ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವವನ್ನು Chandragutti Renukamba Fair ಸರ್ಕಾರದ ಆದೇಶದಂತೆ ಹಿಂದಿನಿಂದ ನಡೆದು ಬಂದ ಸಂಪ್ರದಾಯದಂತೆ ಆಚರಿಸಲಾಗುವುದು ಎಂದು ಸಾಗರ ಉಪ ವಿಭಾಗಾಧಿಕಾರಿ ಆರ್. ಯತೀಶ್ ಹೇಳಿದರು,
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿ, ಮಾರ್ಚ್ 15 ರಿಂದ 20ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು ಮಾರ್ಚ್ 18 ರಂದು ಮಹಾರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಕ್ಷೇತ್ರವು ಅಭಿವೃದ್ಧಿಯಿಂದ ಕುಂಠಿತವಾಗಿದೆ ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ ಆದರೆ ಭಕ್ತರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ ಎಂದು ಸಾರ್ವಜನಿಕರು ಸಭೆಯಲ್ಲಿ ದೂರಿದರು. ರಥಬೀದಿ ಅಂಗಡಿಗಳಲ್ಲಿ ರಾಸಾಯನಿಕ ಕುಂಕುಮ ಮಾರಾಟ ಮಾಡದಂತೆ ಸೂಚನೆ ನೀಡಬೇಕೆಂದು ಎಂದು ಗ್ರಾಮಸ್ಥರು ಒತ್ತಾಯಿಸಿದರು.

Also read: ಗಮನ ಸೆಳೆದ ಉಸ್ತಾದ್ ಝಾಕೀರ್ ಹುಸೇನ್ ತಬಲಾ & ಪಂಡಿತ್ ನೀಲಾದ್ರಿ ಕುಮಾರ್ ಸಿತಾರ್ ಜುಗಲ ಬಂದಿ
ಜಾತ್ರೆಗೆ ಸೀಮಿತವಾಗಿ ಅಭಿವೃದ್ಧಿಪಡಿಸದೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭಕ್ತರಿಗೆ ಅನುಕೂಲ ವಾಗುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಸಚಿವ ಎಸ್. ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಚಂದ್ರಗುತ್ತಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸೋಣ ಎಂದರು.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post