ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಸಮೀಪದ ಹರೀಶಿ ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ 2 ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನುಸೂಯ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಎಲ್. ರವಿಕುಮಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷೆ ಅನುಸೂಯ ಮಾತನಾಡಿ, ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ. ನನಗೆ ಅಧ್ಯಕ್ಷ ಸ್ಥಾನ ಲಭಿಸಲು ಕಾರಣೀಕರ್ತರಾದ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರಿಗೆ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಚ್ ಗಣಪತಿ ಹುಲ್ತಿಕೊಪ್ಪ ಮಾತನಾಡಿ, ಕ್ಷೇತ್ರದ ಜನತೆಯ ಆಶೀರ್ವಾದದಿಂದ ಎಸ್. ಮಧು ಬಂಗಾರಪ್ಪ ಅವರು ಕ್ಷೇತ್ರದ ಶಾಸಕರಾಗುವ ಜೊತೆಗೆ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಗ್ರಾಮ ಪಂಚಾಯ್ತಿಗೆ ಅವಶ್ಯವಿರುವ ಅನುದಾನವನ್ನು ಕೇಳುವ ಮೂಲಕ ಪಂಚಾಯ್ತಿ ವ್ಯಾಪ್ತಿ ಸೇರಿದಂತೆ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.
ಗ್ರಾಪಂ ಸದಸ್ಯರಾದ ವಜ್ರಕುಮಾರ, ಕೆ.ಟಿ. ರಾಕೇಶ್, ಪಿ. ಕೃಷ್ಣ, ಜಯಲಕ್ಷ್ಮಿ, ಶೈಲಜಾ, ಸರೋಜ, ಮಂಜುಳಾ, ಎಪಿ.ಎಂ.ಸಿ ಸದಸ್ಯ ಜಯಶೀಲಗೌಡ್ರು, ಹರೀಶಿ ವಿಎಸ್ಎಸ್ ಅಧ್ಯಕ್ಷ ಶಿವಾನಂದ್, ಚಂದ್ರಗುತ್ತಿ ಗ್ರಾಪಂ ಸದಸ್ಯ ರೇಣುಕಾಪ್ರಸಾದ್, ಕಾಂಗ್ರೆಸ್ ಮುಖಂಡರಾದ ಸುಧಾಕರ್ ನಾಯ್ಕ, ಮಂಜು ಮುಗೇರ್, ಪ್ರದೀಪ್ ಬಾಡದಬೈಲು, ವಿನಾಯಕ್ ಹೆಗಡೆ, ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post