ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸರ್ಕಾರದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ಮಧ್ಯಾಹ್ನ 2ಗಂಟೆಗೆ ನಡೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಾಳೆ ಮಧ್ಯಾಹ್ನ ಸಂಪುಟ ವಿಸ್ತರಣೆಯಾಗಲಿದ್ದು, ನಾಳೆಯೇ ಖಾತೆಗಳ ಹಂಚಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೂ ಆಗಲಿದೆ ಎಂದಿದ್ದಾರೆ.
ಎಸ್.ಆರ್.ಪಾಟೀಲ್ ರಾಜೀನಾಮೆ ನೀಡುವುದರ ಕಾರಣ ತಿಳಿದುಬಂದಿಲ್ಲ. ಅವರು ನೇರವಾಗಿ ಎಐಸಿಸಿ ಅಧ್ಯಕ್ಷರಿಗೇ ರಾಜೀನಾಮೆ ನೀಡಿದ್ದಾರೆ. ಬಹುಶಃ ಇತ್ತೀಚೆಗೆ ಅವರ ಬಾಗಲಕೋಟೆ ನಿವಾಸದ ಮುಂದೆ ಪ್ರತಿಭಟನೆಯೊಂದು ನಡೆದಿತ್ತು. ಇದರಿಂದ ಬೇಸತ್ತು ರಾಜೀನಾಮೆ ನೀಡಿರಬಹುದು ಎಂದಿದ್ದಾರೆ.
Discussion about this post