No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

kalpa News by kalpa News
April 22, 2026
in ಚಾಮರಾಜನಗರ
0
ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಉಪನಿಷತ್ತು, ಬ್ರಹ್ಮಸೂತ್ರ ಮತ್ತು ಭಗವದ್ಗೀತೆಗೆ ಭಾಷ್ಯವನ್ನು ಬರೆಯುವ ಮೂಲಕ ಅರ್ಥ ವಿಶ್ಲೇಷಿಸಿ ಸಾಮಾನ್ಯ ಜನರಿಗೂ ಕೂಡ ಭಾರತದ ಸನಾತನ ಧರ್ಮದ ಮೂಲ ತತ್ವಗಳನ್ನು ತಿಳಿಯಪಡಿಸಿದ ತತ್ವಜ್ಞಾನಿಗಳಾದ ಆದಿಶಂಕರಾಚಾರ್ಯರು AdiShankaracharyaru ವಿಶ್ವಜ್ಞಾನಿಗಳು ಆಗಿದ್ದವರು. ಅವರ ತತ್ವಗಳು ಜಗತ್ತಿನ ಎಲ್ಲೆಡೆ ವ್ಯಾಪಕವಾಗಿ ಹರಡಿದೆ ಎಂದು ಶ್ರೀ ಶಂಕರ ಅಭಿಯಾನ ಕರ್ನಾಟಕ ಪ್ರಧಾನರಾದ ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಶಂಕರಪುರ ಶ್ರೀರಾಮ ಮಂದಿರದಲ್ಲಿ ಶಂಕರ ಜಯಂತಿ Shankara Jayanthi ಮತ್ತು ವಿಶ್ವ ತತ್ವಜ್ಞಾನಿಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತ ಆದಿ ಶಂಕರರ ಜನ್ಮದಿನವನ್ನು ತತ್ವಜ್ಞಾನಿಗಳ ದಿನಾಚರಣೆಯಂದು ಘೋಷಿಸಿರುವ ಭಾರತ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ಕರ್ನಾಟಕ ಸರ್ಕಾರವು ನಿರಂತರವಾಗಿ ಶಂಕರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತದ ಮೂಲಕ ರಾಜ್ಯದ ಎಲ್ಲೆಡೆ ಆಚರಿಸುವ ಮೂಲಕ ಅದ್ವೈತ ತತ್ವ ಸಿದ್ಧಾಂತದ ತಿಳುವಳಿಕೆಯ ಕಾರ್ಯವನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯವೆಂದು ತಿಳಿಸಿ ಆದಿ ಶಂಕರಾಚಾರ್ಯರು ತಮ್ಮ ವಿಶೇಷ ಜ್ಞಾನ, ದೂರ ದೃಷ್ಟಿ ಮತ್ತು ಚಿಂತನೆಯ ಮೂಲಕ ಭಾರತದ ನಾಲ್ಕು ದಿಕ್ಕುಗಳಲ್ಲಿ ಮಠಗಳನ್ನು ಸ್ಥಾಪಿಸುವ ಮೂಲಕ ಶೃಂಗೇರಿ ಪುರಿ ದ್ವಾರಕ ಬದರಿಗಳಲ್ಲಿ ನಾಲ್ಕು ವೇದಗಳ ಮೂಲ ತತ್ವಗಳ ಸಂರಕ್ಷಣೆ ಹಾಗೂ ಸಾಂಸ್ಕೃತಿಕ, ಆದ್ಯಾತ್ಮಿಕ ಶಕ್ತಿಯನ್ನು ಪುನರುಜ್ಜೀವನಗೊಳಿಸಿ ಅಖಂಡ ಭಾರತದ ನಿರ್ಮಾಣದ ಗುರಿಯತ್ತ ಸಾಗಲು ಶಂಕರಾಚಾರ್ಯರೇ ಕಾರಣ ಎಂದು ತಿಳಿಸಿದರು.

ಶಂಕರಾಚಾರ್ಯರನ್ನು ಶಿವನ ಅವತಾರವೆಂದು ಪುರಾಣಗಳಲ್ಲಿ ನಂಬಿಕೆ ಇದೆ. ಕೇರಳದ ಕಾಲಡಿಯಲ್ಲಿ ಜನಿಸಿ 16 ವರ್ಷಗಳವರೆಗೆ ಸಕಲ ಅಧ್ಯಯನವನ್ನು ನಡೆಸಿ ಇಡೀ ದೇಶವನ್ನು ಮೂರು ಬಾರಿ ಸಂಚರಿಸಿ ರಾಷ್ಟ್ರೀಯ ಏಕತೆಯನ್ನು ಭಾವೈಕ್ಯತೆಯನ್ನು ಮೂಡಿಸಿ ಹಿಂದೂ ಧರ್ಮದಲ್ಲಿದ್ದ ಅನೇಕ ಮೂಲಭೂತ ಒಡಕುಗಳನ್ನು ಸರಿಪಡಿಸಿ 72 ಕುಪಂತಗಳನ್ನು ಒಂದುಗೂಡಿಸಿ ಜನರಲ್ಲಿ ಏಕತೆಯನ್ನು ಮೂಡಿಸಿದ ಆದಿಶಂಕರಾಚಾರ್ಯರು ಭಾರತದ ಜಗದ್ಗುರು ಆಗಿದ್ದಾರೆ ಎಂದರು.
ಅವರದ್ವೈತ ಸಿದ್ದಾಂತವು ಇಂದು ಇಡೀ ಜಗತ್ತಿನಲ್ಲಿ ವಿಶೇಷ ಅಧ್ಯಯನಕೆ ಒಳಪಟ್ಟ ವಿಚಾರವಾಗಿದೆ ಎಂದು ಬಣ್ಣಿಸಿ, ಶಂಕರಾಚಾರ್ಯ ವಿರಚಿತ ನೂರಾರು ಸ್ತೋತ್ರಗಳು ಅಧ್ಯಯನ ಉಪನಿಷತ್ತು ಬ್ರಹ್ಮಸೂತ್ರ ಭಗವದ್ಗೀತೆಯ ದಿವ್ಯ ಸಂದೇಶಗಳನ್ನು ಅರಿಯುವ ಕೆಲಸವನ್ನು ಮಾಡಬೇಕಾಗಿದೆ ಶಂಕರಾಚಾರ್ಯರ ಮಾತೃಭಕ್ತಿ ಬಡತನ ನಿರ್ಮೂಲನೆ, ಸಾಮಾಜಿಕ ಏಕತೆ,ಆಧ್ಯಾತ್ಮದ ಬದುಕು, ಭಗವಂತನ ಸ್ಮರಣೆ ಹಾಗೂ ಜ್ಞಾನಕ್ಕೆ ಮಹತ್ವವನ್ನು ನೀಡಿದ ಆಚಾರ್ಯರು ಸೂರ್ಯ ಚಂದ್ರ ಇರುವವರೆಗೂ ಶಾಶ್ವತವಾದ ಸ್ಥಾನವನ್ನು ಪಡೆಯುತ್ತಾರೆ ಎಂದು ಋಗ್ವೇದಿ ತಿಳಿಸಿದರು.

ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಜಿ ಎಂ ಹೆಗಡೆ ಯವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಉದ್ಘಾಟಿಸಿ ಶಂಕರ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ಮಂದಿರದ ಅಧ್ಯಕ್ಷರಾದ ಪ್ರತಾಪ್ ರವರು ವಹಿಸಿ ಶಂಕರ ಜಯಂತಿಯನ್ನು ನಿರಂತರವಾಗಿ ಶ್ರೀರಾಮ ಮಂದಿರದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.ಪ್ರತಿಯೊಬ್ಬರು ಶಂಕರರ ದಿವ್ಯ ಸಂದೇಶಗಳ ಅನುಸರಣೆಯನ್ನು ಮಾಡಿದಾಗ ಆತ್ಮ ತೃಪ್ತಿ ಸಿಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀರಾಮ ಮಂದಿರದ ಕಾರ್ಯದರ್ಶಿ ಸತೀಶ್ ಕೇಶವಮೂರ್ತಿ, ಸುದರ್ಶನ್ ರಾಧಾಕೃಷ್ಣ, ವತ್ಸಲಾ ರಾಜಗೋಪಾಲ್, ನಗರಾಸಭಾ ಮಾಜಿ ಉಪಾಧ್ಯಕ್ಷೆ ಮಮತಾ, ಬ್ರಾಹ್ಮಣ ಸಂಘದ ಬಾಲ ಸುಬ್ರಹ್ಮಣ್ಯ ಮುಂತಾದವರು ಇದ್ದರು.

ಸಾಮೂಹಿಕ ಶ್ರೀ ಶಂಕರ ಅಷ್ಟೋತ್ತರ ಪಾರಾಯಣ, ಭಜನೆ, ಗಾಯನ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: AdiShankaracharyaruChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShankara Jayanthiಆದಿಶಂಕರಾಚಾರ್ಯಚಾಮರಾಜನಗರಶಂಕರ ಜಯಂತಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

Next Post

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

kalpa News

kalpa News

Next Post
ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL