ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಯಾನ್ಸರ್ ಎಂಬುದು ಜೀವನದ ಕೊನೆಯ ಅಧ್ಯಾಯವಲ್ಲ; ಸೂಕ್ತ ಚಿಕಿತ್ಸೆ, ವೈದ್ಯರ ಮೇಲಿನ ನಂಬಿಕೆ, ಕುಟುಂಬದ ಬೆಂಬಲ ಮತ್ತು ದೃಢ ಮನೋಬಲದಿಂದ ಅದನ್ನು ಜಯಿಸಿ ಆರೋಗ್ಯಕರ ಜೀವನ ನಡೆಸಬಹುದು ಎಂಬ ಸಂದೇಶ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದ ‘ರಾಷ್ಟ್ರೀಯ ಕ್ಯಾನ್ಸರ್ ಸರ್ವೈವರ್ ಡೇ’ #NationalCancerSurvivorDay ಕಾರ್ಯಕ್ರಮದಲ್ಲಿ ಪ್ರತಿಧ್ವನಿಸಿತು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ನ್ನು ಯಶಸ್ವಿಯಾಗಿ ಎದುರಿಸಿ ಬದುಕು ಗೆದ್ದ ಸರ್ವೈವರ್ಗಳು ಅವರ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಲಾಯಿತು.
Also Read>> ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ಡಾ. ಉತ್ತಮ ಶರ್ಮಾ ಮಾತನಾಡಿ, ಕ್ಯಾನ್ಸರ್ ರೋಗನಿರ್ಣಯವಾದ ತಕ್ಷಣ ಬದುಕಿನ ಬಗ್ಗೆ ನಿರಾಶರಾಗುವ ಅಗತ್ಯವಿಲ್ಲ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದರೆ #Cancer ಕ್ಯಾನ್ಸರ್ನಿಂದ ಗುಣಮುಖರಾಗಲು ಸಾಧ್ಯ ಎಂಬುದಕ್ಕೆ ಸಾವಿರಾರು ಸರ್ವೈವರ್ಗಳ ಬದುಕು ಸಾಕ್ಷಿಯಾಗಿದೆ ಎಂದು ಹೇಳಿದರು.
ಕ್ಯಾನ್ಸರ್ ಚಿಕಿತ್ಸೆಯು ಸುದೀರ್ಘ ಪ್ರಕ್ರಿಯೆಯಾಗಿದ್ದು, ಈ ಅವಧಿಯಲ್ಲಿ ಕುಟುಂಬದವರ ಬೆಂಬಲ ಮತ್ತು ರೋಗಿಯ ಮನೋಬಲ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಳೆದ ಹಲವು ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳು ಯಶಸ್ವಿಯಾಗಿ ಚಿಕಿತ್ಸೆ ಪಡೆದು ಸರ್ವೈವರ್ಗಳಾಗಿದ್ದಾರೆ ಎಂದು ತಿಳಿಸಿದರು.
Also Read>> ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ
ವಿಕಿರಣ ಆಂಕೊಲಾಜಿಸ್ಟ್ ಡಾ. ರವಿ ನಡಹಳ್ಳಿ ಮಾತನಾಡಿ, ಕ್ಯಾನ್ಸರ್ ಸರ್ವೈವರ್ಗಳ ಬದುಕು ಸಮಾಜಕ್ಕೆ ಸ್ಫೂರ್ತಿಯಾಗಿದೆ. ಚಿಕಿತ್ಸೆಯ ಸಮಯದಲ್ಲಿ ಎದುರಾಗುವ ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಧೈರ್ಯದಿಂದ ಎದುರಿಸುವುದು ಅತ್ಯಗತ್ಯ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news



















