Friday, November 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹರ್ಷೋದ್ಗಾರದ ನಡುವೆ ಚಳ್ಳಕೆರೆ ವೀರಭದ್ರಸ್ವಾಮಿ ರಥೋತ್ಸವ ಅದ್ದೂರಿ ಸಂಪನ್ನ

May 19, 2019
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - < 1 minute

ಚಳ್ಳಕೆರೆ: ನಗರದ ಆರಾಧ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ಜರುಗಿತು.

ನಗರದ ಹೃದಯಭಾಗವಾದ ಹಳೇನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ಪಾದಗಟ್ಟೆಗೆ ತೆರಳಿ, ವಾಪಸ್ ಸನ್ನಿಧಿಗೆ ತೆರಳಿತು. ನಗರದ ವಿವಿಧೆಡೆಗಳಿಂದ ಭಕ್ತರು ತಂದಿದ್ದ ಬೃಹತ್ ಹೂವಿನ ಹಾರಗಳು ಹಾಗೂ ವೈವಿಧ್ಯಮಯ ಬಣ್ಣಗಳ ಬಾವುಟಗಳಿಂದ ಅಲಂಕರಿಸಲ್ಪಟ್ಟ ರಥದಲ್ಲಿ ಶ್ರೀ ವೀರಭದ್ರಸ್ವಾಮಿಯನ್ನು ಆಸೀನಗೊಳಿಸಿ, ವಿಶೇಷ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ನಂತರ ಜಯಘೋಷಣೆಗಳೊಂದಿಗೆ ಅಪಾರ ಸಂಖ್ಯೆಯ ಭಕ್ತಸಮೂಹ ಸಮ್ಮುಖದಲ್ಲಿ ರಥದ ಹಗ್ಗಕ್ಕೆ ಕೈ ಹಾಕಿದ ನಂತರ ಪುರಂದರ ವೀರನಾಟ್ಯದೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಬಿಸಿಲಿನ ತಾಪವನ್ನು ಲೆಕ್ಕಸದೆ ಸಾವಿರಾರು ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥ ಬೀದಿಯಲ್ಲಿ ಗಾಂಭೀರ್ಯದಿಂದ ಹೊರಟ ತೇರಿನ ಮುಂಭಾಗ ಮಂಗಳವಾದ್ಯಗಳು, ಕರಡಿ ಮಜಲು, ನಂದಿಕೋಲು, ಕೋಲಾಟ, ಮತ್ತಿತರ ಜಾನಪದ ಕಲಾತಂಡಗಳು ಸಾಥ್ ನೀಡಿದವು.

ಭಕ್ತಿ ಪರವಶರಾದ ಭಕ್ತಸಮೂಹ ಶ್ರೀ ಸ್ವಾಮಿಗೆ ಜಯಕಾರ ಹಾಕುತ್ತಾ ಸೂರುಬೆಲ್ಲ ಮೆಣಸು, ಬಾಳೆಹಣ್ಣುಗಳನ್ನು ತೇರಿಗೆ ಎಸೆಯುವ ಮೂಲಕ ತಮ್ಮ ಹರಕೆಗಳನ್ನು ಅರ್ಪಿಸಿ ಪುನೀತ ಭಾವದೊಂದಿಗೆ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದ ದೃಶ್ಯ ಕಂಡು ಬಂದಿತು.

ಮುಕ್ತಿಬಾವುಟ ಹರಾಜು
ರಥ ಎಳೆಯುವ ಮುಂಚಿತವಾಗಿ ಸ್ವಾಮಿಯ ರಥದ ಮುಕ್ತಿಬಾವುಟವನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಹ ಹರಾಜು ಹಾಕಿದ್ದು, ಈ ಬಾರಿ ವಾಣಿಜ್ಯೋದ್ಯಮಿ ಕೆ.ಸಿ. ವೀರೇಂದ್ರ 6 ಲಕ್ಷ ರೂ.ಗಳಿಗೆ ಪಡೆದರು.

ರಥೋತ್ಸವದಲ್ಲಿ ಶಾಸಕ ಟಿ. ರಘುಮೂರ್ತಿ, ತಾಪಂ ಸದಸ್ಯ ವೀರೇಶ್, ನಗರಸಭೆ ಸದಸ್ಯ ರಮೇಶ್ ಗೌಡ, ಮಲ್ಲಿಕಾರ್ಜುನ, ಪ್ರಕಾಶ್, ಸೂರನಾಯಕ, ಆರ್.ಪ್ರಸನ್ನ ಕುಮಾರ್, ಜಗದೀಶ್, ಪಾಪಣ್ಣ, ವೃತ್ತ ನಿರೀಕ್ಷಕ ಎನ್. ತಿಮ್ಮಣ್ಣ ಪಿಎಸ್‌ಐ ಕೆ. ಸತೀಶ್ ನಾಯ್ಕ್‌, ಪ್ರೊಬೇಷನರಿ ಪಿಎಸ್‌ಐ ದೇವರಾಜ, ಜನಪ್ರತಿನಿಧಿಗಳು, ಸದಸ್ಯರು ಪ್ರಮುಖರು ಹಾಜರಿದ್ದರು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಭಾರೀ ಪೋಲಿಸ್ ಬಂದೋಬಸ್ತ್‌ ಆಯೋಜಿಸಲಾಗಿತ್ತು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Tags: Bayalu Seeme NewsChallakereDevoteeKannada NewsRathotsavaVeerabhadra Swamy Rathotsavaಚಳ್ಳಕೆರೆರಥೋತ್ಸವವೀರಭದ್ರಸ್ವಾಮಿ ರಥೋತ್ಸವ
Previous Post

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

Next Post

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಿಹಾರ ಮತ ಎಣಿಕೆ | ಐತಿಹಾಸಿಕ ಮುನ್ನಡೆಯಲ್ಲಿ ಎನ್’ಡಿಎ | ಮಹಾಘಟಬಂಧನ್’ಗೆ ಭಾರೀ ಹಿನ್ನಡೆ

November 14, 2025

ಭರತನಾಟ್ಯ ಪ್ರದರ್ಶನದಲ್ಲಿ ವಿಶ್ವ ದಾಖಲೆ ಬರೆದ ಡಾ. ರಶ್ಮಿ ವಿಜಯ್ ಹಾಗೂ ತಂಡ

November 14, 2025
Internet Image

ಮೊದಲ ಒಂದು ಗಂಟೆಯ ಎಣಿಕೆಯಲ್ಲೂ ಭಾರೀ ಮುನ್ನಡೆ ಕಾಯ್ದುಕೊಂಡ ಎನ್’ಡಿಎ

November 14, 2025

ಬಿಹಾರ ಚುನಾವಣೆ | ಮೊದಲ ಅರ್ಧ ಗಂಟೆಯಲ್ಲಿ NDAಗೆ ಭಾರೀ ಮುನ್ನಡೆ

November 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಿಹಾರ ಮತ ಎಣಿಕೆ | ಐತಿಹಾಸಿಕ ಮುನ್ನಡೆಯಲ್ಲಿ ಎನ್’ಡಿಎ | ಮಹಾಘಟಬಂಧನ್’ಗೆ ಭಾರೀ ಹಿನ್ನಡೆ

November 14, 2025

ಭರತನಾಟ್ಯ ಪ್ರದರ್ಶನದಲ್ಲಿ ವಿಶ್ವ ದಾಖಲೆ ಬರೆದ ಡಾ. ರಶ್ಮಿ ವಿಜಯ್ ಹಾಗೂ ತಂಡ

November 14, 2025
Internet Image

ಮೊದಲ ಒಂದು ಗಂಟೆಯ ಎಣಿಕೆಯಲ್ಲೂ ಭಾರೀ ಮುನ್ನಡೆ ಕಾಯ್ದುಕೊಂಡ ಎನ್’ಡಿಎ

November 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!