Thursday, October 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಾಮರಾಜನಗರ

ಚಾಮರಾಜನಗರ | ಡಾ.ಸುಧಾಮೂರ್ತಿ ಹೆಮ್ಮೆಯ ಸಾಹಿತಿ, ಶ್ರೇಷ್ಠ ಕನ್ನಡತಿ | ಸುರೇಶ್ ಋಗ್ವೇದಿ

August 20, 2025
in ಚಾಮರಾಜನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡದ ಹೆಮ್ಮೆಯ ಸಾಹಿತಿ, ಶ್ರೇಷ್ಠ ಕನ್ನಡತಿ ಡಾ. ಸುಧಾಮೂರ್ತಿ #Sudha Murthy ಕನ್ನಡದ ಅಸಾಮಾನ್ಯ ಸಾಧಕರಾಗಿದ್ದು, ಕನ್ನಡ ಇಂಗ್ಲೀಷ್, ಮರಾಠಿ, ಭಾಷೆಯ ಲೇಖಕರಾಗಿ, ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿರುವ ಸುಧಾಮೂರ್ತಿ ಕನ್ನಡಿಗರ ಶ್ರೇಷ್ಠ ಚಿಂತಕರು, ಸರಳ ಸಜ್ಜನರಾಗಿದ್ದಾರೆ ಎಂದು ಸಂಸ್ಕೃತಿ ಚಿಂತಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಡಾ. ಸುಧಾ ಮೂರ್ತಿ ಅವರ ಸಾಹಿತ್ಯ ಕೊಡುಗೆಗಳು ಹಾಗೂ ಸಮಾಜ ಸೇವೆಯ ಮಹತ್ವ ಕುರಿತು ಅವರು ಮಾತನಾಡಿದರು.
ಸುಧಾಮೂರ್ತಿ ಅವರು ಸುಮಾರು 19ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ . ಅವರ ಕಥೆ ,ಕಾದಂಬರಿ, ಚಿಂತನೆ ಹಾಗೂ ಮಕ್ಕಳ ಸರಣಿಯ ಪುಸ್ತಕಗಳು ವಿಶ್ವ ಪ್ರಸಿದ್ಧಿಯಾಗಿದೆ. ನುಡಿದಂತೆ ನಡೆಯುವ ಆದರ್ಶ ಸರಳ ಬದುಕಿನ ಸುಧಾಮೂರ್ತಿಯವರು ಕನ್ನಡ ನಾಡಿನ ಹೆಮ್ಮೆಯ ತಾಯಿ ಎಂದರು.

ನನ್ನ ಅಜ್ಜಿಗೆ ನಾನು ಹೇಗೆ ಓದಲು ಕಲಿಸಿದೆ ಮತ್ತು ಇತರ ಕಥೆಗಳು 15 ಭಾಷೆಗೆ ಭಾಷಾಂತರಗೊಂಡಿದೆ. ಅವಿಭಕ್ತ ಕುಟುಂಬದಲ್ಲಿ ಅಜ್ಜಿಯ ಪಾತ್ರ, ಕುಟುಂಬ ನಿರ್ವಹಣೆ, ಅಜ್ಜಿಯ ಪ್ರೀತಿ, ಕರುಣೆ, ವಿಶ್ವಾಸ ನಂಬಿಕೆ, ಧೈರ್ಯ ಎಲ್ಲವನ್ನು ಅರ್ಥಗರ್ಭಿತವಾಗಿ ತಿಳಿಸಿ ಸಮಾಜಕ್ಕೆ ಕುಟುಂಬ ಪ್ರಜ್ಞೆಯನ್ನು ಹೆಚ್ಚಿಸಿರುವ ಸುಧಾ ಮೂರ್ತಿಯವರು ಹಕ್ಕಿಯ ತೆರದಲ್ಲಿ, ಶಾಲಾ ಮಕ್ಕಳಿಗಾಗಿ ಕಂಪ್ಯೂಟರ್, ಕಾವೇರಿಯಿಂದ ಮೇ ಕಾಂಗಿಗೆ, ಡಾರ್ಲ ಸೊಸೆ, ಋಣ, ಮಹಾಶ್ವೇತೆ, ಮನದ ಮಾತು ಗುಟ್ಟೊಂದು ಹೇಳುವೆ ಮುಂತಾದ ಪುಸ್ತಕಗಳು ಜನಪ್ರಿಯವಾಗಿವೆ ಎಂದರು.
ಅಸಾಮಾನ್ಯ ಸಾಧಕರಾಗಿ ಲೇಖಕರಾಗಿ, ಸಮಾಜ ಸೇವಕರಾಗಿ ದಾನಿಗಳಾಗಿ, ಗ್ರಾಮೀಣ ಅಭಿವೃದ್ಧಿ, ಗ್ರಂಥಾಲಯ, ಶಾಲಾ ಶಿಕ್ಷಣ, ಹಾಗೂ ದಾನಕ್ಕೆ ಹೆಸರಾಗಿ ನಾಡಿನ ಕಷ್ಟಗಳಿಗೆ ಸದಾ ಕಾಲ ಸ್ಪಂದಿಸುವ ಸುಧಾ ಮೂರ್ತಿಯವರು ಅಮೂಲ್ಯವಾದ ನೀತಿಗಳನ್ನು ತಿಳಿಸಿದ್ದಾರೆ. ಸುಧಾ ಮೂರ್ತಿ ಅವರ ಪಂಚ ಸೂತ್ರಗಳು ಜಗತ್ಪçಸಿದ್ಧವಾಗಿದೆ. ಬೇರೆಯವರಿಗೆ ನೆರವಾಗಿ, ದಯೆ ತೋರಿ, ಪರಸ್ಪರ ಶಕ್ತಿ ಮತ್ತು ದೌರ್ಬಲ್ಯವನ್ನು ಸ್ವೀಕರಿಸಿ, ಧನಾತ್ಮಕ ಚಿಂತನೆ ಮಾಡಿ. ನಿಮ್ಮದೇ ರೀತಿಯಲ್ಲಿ ಜೀವನ ಸಾಗಿಸಿ, ಮುಂತಾದ ಅವರ ಚಿಂತನೆಗಳು ಸಮಾಜಕ್ಕೆ ಉನ್ನತವಾದ ಮಾರ್ಗದರ್ಶನ ನೀಡಿದೆ ಎಂದರು.

ಇವರ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು, ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು, ವಿವಿಧ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಪಾರ ಜ್ಞಾನಿಗಳಾಗಿ, ಸರಳ ಸಜ್ಜನ ಬದುಕನ್ನು ನಡೆಸುತ್ತಿರುವ ಸುಧಾ ಮೂರ್ತಿ ನಮ್ಮೆಲ್ಲರ ಹೆಮ್ಮೆ ಎಂದು ಋಗ್ವೇದಿ ತಿಳಿಸಿದರು.
ಅಖಿಲ ಕರ್ನಾಟಕ ಕನ್ನಡ ಮಹಾಸಭೆಯ ರಾಜ್ಯ ಅಧ್ಯಕ್ಷ ಶ್ರೀನಿವಾಸ್ ಗೌಡರವರು ಸುಧಾ ಮೂರ್ತಿ ಅವರ ಪುಸ್ತಕದ ಸಾಲುಗಳನ್ನು ಓದುವ ಮೂಲಕ ಉದ್ಘಾಟಿಸಿ, ಆಧುನಿಕ ಪ್ರಪಂಚದಲ್ಲಿ ಅತ್ಯಂತ ಶ್ರೀಮಂತಿಕೆಯನ್ನು ಹೊಂದಿ ಸರಳವಾದ ಬದುಕನ್ನು ನಡೆಸುತ್ತಿರುವ ಸುಧಾ ಮೂರ್ತಿಯವರು ಒಂದು ರೀತಿಯಲ್ಲಿ ಮಹಾತ್ಮ ಗಾಂಧಿಯವರAತೆ ಬದುಕಿ, ಸಮಾಜಕ್ಕೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ ಎಂದರು.

ಸರಳತೆಗೆ ಸಾಕ್ಷಿಯಾಗಿರುವ ಸುಧಾ ಮೂರ್ತಿ ಆಡಂಬರದ ಜೀವನದಿಂದ ದೂರವಿರುವಂತೆ ಯುವಕರಿಗೆ ಸದಾ ಕಾಲ ದಾರಿದೀಪವಾಗಿದ್ದಾರೆ. ಅಹಂಕಾರವನ್ನು ಬಿಟ್ಟು, ಸರಳತೆಯ ಮೂಲಕ ಶ್ರೇಷ್ಠ ಬದುಕನ್ನು ನಡೆಸಬಹುದು ಎಂಬುದು ಸುಧಾಮೂರ್ತಿ ಅವರ ಜೀವನ ಮತ್ತು ಬದುಕಿನಿಂದ ಅರ್ಥವಾಗುತ್ತದೆ ಎಂದು ತಿಳಿಸಿದರು.
ಭಾರತ ದೇಶದ ಪ್ರಮುಖ ಸಮಾಜಸೇವಕರಾಗಿ ಕಲೆ ಸಾಹಿತ್ಯ, ಸಂಗೀತ, ಶಿಕ್ಷಣ, ಕಂಪ್ಯೂಟರ್ ಎಲ್ಲ ಕ್ಷೇತ್ರಗಳಲ್ಲಿ ಅವರ ಸೇವೆ ಮರೆಯಲಾಗದು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಋಗ್ವೇದಿಯವರು ಸುಧಾ ಮೂರ್ತಿ ಅವರ ಸಾಹಿತ್ಯ ಕೊಡುಗೆ ಮತ್ತು ಸಮಾಜ ಸೇವೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ರೂಪಿಸಿ ಸಮಾಜಕ್ಕೆ ಅರ್ಥಗರ್ಭಿತವಾದ ಕಾರ್ಯಕ್ರಮವನ್ನು ನೀಡಿದ್ದಾರೆ ಎಂದು ತಿಳಿಸಿದರು.

ಹಿರಿಯ ಕನ್ನಡ ಚಳುವಳಿಗಾರ ರಾಜಗೋಪಾಲ್ ರವರು ಸುಧಾ ಮೂರ್ತಿ ಅವರ ಜನ್ಮದಿನದ ಅಂಗವಾಗಿ ಸಿಹಿ ಹಂಚಿ ಪುಸ್ತಕಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರಪ್ರಸಾದ್, ಬಿಕೆ ಆರಾಧ್ಯ, ಸರಸ್ವತಿ, ಶಿವಲಿಂಗ ಮೂರ್ತಿ, ಪಣ್ಯದ ಹುಂಡಿ ರಾಜು, ಮಹೇಶ್ ಗೌಡ, ಸುರೇಶ್ ಗೌಡ, ಮನೋಜ್, ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSudha Murthyಚಾಮರಾಜನಗರಡಾ. ಸುಧಾಮೂರ್ತಿ
Previous Post

Life Restored After 4 Years of Struggle with Rare Huge Fibroid

Next Post

KSRTC ನೌಕರರು ಸೇವೆಯಲ್ಲಿದ್ದಾಗ ಮೃತರಾದರೆ ನೀಡುವ ಪರಿಹಾರ ಮೊತ್ತ ಏರಿಕೆ | ಎಷ್ಟು ಹೆಚ್ಚಳ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

KSRTC ನೌಕರರು ಸೇವೆಯಲ್ಲಿದ್ದಾಗ ಮೃತರಾದರೆ ನೀಡುವ ಪರಿಹಾರ ಮೊತ್ತ ಏರಿಕೆ | ಎಷ್ಟು ಹೆಚ್ಚಳ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

October 1, 2025
Internet Image

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

October 1, 2025

ಭದ್ರಾವತಿ | 24 ವರ್ಷಗಳಿಂದ ಗೊಂಬೆ ಅಲಂಕಾರ ಮಾಡುವ ಈ ಮನೆಯಲ್ಲಿ ಈ ಬಾರಿಯೂ ವಿಶೇಷ

October 1, 2025

ಅ.2ರಂದು ಗಾಂಧಿ ಬಸಪ್ಪ ಕುಟುಂಬದಿಂದ ಗಾಂಧೀಜಯಂತಿ ಕಾರ್ಯಕ್ರಮ

October 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

October 1, 2025
Internet Image

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

October 1, 2025

ಭದ್ರಾವತಿ | 24 ವರ್ಷಗಳಿಂದ ಗೊಂಬೆ ಅಲಂಕಾರ ಮಾಡುವ ಈ ಮನೆಯಲ್ಲಿ ಈ ಬಾರಿಯೂ ವಿಶೇಷ

October 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!