No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕರ್ನಾಟಕಕ್ಕೆ ದೇವೇಗೌಡರ ನಿರಂತರ ಸೇವೆ ಅವಿಸ್ಮರಣೀಯ: ಸುರೇಶ್ ಋಗ್ವೇದಿ

ಚಾಮರಾಜನಗರ | ಹೆಚ್ ಡಿ ದೇವೇಗೌಡರ ಜನ್ಮದಿನ ಹಾಗೂ ಅವರ ಕೊಡುಗೆಗಳ ಕುರಿತ ಕಾರ್ಯಕ್ರಮ

kalpa News by kalpa News
May 20, 2026
in ಚಾಮರಾಜನಗರ
0
ಕರ್ನಾಟಕಕ್ಕೆ ದೇವೇಗೌಡರ ನಿರಂತರ ಸೇವೆ ಅವಿಸ್ಮರಣೀಯ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಭಾರತದ ಮಾಜಿ ಪ್ರಧಾನಿಗಳು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ದೇವೇಗೌಡರವರಿಗೆ H D Devegowda ಆಧ್ಯಾತ್ಮ ಶಕ್ತಿ, ಬಲ, ಚಿಂತನೆ, ಜ್ಞಾನ ಹಾಗೂ ಜೀವನ ಶೈಲಿಯ ಮಹತ್ವದ ಪರಿಣಾಮವಾಗಿ ದೇಶದ ಅಭಿವೃದ್ದಿ ಮತ್ತು ಕನ್ನಡಿಗರ ಗೌರವವನ್ನು ಹೆಚ್ಚಿಸುವಲ್ಲಿ ಅಪಾರ ಕೊಡುಗೆ ನೀಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಂಘಟನೆಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹೆಚ್ ಡಿ ದೇವೇಗೌಡರ ಜನ್ಮದಿನ ಹಾಗೂ ಅವರ ಕೊಡುಗೆಗಳ ಕುರಿತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಎಚ್ ಡಿ ದೇವೇಗೌಡರವರು ಮೊಟ್ಟಮೊದಲ ಕನ್ನಡಿಗ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವುದು 7 ಕೋಟಿ ಕನ್ನಡಿಗರಿಗೆ ವಿಶೇಷವಾದ ಗೌರವ ಪ್ರೀತಿ ಅಭಿಮಾನ ಇದೆ. ಕರ್ನಾಟಕಕ್ಕೆ ಅವರ ನಿರಂತರವಾದ ಸೇವೆ ಮರೆಯಲಾಗದು. ಅವರ ನೀರಾವರಿ ಯೋಜನೆಗಳು, ರೈತಪರ ಹೋರಾಟದ ಮೂಲಕ ಮಣ್ಣಿನ ಮಗನೆಂದೇ ಪ್ರಸಿದ್ಧರಾದವರು. ಕರ್ನಾಟಕದ ಆಲಮಟ್ಟಿ ಅಣೆಕಟ್ಟೆ ಯೋಜನೆ, ಕಾವೇರಿ ನದಿ ನೀರಿನ ವಿಚಾರವನ್ನು ಬಗೆಹರಿಸಿದವರು. ಪ್ರತ್ಯೇಕ ರೈಲ್ವೆ ವಲಯದ ಸ್ಥಾಪನೆಯ ಮೂಲಕ ರೈಲ್ವೆ ಯೋಚನೆಗಳು ಹಾಗೂ ಉದ್ಯೋಗಕ್ಕೆ ಅವಕಾಶ ದೊರಕಿಸಿದವರು. ಸರೋಜಿನಿ ಮಹಿಷಿಯ ಮೂಲಕ ಕನ್ನಡಿಗರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕಾರಣಕರ್ತರಾದವರು. ಇವರ ನೀರಾವರಿ ಯೋಜನೆಗಳು, ಆರ್ಥಿಕ ಚಿಂತನೆಗಳು,ಸಾಮಾಜಿಕ ಯೋಜನೆಗಳು, ಕೃಷಿ, ಕೈಗಾರಿಕೆ ಹಾಗೂ ವಿದೇಶಿ ಬಂಡವಾಳವನ್ನು ತರವಲ್ಲಿ ಇವರ ಪಾತ್ರ ಅಪಾರ. ಸರಳ, ಸದೃಢ ಪರಿಣಾಮಕಾರಿ ಜೀವನ ಶೈಲಿಯನ್ನು ಹೊಂದಿರುವ ದೇವೇಗೌಡರವರು ಅಪಾರ ದೈವ ಭಕ್ತರು. ಸಂಸ್ಕೃತಿ ಪರಂಪರೆಯ ಬಗ್ಗೆ ಕಳಕಳಿ ಹೊಂದಿ ನಿರಂತರ ಅನುಷ್ಠಾನದ ಮೂಲಕ ಬಲವನ್ನು ಶಕ್ತಿಯನ್ನು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವ ಮೂಲಕ ದೇಶ ಸೇವೆಯಲ್ಲಿ ತೊಡಗಿರುವವರು. ಇವರು ಕನ್ನಡಿಗರು ಎಂಬುದೇ ಬಹುದೊಡ್ಡ ಹೆಮ್ಮೆಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಕೃತಿ ಪರಂಪರೆ,ನೆಲ,ಜಲ, ಭಾಷೆ, ಜೊತೆಗೆ ನಿರಂತರವಾಗಿ ದೇಶಕ್ಕೆ ಸೇವೆ ಸಲ್ಲಿಸುತ್ತಿರುವ ಕನ್ನಡಿಗರ ಸಾಧನೆಗಳನ್ನು ಪರಿಚಯಿಸುವ ಕಾರ್ಯವನ್ನು ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.

Also read: GE Aerospace to Invest ₹100 Crore in Pune Facility, Boosting India Manufacturing

ಉದ್ಘಾಟನೆಯನ್ನು ತಮಿಳು ಸಂಘದ ಅಧ್ಯಕ್ಷರು ಹಾಗೂ ಹಿರಿಯರಾದ ಜಗದೀಶನ್ ರವರು ನೆರವೇರಿಸಿ ಮಾತನಾಡುತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಣ್ಣಿನ ಮಗ ಎಂದೇ ಪ್ರಸಿದ್ಧರಾದ ದೇವೇಗೌಡ ರವರ ಕೊಡುಗೆಗಳ ಕುರಿತು ಕಾರ್ಯಕ್ರಮ ರೂಪಿಸಿ ಉದ್ಘಾಟನೆ ನೆರವೇರಿಸಲು ಅವಕಾಶ ನೀಡಿದ ಪರಿಷತ್ತಿನ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿ ಕನ್ನಡದ ಪ್ರಧಾನಿಗಳು ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆ. ಚಾಮರಾಜನಗರಕ್ಕೆ ಹಲವಾರು ಬಾರಿ ಭೇಟಿ ನೀಡಿ ನಮ್ಮ ಮನೆಯಲ್ಲಿ ಉಪಹಾರ ಸೇವಿಸಿರುವುದು ಸಂತೋಷವಾಗಿದೆ. ದೇವೇಗೌಡರವರು ಆಡಳಿತ ದೂರದೃಷ್ಟಿಯ ಮೂಲಕ ಚಾಮರಾಜನಗರಕ್ಕೆ ಅನೇಕ ಯೋಜನೆಗಳನ್ನು ವಿಶೇಷವಾಗಿ ಮೈಸೂರು ಪ್ರಾಂತ್ಯದ ರೈತರ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿದ ಮಹಾವ್ಯಕ್ತಿ. ದೇಶದ ಪ್ರಧಾನಿಗಳಾಗಿ ಕರ್ನಾಟಕದ ಮುಖ್ಯಮಂತ್ರಿಗಳಾಗಿ ನೀರಾವರಿ ರೈತರ ಹಾಗೂ ಸಾಮಾನ್ಯ ಜನರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಅನುಷ್ಠಾನ ಮಾಡಿಸಿ ಕೈಗಾರಿಕೆ ರಸ್ತೆ ಅಭಿವೃದ್ಧಿ ಸೇತುವೆ ನಿರ್ಮಾಣ ಹಾಗೂ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜನಪದ ರವಿಚಂದ್ರಪ್ರಸಾದ್ ಕಹಳೆ ಮಾತನಾಡಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ದೇವೇಗೌಡರವರು ಚಾಮರಾಜನಗರಕ್ಕೆ ಬಂದು ಹೋದ ನಂತರ ಪ್ರಧಾನಿಗಳಾಗಿಸೇವೆ ಸಲ್ಲಿಸಿದರು ಚಾಮರಾಜನಗರಕ್ಕೆ ಬಂದು ಹೋದರೆ ಅಧಿಕಾರ ಹೋಗುತ್ತದೆ ಎಂಬ ಕಳಂಕವನ್ನು ನಿವಾರಿಸಿದವರು. ನಗರಕ್ಕೆ ಆಗಮಿಸುವ ಎಲ್ಲರಿಗೂ ವಿಶೇಷ ಅಧಿಕಾರ ಸಿಗುವ ಅವಕಾಶವಿದೆ. ದೇವೇಗೌಡರವರು ಅಭಿವೃದ್ಧಿಯ ಕನಸುಗಳನ್ನು ಸಾಕಾರಗೊಳಿಸಿದವರು ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಸರಸ್ವತಿ, ಬಿಕೆ ಆರಾಧ್ಯ, ಶಿವಲಿಂಗ ಮೂರ್ತಿ, ಮಹೇಶ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

GE Aerospace to Invest ₹100 Crore in Pune Facility, Boosting India Manufacturing

Next Post

LinkedIn shares Bengaluru’s Top Companies for career growth in 2026

kalpa News

kalpa News

Next Post
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL