರುನಾಡಿಗರಿಗೆ ಬರೆ ಎಳೆದಿದ್ದು, ಇದಾವ ರೀತಿಯ ಆಡಳಿತ ಎನ್ನುವುದೇ ಯಕ್ಷಪ್ರಶ್ನೆಯಾಗಿದೆ.

ಇಷ್ಟಕ್ಕೂ ಮೀರಿ, ದರ ಏರಿಕೆಯನ್ನು ಭಂಡತನದಿಂದ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ತೆರಿಗೆ ಏರಿಕೆ ಮಾಡಿದ್ದರೂ ಬೇರೆ ರಾಜ್ಯಗಳಿಗಿಂತಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆಯಿದೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ನಾಚಿಕೆಯಾಗಬೇಕು ನಿಮಗೆ! ತಾವು ಜನಪ್ರಿಯ, ಜನಪರ, ಬಡವರ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಆಡುವ ಮಾತೇ ಇದು.
ಆಯಿತು ನೀವು ಹೇಳುವಂತೆ ಇತರೆ ರಾಜ್ಯಗಳಿಗಿಂತಲೂ ನಮ್ಮಲ್ಲಿ ಕೊಂಚ ಕಡಿಮೆಯಿದೆ ಎಂದುಕೊಳ್ಳೋಣ. ಆದರೆ, ದರ ಏರಿಕೆಗೆ ಮಾತ್ರ ಇತರ ರಾಜ್ಯಗಳಿಗೆ ಹೋಲಿಕೆ ಮಾಡುವ ನೀವು ದರ ಕಡಿಮೆ ಇರುವ ರಾಜ್ಯಗಳಿಗೆ ಏಕೆ ಹೋಲಿಕೆ ಮಾಡಿಕೊಳ್ಳುವುದಿಲ್ಲ?

ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಎರಡನೆಯ ದಿಟಿವೂ ಕಡಿತಗೊಂಡಿದ್ದು, ದರ ಪರಿಷ್ಕರಣೆ ನಂತರ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ 15-16 ಪೈಸೆ ಕಡಿಮೆಯಾಗಿದ್ದರೆ, ಡೀಸೆಲ್ 18-20 ಪೈಸೆ ಅಗ್ಗವಾಗಿದೆ.

ಆದರೆ, ಬೆಂಗಳೂರಿನಲ್ಲಿ ಇಂಧನ ಬೆಲೆ ಇಳಿಕೆಗೆ ಸಾಕ್ಷಿಯಾಗಿದ್ದರೂ ಕೂಡ ರಾಜ್ಯ ಸರ್ಕಾರವು ತೆರಿಗೆ ಏರಿಸಿರುವುದರ ಪರಿಣಾಮವಾಗಿ ಲೀಟರ್ ಪೆಟ್ರೋಲ್‌ಗೆ 1.52 ರೂ. ಏರಿಕೆಯಾಗಿ 70.53 ರೂ.ಗಳಷ್ಟಿದೆ. ಇನ್ನು ಡೀಸೆಲ್ ಬೆಲೆಯಲ್ಲೂ 1.50 ರೂ. ಏರಿಕೆಯಾಗಿ 64.30 ರೂ.ಗೆ ಮಾರಾಟವಾಗುತ್ತಿದೆ.

ಇನ್ನು ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್‌ಗೆ 15 ಪೈಸೆ ಕಡಿಮೆಯಾಗುವ ಮೂಲಕ 68.29 ರೂ.ಗಳಷ್ಟಿದ್ದರೆ, ಡೀಸೆಲ್ 18 ಪೈಸೆ ಇಳಿಕೆಯಾಗಿ 62.86 ರೂ.ಗಳಿಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಲೀ. ಪೆಟ್ರೋಲ್ 73.59 ರೂ.ಗೆ ಮಾರಾಟವಾಗುತ್ತಿದ್ದು, 15 ಪೈಸೆ ಕಡಿಮೆಯಾಗಿದೆ. ಇನ್ನು ಡೀಸೆಲ್ ಲೀ.ಗೆ 20 ಪೈಸೆ ಕಡಿಮೆಯಾಗಿ 65.14 ರೂ.ಗಳಷ್ಟಿದೆ. ಚೆನ್ನೆನಲ್ಲಿ ಪೆಟ್ರೋಲ್ ಲೀ.ಗೆ 16 ಪೈಸೆ ಕಡಿಮೆಯಾಗಿ 70.85. ರೂ.ಗಳಿದ್ದರೆ, ಲೀಟರ್ ಡೀಸೆಲ್ 65.72 ರೂ.ಗಳಿಗೆ ಮಾರಾಟವಾಗುವ ಮೂಲಕ 19 ಪೈಸೆ ಇಳಿಕೆಯಾಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿಯೂ 15 ಪೈಸೆ ಕಡಿಮೆಯಾಗಿ 70.43 ರೂ.ಗೆ ಪೆಟ್ರೋಲ್ ಮಾರಾಟವಾಗುತ್ತಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 18 ಪೈಸೆ ಕಡಿಮೆಯಾಗಿ 64.03 ರೂ.ಗಳಷ್ಟಿದೆ.

ಒಟ್ಟಾರೆಯಾಗಿ ನೋಡುವುದಾದರೆ ರಾಷ್ಟçದಾದ್ಯಂತ ಪ್ರಸ್ತುತ ತೈಲ ಬೆಲೆ ಎಷ್ಟಿದೆಯೋ ರಾಜ್ಯದಲ್ಲೂ ಬಹುತೇಕ ಅಷ್ಟೇ ಇದೆಯೇ ಹೊರತು, ತೆರಿಗೆ ಏರಿಕೆ ಮಾಡಿದರೂ ಬೇರೆ ರಾಜ್ಯಗಳಿಗಿಂತಲೂ ಕಡಿಮೆ ಎಂದು ಮುಖ್ಯಮಂತ್ರಿಗಳು ಬೀಗುವಂತಹ ಸಾಧನೆಯೇನೂ ಇಲ್ಲ ಎಂಬುದು ಸತ್ಯ.

ಈ ವಿಚಾರವನ್ನು ಹೊರತುಪಡಿಸಿ ನೋಡುವುದಾದರೆ, ತೈಲ ಬೆಲೆ ಏರಿಕೆಯಾಯಿತು ಎಂಬ ನೆಪವೊಡ್ಡಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಡಪಕ್ಷಗಳೆಲ್ಲಾ ಸೇರಿಕೊಂಡು ಭಾರತ್ ಬಂದ್ ಮಾಡಿ ಕೋಟ್ಯಂತರ ರೂ. ನಷ್ಟ ಮಾಡಿದ್ದವು. ಆದರೆ, ಇದೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಈಗ ರಾಜ್ಯದಲ್ಲಿ ತೆರಿಗೆ ಏರಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕಿದೆಯಲ್ಲಾ ಈ ಸರ್ಕಾರವನ್ನು ಯಾವ ಪದಗಳಿಂದ ಜರಿಯಬೇಕು?

ಅಂದು ಪುಂಖಾನುಪುಂಖವಾಗಿ ಮೋದಿ ಸರ್ಕಾರದ ವಿರುದ್ದ ಮಾತನಾಡಿದ್ದ ರಾಹುಲ್ ಗಾಂಧಿ, ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ದೋಸ್ತಿ ಪಕ್ಷದ ಮುಂದಾಳುಗಳು ಈಗ ಏನು ಹೇಳುತ್ತಾರೆ?

ಭಾರತ್ ಬಂದ್ ನೆಪ ಮಾಡಿಕೊಂಡು ಕೋಟ್ಯಂತರ ರೂ. ಬೆಲೆಯ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದ ಹಾಗೂ ಅದಕ್ಕೆ ಕಾರಣವಾದ ಮುಖಂಡ ಪಾಷಂಡಿಗಳು ಈಗೆಲ್ಲಿ ಸತ್ತಿದ್ದಾರೆ?

ಪ್ರಮುಖವಾಗಿ ತೈಲ ಬೆಲೆಗಳು ಜಾಗತಿಕ ಮಾರುಕಟ್ಟೆಯ ಏರಿಳಿತದ ಮೇಲೆ ಅವಲಂಬನೆಯಾಗಿರುತ್ತದೆ. ಅಲ್ಲಿ, ಹೆಚ್ಚಾದರೆ ಇಲ್ಲೂ ಹೆಚ್ಚಾಗುತ್ತದೆ. ಅಲ್ಲಿ ಕಡಿಮೆಯಾದರೆ, ಇಲ್ಲೂ ಕಡಿಮೆಯಾಗುತ್ತದೆ. ಆದರೆ, ಪ್ರಜಾಹಿತವನ್ನು ಬಯಸುವ ಯಾವುದೇ ಸರ್ಕಾರ ಬೆಲೆ ಹೆಚ್ಚಾದಾಗ ಅದರ ಮೇಲಿನ ತೆರಿಗೆ ಕಡಿಮೆ ಮಾಡುವ ಮೂಲಕ ಬೆಲೆ ಇಳಿಕೆಗೆ ಕ್ರಮಕೈಗೊಳ್ಳಬೇಕು. ಅದೂ, ಸರ್ಕಾರದ ಬೊಕ್ಕಸಕ್ಕೆ ಬರುವ ಆದಾಯದಲ್ಲಿ ಭಾರೀ ಪ್ರಮಾಣದಲ್ಲಿ ತೊಂದರೆಯಾಗದಂತೆ.

ಹೀಗಿರುವಾಗ, ಅಂದು ಮೋದಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿ, ತಾವೊಬ್ಬ ಜನಹಿತಕ್ಕಾಗಿಯೇ ಉದಯಿಸಿದ ಅವತಾರ ಪುರುಷ ಎಂಬಂತೆ ಬೀಗುವ ಕುಮಾರಸ್ವಾಮಿ, ಈಗ ಜನಹಿತವನ್ನು ಕಡೆಗಣಿಸಿ ತೆರಿಗೆ ಏರಿಕೆ ಮಾಡಿರುವುದು ಯಾವ ಪುರುಷಾರ್ಥಕ್ಕೆ. ನೀವು ಹೀಗೆ ಏರಿಕೆ ಮಾಡಿ, ಅದನ್ನು ಸಮರ್ಥಿಸಿಕೊಳ್ಳುತ್ತೀರ ಎಂದರೆ, ಅಂದು ದರ ಏರಿಕೆಯಾದಾಗ ಮೋದಿ ಅವರಿಗೂ ನೂರೊಂದು ಸಮರ್ಥನೆಗಳಿತ್ತು. ಆಗ ಯಾವ ನೈತಿಕತೆಯಿಟ್ಟುಕೊಂಡು ಪ್ರಧಾನಿಯವರ ವಿರುದ್ಧ ಮಾತನಾಡಿದಿರಿ ಕುಮಾರಸ್ವಾಮಿಯವರೇ? ನಿಮ್ಮ ಆತ್ಮಸಾಕ್ಷಿಯನ್ನೊಮ್ಮೆ ಕೇಳಿ. ಅದೂ ಇದ್ದರೆ…!

-ವಷಿಷ್ಠ

Tags: BJPCM H D KumaraswamycongressDieselJDSKannada NewspetrolPetrol Price hike in KarnatakaPM Narendra ModiRahul Gandhi
Previous Post

ಜಮ್ಮು ಗಡಿಯಲ್ಲಿ ಸೇನೆ ಕಾರ್ಯಾಚರಣೆ, ಗುಂಡಿನ ಚಕಮಕಿ

Next Post

ಸಿಎಂ ಕುಮಾರಸ್ವಾಮಿ ಕಾಪಿ ಪೇಸ್ಟ್ ಸಾಧನೆ! ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಎಂ ಕುಮಾರಸ್ವಾಮಿ ಕಾಪಿ ಪೇಸ್ಟ್ ಸಾಧನೆ! ಸೋಷಿಯಲ್ ಮೀಡಿಯಾದಲ್ಲಿ ವೈರಲ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!