ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದ ನಾಣ್ಯಗಳ ಏಣಿಕೆ ಕಾರ್ಯವು ದೇವಸ್ಥಾನದ ಆಡಳಿತ ಮಂಡಳಿ ಕಛೇರಿಯಲ್ಲಿ ನಡೆಯಿತು.
ಚಂದ್ರಗುತ್ತಿ ನಾಡಕಛೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಆಡಳಿತ ಅಧಿಕಾರಿ ವಿ.ಎಲ್ ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಶ್ರಾವಣ ಮಾಸದಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ನಾಣ್ಯಗಳ ಏಣಿಕೆ ಕಾರ್ಯ ನಡೆಸಲಾಯಿತು.
ಈ ಹಿಂದೆ ದೇವಸ್ಥಾನದ ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದಾಗ 25,08,680 ರೂ. ಸಂಗ್ರಹವಾಗಿತ್ತು. ಅದರಲ್ಲಿ ಉಳಿದ ಕಾಣಿಕೆ ನಾಣ್ಯಗಳನ್ನು ಎಣಿಸಿದಾಗ ಸುಮಾರು 3,64,400 ರೂ. ಕಾಣಿಕೆ ನಾಣ್ಯಗಳು ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ ಸಿ ಕ್ಯಾಮೆರಾ ಆಳವಡಿಸಲಾಗಿತ್ತು.
Also read: Forensic Sciences, CCTNS, ICJS & legal reforms: Milestones in India’s justice system
ಹುಂಡಿ ಏಣಿಕೆ ಕಾರ್ಯದಲ್ಲಿ ತಾಲೂಕು ಸಾಮಾಜಿಕ ಭದ್ರತೆ ಯೋಜನೆಯ ಶಿರಸ್ತೆದಾರ್ ನಿರ್ಮಲ ಪ್ರಭಾಕರ್, ಮುಜರಾಯಿ ವಿಷಯ ನಿರ್ವಾಹಕರಾದ ಎಂ ಶೃತಿ, ಕೆನರಾ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ನಾಗರಾಜ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್, ಹಾಗೂ ಸಮಿತಿ ಸದಸ್ಯರು ತಾಲೂಕು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post