ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸದಾಕಾಲ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಉಪನ್ಯಾಸಕರ ಮೇಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು. ಪರೀಕ್ಷೆ ಸಮಯ ಹತ್ತಿರ ಬರುತ್ತಿರುವುದರಿಂದ ವಿದ್ಯಾರ್ಥಿಗಳು ವ್ಯಾಸಂಗದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಜಿಲ್ಲಾ ಉಪನ್ಯಾಸಕ ಸಂಘದ ಎಸ್.ಲಕ್ಷ್ಮಣ್ ಹೇಳಿದರು.
ತಾಲ್ಲೂಕಿನ ದೊಡ್ಡೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಮತ್ತು ಸದಸ್ಯರುಗಳಿಗೆ ಹಾಗೂ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಗೆ ಹಮ್ಮಿಕೊಂಡಿದ ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೊಡ್ಡೇರಿ ಗ್ರಾಮದ ಈ ಕಾಲೇಜಿಗೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇಲ್ಲಿಯವರೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದ್ದಾರೆ. ಅದರಂತೆಯೇ ಇನ್ನು ಮುಂದಯೂ ಸಹ ಕಾಲೇಜಿಗೆ ಕಾಂಪೌಂಡ್, ಸಿಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಬೇಕೆಂದು ಕಾಲೇಜು ವತಿಯಿಂದ ಮನವಿ ಮಾಡಿದರು.
2020ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಕಾಲೇಜಿಗೆ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿ ಸಾಧಿಕ ಮತ್ತು ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ತಿಪ್ಪಮ್ಮ, ಸದಸ್ಯರುಗಳಾದ ಶಿವಣ್ಣ, ಸೌಮ್ಯ, ವೆಂಕಟೇಶ್, ಶಾಹಿದಬಾನು, ಗುಂಡಣ್ಣ, ಆನಂದ, ರೇಣುಕಮ್ಮ, ಪಿ.ಡಿ.ಓ ಪಾಲಯ್ಯ ಇವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಭಾರ ಪ್ರಾಚಾರ್ಯ ಕರಿಯಪ್ಪ, ಉಪನ್ಯಾಸಕರಾದ ಓ.ನಾಗರಾಜು, ಹೀನಾಕೌಸರ್, ನಾಗರಾಜು, ಯರ್ರಿಸ್ವಾಮಿ, ವೆಂಕಟೇಶ್ ಸಿಬ್ಬಂದಿಯಾದ ಚನ್ನಪ್ಪ, ದುರುಗಪ್ಪ, ಗ್ರಾಮ ಮುಖಂಡರಾದ ಸೋಮಣ್ಣ, ಆರೋಗ್ಯ ಇಲಾಖೆಯ ರಮೇಶ್, ಸಂಶೋಧನಾ ವಿದ್ಯಾರ್ಥಿ ಮುರುಳಿಧರ ಮುಂತಾದವರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post