ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಸರಕು ಸಾಗಾಟ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನಪ್ಪಿ, 14 ಜನರಿಗೆ ಗಾಯಗಳಾಗಿರುವ ಘಟನೆ ಬುಧವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಬಳಿ ನಡೆದಿದೆ.
ಚಳ್ಳಕೆರೆ ತಾಲೂಕಿನ ತಿಪ್ಪಾರಡ್ಡಿ ಹಳ್ಳಿಯ ಗ್ರಾಮದ 16 ಜನ ಚಳ್ಳಕೆರೆಯಲ್ಲಿ ಸಿನಿಮಾ ನೋಡಲೆಂದು ಜನ ಲಗೇಜ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ವಾಹನ ಚಾಲಕ ನವೀನ್ ಅತೀವೇಗ ಹಾಗೂ ಅಜಾಗರೂಕತೆಯಿಂದ ಕಾಮಸಮುದ್ರ ರಸ್ತೆ ತಿರುವಿನಲ್ಲಿ ವಾಹನ ಚಾಲಕನ ನಿಯಂತ್ರಣಕ್ಕೆ ಬಾರದೆ ರಸ್ತೆಯ ಪಕ್ಕದ ಗುಂಡಿಗೆ ಪಲ್ಟಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೆ ಸಾವನಪ್ಪಿ, 14 ಜನರಿಗೆ ತೀವ್ರ ರೀತಿಯ ಗಾಯಗಳಾಗಿವೆ.
ಗಾಯಾಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ತಿಪ್ಪಾರೆಡ್ಡಿಹಳ್ಳಿ ಗ್ರಾಮದ ಪಾಪರೆಡ್ಡಿ (50), ಗೋವಿಂದರೆಡ್ಡಿ (55), ಸ್ಥಳದಲ್ಲೇ ಮೃತಪಟಿದ್ದಾರೆ.
ವೀರರೆಡ್ಡಿ, ಸಿ.ವೈ. ನಾಗರೆಡ್ಡಿ, ಲಿಂಗಾರೆಡ್ಡಿ, ಪ್ರಕಾಶ್ ರೆಡ್ಡಿ, ಆದಿತ್ಯ, ವೀರ ರೆಡ್ಡಿ, ರಾಘವೇಂದ್ರ ರೆಡ್ಡಿ, ವಿನಯ್ ಕುಮಾರ್, ಚಂದ್ರು, ಆಶಾ, ಮಹಾಲಕ್ಷ್ಮಿ, ಕಲ್ಯಾಣ, ಲಕ್ಷ್ಮಿ ಇವರುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಚಳಕೆರೆ ಡಿವೈಎಸ್ಪಿ ಕೆ. ವಿ. ಶ್ರೀಧರ್, ವೃತ್ತನಿರೀಕ್ಷಕ ರಮಕಾಂತ್, ಮಹೇಶ್, ಲಕ್ಷ್ಮಣ್ ಹೊಸಪೇಟೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಶುರಾಮಪುರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post