ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರ 10 ಸಾವಿರ ರೂ. ಆರ್ಥಿಕ ಸಹಕಾರ ನೀಡಲಿದೆ ಎಂದು ಶಾಸಕ ವೈ.ಎ.ನಾರಾಣಸ್ವಾಮಿ ಹೇಳಿದರು.
ವೈ.ಎ.ಎನ್ ಹಾಗೂ ಚಿದಾನಂದಗೌಡ ಅಭಿಮಾನಿ ಬಳಗದವರು ನಗರದ ವಾಸವಿ ಶಾಲೆಯಲ್ಲಿ ಆಯೋಜಿಸಿದ್ದ ಖಾಸಗಿ ಅನುದಾನ ರಹಿತ ಶಾಲೆ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗೆ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದರು.
ಶಿಕ್ಷಕರು ಎಷ್ಟೇ ಸಮಸ್ಯೆಗಳಿದ್ದರೂ ಬೇರೊಬ್ಬರ ಹತ್ತಿರ ಹೇಳುವುದಿಲ್ಲ. ಅವರು ಸ್ವಾಭಿಮಾನಿಗಳು. ಶಿಕ್ಷಣ ಸಂಸ್ಥೆಗೆ ಹಗಲು ರಾತ್ರಿ ದುಡಿದಿದ್ದಾರೆ. ಇಂಥ ಶಿಕ್ಷಕರುನ್ನು ಕೊರೋನಾ ಸಂದರ್ಭದಲ್ಲಿ ಅವರಿಗೆ ಸಂಬಳ ನೀಡದೆ ಶಿಕ್ಷಣ ಸಂಸ್ಥೆಗಳು ಅವರನ್ನು ವಂಚಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಶಿಕ್ಷಕರ ನೆರವಿಗೆ ಬರುವಂತೆ ಹಲವು ಬಾರಿ ಮುಖ್ಯಮಂತ್ರಿ ಬಳಿ ಹೋಗಿ ಮನವಿ ಮಾಡಲಾಗಿದೆ. ಇದರಿಂದಾಗಿ ಸರ್ಕಾರ ಶಿಕ್ಷಕರಿಗೆ ಮೊದಲ ಹಂತದಲ್ಲಿ 5 ಸಾವಿರ ರೂ. ಹಾಗೂ ಎರಡನೇ ಹಂತದಲ್ಲಿ 5 ಸಾವಿರ ರೂ. ಒಟ್ಟು 10ಸಾವಿರ ರೂ. ಆರ್ಥಿಕ ನೆರವು ಕಲ್ಪಿಸುವುದಾಗಿ ಭರವಸೆ ನೀಡಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಂ. ಚಿದಾನಂದಗೌಡ ಪೋಷಕರು ಹಾಗೂ ಖಾಸಗಿ ಶಾಲೆಯ ಆಡಳಿತ ಮಂಡಳಿಯ ಶುಲ್ಕದ ವಿವಾದದಿಂದ ಶಿಕ್ಷಕರ ಪ್ಯಾಕೇಜ್ಗೆ ತಡೆ ಉಂಟಾಗಿದೆ ಎಂದು ಹೇಳಿದರು.
ವಾಲ್ಮೀಕಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ವೀರಭದ್ರಸ್ವಾಮಿ, ಕೊರೋನಾ ಸಂದರ್ಭದಲ್ಲಿ ಶಿಕ್ಷಕರ ಆರೋಗ್ಯದ ಹಿತ ದೃಷ್ಟಿಯಿಂದ ವೈ.ಎ.ನಾರಾಯಣಸ್ವಾಮಿ ಅವರು ತಾಲೂಕಿನ ಪ್ರತಿ ಶಾಲೆಗೂ ಆರೋಗ್ಯದ ಕಿಟ್ ಅನ್ನು ಉಚಿತವಾಗಿ ಒದಗಿಸಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಮಾಜಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮಂತೇಗೌಡ, ಬಿಜೆಪಿ ಜಿಲ್ಲಾ ಮುಖಂಡ ಬಾಳೆಹಣ್ಣಿನ ಮಂಡಿ ರಾಮದಾಸ್, ಪ್ರಸಾದ್, ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಾಣಿಕೆರೆ ಹನುಮಂತಪ್ಪ, ಬಾಪೂಜಿ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಾಲರೆಡ್ಡಿ, ಶಿಕ್ಷಕರ ಸಂಘದ ಅಧ್ಯಕ್ಷ ದೊಡ್ಡಯ್ಯ, ಶ್ರೀನಿವಾಸ್, ಧನಂಜಯ, ಹನುಮಂತಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post