ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕೇಂದ್ರ ಸಚಿವ ಸಂಪುಟವು ಸದ್ಯದಲ್ಲೇ ಪುನರ್ರಚನೆಯಾಗುವ ಸಾಧ್ಯತೆ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Sha) ಅವರನ್ನು ಉಪ ಪ್ರಧಾನಿಯಾಗಿ ನೇಮಿಸುವ ಸಾಧ್ಯತೆ ಇದೆ ಎಂಬ ವರದಿ ಪ್ರಕಟವಾಗಿದೆ.
ಮುಂಗಾರು ಅಧಿವೇಶನಕ್ಕೂ ಮುನ್ನ, ವಿಶೇಷವಾಗಿ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ರಚನೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Also Read>> SWR General Manager Inspects Central Workshop, Ashokapuram, Mysuru Railway Station and Goods Terminal
ಈ ಪುನರ್ರಚನೆ ಪ್ರಕ್ರಿಯೆಯಲ್ಲಿ ‘ಆಪರೇಷನ್ ಟೈಗರ್’ ಯಶಸ್ಸಿನ ಹಿಂದಿರುವ ಪ್ರಮುಖ ನಾಯಕರಿಗೆ ಪದೋನ್ನತಿ ನೀಡುವ ನಿರೀಕ್ಷೆಯಿದೆ ಎಂದು ಮರಾಠಿ ಮಾಧ್ಯಮ ವರದಿ ಮಾಡಿದೆ.
ಎನ್ಡಿಎ ಸರ್ಕಾರದಲ್ಲಿ ಶಿವಸೇನಾ (ಶಿಂಧೆ ಬಣ) ಬಲವನ್ನು ಹೆಚ್ಚಿಸುವ ಉದ್ದೇಶದಿಂದ ಶ್ರೀಕಾಂತ್ ಶಿಂಧೆ, ಓಂರಾಜೆ ನಿಂಬಾಳ್ಕರ್ ಹಾಗೂ ಸಂಜಯ್ ಬಂದು ಜಾಧವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರನಾಗಿರುವ ಶ್ರೀಕಾಂತ್ ಶಿಂಧೆ ‘ಆಪರೇಷನ್ ಟೈಗರ್’ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ.
ಈ ಕಾರ್ಯಾಚರಣೆಯ ಫಲವಾಗಿ ಉದ್ಧವ್ ಠಾಕ್ರೆ ಬಣದ ಏಳು ಸಂಸದರು ಶಿಂಧೆ ನೇತೃತ್ವದ ಶಿವಸೇನಾಗೆ ಸೇರಿಕೊಂಡಿದ್ದಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









