No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಂಚಾರಿ ನಿಯಮ ತಿಳಿದು, ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಲು ಮನವಿ

kalpa News by kalpa News
February 11, 2021
in Small Bytes, ಚಿತ್ರದುರ್ಗ
0
ಸಂಚಾರಿ ನಿಯಮ ತಿಳಿದು, ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಲು ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡು ವಾಹನ ಓಡಿಸುವ ಮೂಲಕ ಅಪಘಾತ ತಡೆಗೆ ಸಹಕಾರ ನೀಡಬೇಕು ಎಂದು ಚಳ್ಳಕೆರೆ ಪೊಲೀಸ್ ಇನ್ಸ್‌’ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ ಕರೆ ನೀಡಿದರು.

ನಗರದ ಹೊರವಲಯದ ಚಿತ್ರದುರ್ಗ ಮುಖ್ಯ ರಸ್ತೆಯಲ್ಲಿ ಸಾರಿಗೆ ಇಲಾಖೆ ಮತ್ತು ಪೋಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 32 ನೆಯ ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ವಾಹನ ಚಾಲಕ ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.


ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡು ವಾಹನ ಓಡಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವವರು ಯಾರೂ ಕಾಯ್ದೆಯ ಹೊಸ ಸ್ವರೂಪದ ಕುರಿತು ತಲೆ ಕೆಡಿಸಿಕೊಳ್ಳುವುದಿಲ್ಲ. ದಂಡ ಎಷ್ಟು ಹೆಚ್ಚಾದರೂ ಅವರಿಗೆ ಚಿಂತೆಯಿಲ್ಲ. ಆದರೆ, ಕೆಲವರಿಗೆ ವಾಹನಗಳನ್ನು ಮಿತಿಮೀರಿದ ವೇಗದಲ್ಲಿ ಹಾಗೂ ಬೇಕಾಬಿಟ್ಟಿ ಓಡಿಸುವುದು ಒಂದು ಬಗೆಯ ಖಯಾಲಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹೆಲ್ಮೆಟ್ ಧರಿಸದೆ ವಾಹನ ಓಡಿಸುವುದು, ದ್ವಿಚಕ್ರ ವಾಹನದ ಮೇಲೆ 34 ಮಂದಿ ಸವಾರಿ ಮಾಡುವುದು ಇಂತಹವು ನಿತ್ಯ ಕಾಣಸಿಗುವ ನೋಟಗಳು. ಹಿಂದೆ ಬರುವ ವಾಹನಗಳ ಮೇಲೆ ನಿಗಾ ಇಡಲು ತಮ್ಮ ವಾಹನದಲ್ಲಿ ಕನ್ನಡಿ ಇರಬೇಕು ಎನ್ನುವ ಸಾಮಾನ್ಯ ಜ್ಞಾನ ಇರುವುದಿಲ್ಲ. ಸಂಜ್ಞೆಗಳನ್ನು ತೋರದೆ ಬೇಕೆಂದಾಗ, ಬೇಕೆಂದಲ್ಲಿ ವಾಹನವನ್ನು ತಿರುಗಿಸಬಾರದು. ಮುಂದಿರುವ ವಾಹನದಿಂದ ಸುರಕ್ಷಿತ ಅಂತರದಲ್ಲಿ ತಮ್ಮ ವಾಹನವನ್ನು ನಿಲ್ಲಿಸಬೇಕು. ಇಲಾಖೆ ಹಲವು ಕಾಯ್ದೆಯನ್ನು ರೂಪಿಸಿರುವುದು ಅಪಘಾತಗಳನ್ನು ತಡೆಗಟ್ಟುವ ಸಲುವಾಗಿಯೇ ವಿನಾ ಜನರನ್ನು ಶಿಕ್ಷಿಸುವ ಉದ್ದೇಶದಿಂದಲ್ಲ. ಆದರೆ, ನಿಯಮ ಇರುವುದೇ ಉಲ್ಲಂಘಿಸುವುದಕ್ಕಾಗಿ ಎನ್ನುವಂತಹ ಮನೋಭಾವದ ಜನರಿಗೆ ಹೊಸ ನಿಯಮ ಕಳವಳ ಉಂಟುಮಾಡಿದೆ ಎಂದರು.


ನಮ್ಮ ಹಾಗೂ ನಮ್ಮಂತೆಯೇ ರಸ್ತೆಯ ಮೇಲೆ ಪ್ರಯಾಣಿಸುವ ಇತರರ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಂಬುದನ್ನು ಎಲ್ಲರೂ ಅರಿತರೆ ಹೊಸ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ. ಪೊಲೀಸರೂ ಅಷ್ಟೇ ಹೆಚ್ಚಿನ ದಂಡ ಶೇಖರಣೆಯನ್ನೇ ಆದ್ಯತೆಯನ್ನಾಗಿ ಪರಿಗಣಿಸದೆ ಸುಗಮ ಮತ್ತು ಸುರಕ್ಷಿತ ಸಂಚಾರ ವ್ಯವಸ್ಥೆ ರೂಪಿಸುವ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ದಂಢದ ಭಯದಿಂದಲೇ ಅಪಘಾತಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗದು. ಬಹುಪಾಲು ಅಪಘಾತಗಳಿಗೆ ಪ್ರಮುಖ ಕಾರಣ ಚಾಲಕರಾದರೂ ರಸ್ತೆ ನಿರ್ವಹಣೆಯಲ್ಲಿನ ಲೋಪಗಳ ಪಾತ್ರವೂ ಇರುವುದನ್ನು ಅಲ್ಲಗಳೆಯಲಾಗದು. ರಸ್ತೆ ವಿನ್ಯಾಸ ಮತ್ತು ನಿರ್ವಹಣೆಯಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸವನ್ನೂ ಸರ್ಕಾರ ಆದ್ಯತೆಯಿಂದ ಮಾಡಬೇಕು. ಮಾಡುತ್ತದೆ ಹೆಲ್ಮೆಟ್, ಸೀಟ್ ಬೆಲ್ಟ್‌ನಂತಹ ಸುರಕ್ಷಾ ಸಾಧನಗಳ ಬಳಕೆಯ ಮಹತ್ವವನ್ನು ಜನರಿಗೆ ಮನದಟ್ಟು ಮಾಡಿಸಬೇಕು. ದಂಡ ಹೆಚ್ಚಿಸುವಲ್ಲಿ ತೋರಿದ ಉತ್ಸಾಹವನ್ನು ಜಾಗೃತಿ ಮೂಡಿಸುವಲ್ಲಿಯೂ ತೋರಿಸಬೇಕು ಎಂದರು.

ಸಾರಿಗೆ ಇಲಾಖೆ ಅಧಿಕಾರಿ ಕರುಣಾಕರ ಮಾತನಾಡಿ, ಚಾಲಕ ಅಥವಾ ಬೈಕ್ ಸವಾರರ ನಿರ್ಲಕ್ಷದಿಂದ ಅಪಘಾತಗಳು ಸಂಭವಿಸುತ್ತವೆ. ಮುಖ್ಯವಾಗಿ ಪ್ರತಿಯೋಬ್ಬರು ಸಂಚಾರಿ ನಿಯಮಗಳ ಬಗ್ಗೆ ಅರಿವಿರಬೇಕು. ಸಂಚಾರ ಪಾಲನೆ ಮಾಡಬೇಕಾಗುತ್ತದೆ. ಅಪಘಾತದಿಂದ ಜೀವಕ್ಕೆ ಹಾನಿಯಾಗುವುದರ ಜೊತೆಗೆ ದಂಡ ಕಟ್ಟಬೇಕಾಗುತ್ತದೆ. ವಾಹನದ ಹಿಂಭಾಗ ಮುಂಭಾಗ ಸೂಚನ ಫಲಕ ಹಾಕಿಸಬೇಕು. ಕಡ್ಡಾಯವಾಗಿ ವಿಮೆ ಮಾಡಿಸಿರಬೇಕು, ರಸ್ತೆ ನಿಯಮ ಪಾಲಿಸಿ ಅಪಘಾತದಿಂದ ಜೀವ ರಕ್ಷಿಸಿಕೊಳ್ಳಿ ಎಂದರು.

ಈ ಸಮಯದದಲ್ಲಿ ವಾಹನ ಮಾಲಿಕ ಮತ್ತು ಚಾಲಕರು, ನಗರದ ನಾಗರಿಕರು ಪೊಲೀಸ್ ಸಿಬ್ಬಂದಿ ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaHelmetKannada News WebsiteLatest News KannadaTraffic ruleಚಳ್ಳಕೆರೆಪೋಲೀಸ್ ಇಲಾಖೆಬಯಲು ಸೀಮೆ ಸುದ್ಧಿಸಂಚಾರಿ ನಿಯಮಹೆಲ್ಮೆಟ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

Next Post

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

kalpa News

kalpa News

Next Post
ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL