ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ನಗರದ ರೋಟರಿ ಭಾಲಭವನದಲ್ಲಿ ನವೋದಯ, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ಆದರ್ಶ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.
ರೋಟರಿ ಕ್ಲಬ್ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಶಿಕ್ಷಕಿ ಹೇಮಲತಾ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳು ತಮ್ಮಲ್ಲಿರುವ ಭಯವನ್ನು ದೂರಮಾಡಿ, ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಬರೆಯಬೇಕು. ದಿನಾಂಕ ಮತ್ತು ಸಮಯವನ್ನು ತಿಳಿದುಕೊಂಡು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಬೇಕು. ಪ್ರಶ್ನೆ ಪತ್ರಿಕೆ ಕೈಗೆ ಬಂದಾಗ ಮೊದಲು ಪ್ರಶ್ನೆಗಳನ್ನು ಅರ್ಥ ಮಾಡಿಕೊಂಡು ನಂತರ ಉತ್ತರ ಬರೆಯಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಂಗ್ರೆಸ್ ಘಟಕಾಧ್ಯಕ್ಷ ಹಾಗೂ ಪುರಸಭೆ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣದ ಅಗತ್ಯವಿದ್ದು, ವಿದ್ಯಾವಂತ ಮಕ್ಕಳು ಸಮಾಜದಲ್ಲಿ ಸುಸಂಸ್ಕೃತರಾಗಿ, ತಮ್ಮ ಗೌರವವನ್ನು ಕಾಪಾಡಿಕೊಂಡು ಉತ್ತಮ ಜೀವನ ಸಾಗಿಸುತ್ತಾರೆ ಎಂದರು.
ಪ್ರವೇಶ ಪರೀಕ್ಷೆಗಳಿಗೆ ಉತ್ತಮ ಮಾರ್ಗದರ್ಶನದ ಅವಶ್ಯಕತೆ ಇದೆ. ಬಡಮಕ್ಕಳಿಗೆ ಅನುಕೂಲವಾಗಲೆಂದು ಸರ್ಕಾರ ನವೋದಯ, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ಆದರ್ಶದಂತಹ ಅನೇಕ ವಸತಿ ಶಾಲೆಗಳನ್ನು ತೆರೆದಿದೆ. ಪ್ರವೇಶ ಪರಿಕ್ಷೆಗಳನ್ನು ನಡೆಸುವುದರ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಉತ್ತಮ ವಿದ್ಯಾಭ್ಯಾಸವನ್ನು ನೀಡುತ್ತಿದೆ ಎಂದು ಹೇಳಿದರು.
ರೋಟರಿ ಬಾಲಭವನದ ಅಧ್ಯಕ್ಷ ನಾಗೇಶ, ಕಾರ್ಯದರ್ಶಿ ಎನ್. ಕಿರಣ್, ಡಾ. ಜಯಕುಮಾರ್, ಜೈ ಪ್ರಕಾಶ್, ಡಾ. ವಿರೇಶ್ ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post