ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಗ್ರಾಮ-ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾ ಸಿಂಧು ಯೋಜನೆಯಡಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಸುಮಾರು 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.
ತಾಲೂಕಿನ ಸಾಣಿಕೆರೆ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯನ್ನು ಗಳನ್ನು ಮಾತನಾಡಿಸಿದ ಅವರು, ಗ್ರಾಮ ಒನ್ ಕೇಂದ್ರಗಳ ಪ್ರಯೋಜನಗಳು ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ತಲುಪುತ್ತಿದೆಯೇ ಎಂದು ವಿಚಾರಿಸಿದರು.
ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು-ಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸಹ ಸ್ವೀಕರಿಸಲಾಗುವುದು. . ವಾರದ ಎಲ್ಲಾ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ಸಂಜೆ 8 ರವರೆಗೆ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಕಚೇರಿಗಳಿಗೆ ಭೇಟಿ ನೀಡದಂತೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ನೀಡಬೇಕು ಎಂದು ಹೇಳಿದರು.
ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಮತ್ತು ಹಣವನ್ನು ಉಳಿಸಬಹುದು ಹಾಗೂ ಮಧ್ಯವರ್ತಿಗಳಿಂದ ಯಾವುದೇ ತೊಂದರೆ ಆಗಬಾರದು ಎನ್ನುವ ಸದುದ್ದೇಶದಿಂದ ಈ ಗ್ರಾಮ ಒನ್ ಕೇಂದ್ರವನ್ನು ತೆರೆಯಲಾಗಿದ್ದು, ಆದರೆ ಇಲ್ಲಿನ ಸಿಬ್ಬಂದಿಗಳು ನಾಗರಿಕರಿಂದ ಅರ್ಜಿ ಪಡೆಯುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪಡೆದು ಪರಿಶೀಲಿಸಿ ಅರ್ಜಿ ವಜಾ ಮಾಡದೆ ಅವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಗ್ರಾಮ ಒನ್ ಕೇಂದ್ರಕ್ಕೆ ಬಂದಂತಹ ಅರ್ಜಿಗಳನ್ನು ಹಾಗೆ ತ್ವರಿತವಾಗಿ ತಲುಪಿಸುವಂತಹ ಕೆಲಸ ಮಾಡಬೇಕು. ಸರ್ಕಾರ ನಿಮಗೆ ಅವಕಾಶ ನೀಡಿದೆ ಇದನ್ನು ಸದ್ಬಳಕೆ ಮಾಡಿಕೊಳ್ಳಿ. ಈ ಗ್ರಾಮವನ್ನು ಕೇಂದ್ರದ ಮೇಲೆ ಬಡವರಿಗೆ ರೈತರಿಗೆ ಸಾರ್ವಜನಿಕರಿಗೆ ನಂಬಿಕೆ ಬರಬೇಕು. ನಾವು ಅರೆಕಾಲಿಕ ನೌಕರರು ಎನ್ನುವ ಭಾವನೆ ಬಿಡಿ ಸಿಕ್ಕಿರುವ ಅವಕಾಶದಲ್ಲಿ ಬಡವರಿಗೆ ರೈತರಿಗೆ ಅನುಕೂಲ ಮಾಡಿಕೊಡಿ ಮುಂದೆ ನಿಮ್ಮನ್ನು ಅವರು ನೆನೆಯುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜಸ್ವನಿರೀಕ್ಷಕರ ಲಿಂಗೇಗೌಡ, ಗ್ರಾಮಲೆಕ್ಕಿಗರಾದ ಕೇಶವ ಚಾರಿ, ಉಮೇಶ್ ಹಾಗೂ ಗ್ರಾಮ ಒನ್ ಕೇಂದ್ರದ ಆಪರೇಟರ್ ವಿಕಾಸ್ ಹಾಗೂ ಸಾರ್ವಜನಿಕರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post