Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಪ್ರತಿಯೊಬ್ಬ ಶಾಸಕರು ನಮ್ಮೊಂದಿಗೆ ಕೈಜೋಡಿಸಿದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಪವಿತ್ರ ರಾಮಯ್ಯ

August 1, 2021
in ದಾವಣಗೆರೆ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್

ಚನ್ನಗಿರಿ:
ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ಸುಮಾರು 30 ಮಂದಿ ವಿಧಾನ ಸಭಾ ಸದಸ್ಯರು ಪ್ರತಿನಿಧಿಸುತ್ತಾರೆ, ಅವರೆಲ್ಲರೂ ಭದ್ರಾ ಕಾಡಾ ಪ್ರಾಧಿಕಾರಕ್ಕೆ ಪ್ರತಿವರ್ಷ 2 ಕೋಟಿಯಂತೆ ಅನುದಾನ ಒದಗಿಸಿ ಕೊಟ್ಟರೆ ಇದರಿಂದ 60ಕೋಟಿ ಅನುದಾನ ಲಭ್ಯವಾಗುತ್ತದೆ. ಈ ಅನುದಾನದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಎದುರಿಸುತ್ತಿರುವ ನೂರಾರು ಸಮಸ್ಯೆಗಳು ಪರಿಹರಿಸುವುದರ ಜೊತೆಗೆ ಪ್ರಾಧಿಕಾರವನ್ನು  ಮಾದರಿಯಾಗಿ ಅಭಿವೃದ್ದಿ ಪಡಿಸಲು ಅನುಕೂಲವಾಗುತ್ತದೆ ಎಂದು ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅಭಿಪ್ರಾಯಪಟ್ಟರು.

ಚನ್ನಗಿರಿ ತಾಲ್ಲೂಕು ಕತ್ತಲಗೆರೆ ಗ್ರಾಮದಲ್ಲಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಚ್ಚುಕಟ್ಟು ವ್ಯಾಪ್ತಿಯ ಪ್ರತಿಯೊಂದು ಅಭಿವೃದ್ದಿ ಕೆಲಸಗಳು ಪ್ರಾಧಿಕಾರದ ವತಿಯಿಂದ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಾಸಕರು ಆಲೋಚನೆ ಮಾಡಿ ನಮ್ಮೊಂದಿಗೆ ಕೈಜೋಡಿಸಿದರೆ ರೈತರು ಎದುರಿಸುತ್ತಿರುವ ಸಾಕಷ್ಟು ಸಮಸ್ಯೆಳನ್ನುಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ ಆಯಾ ಶಾಸಕರು ಒದಗಿಸಿದ ಅನುದಾನವನ್ನು ಆಯಾ ಕ್ಷೇತ್ರದ ಅಚ್ಚುಕಟ್ಟು ಅಭಿವೃದ್ದಿಗೆ ವಿನಯೋಗಿಸುತ್ತೇನೆ ಎಂದು ಭರವಸೆ ನೀಡಿದರು.

ನನ್ನ ದುರದೃಷ್ಟ ಎಂಬಂತೆ ನಾನು ಭದ್ರಾ ಕಾಡಾ ಅಧ್ಯಕ್ಷರಾಗಿ ನೇಮಕಗೊಂಡ ಸಮಯದಲ್ಲಿ  ಕೋವಿಡ್-19 ಲಗ್ಗೆಯಿಟ್ಟಿತು, ಅದನ್ನು ವ್ಯಕ್ತಿಯಿಂದ ವ್ಯಕ್ತಿಗೆ ಹರಡದಂತೆ ತುಂಡರಿಸಲು ಲಾಕ್ ಡೌನ್ ಮಾಡಬೇಕಾದ ಅನಿವಾರ್ಯತೆ ರಾಜ್ಯ ಸರ್ಕಾರಕ್ಕೆ ಎದುರಾಯಿತು. ಪರಿಣಾಮ ಎಲ್ಲಾ ರಂಗಗಳು ಮುಚ್ಚುವಾಂತಾಗಿ ಬೊಕ್ಕಸಕ್ಕೆ ಕೊಡಲಿ ಪೆಟ್ಟು ಬಿದ್ದ ಪರಿಣಾಮ ಅಭಿವೃದ್ದಿಯ ಕಾರ್ಯಗಳಿಗೆ ಅನುದಾನದ ಕೊರತೆ ಎದುರಾಗುವ ಸಂದಿಗ್ಧ ಪರಿಸ್ಥಿತಿ ನಾವೆಲ್ಲರೂ ಕಾಣಬೇಕಾಯಿತು. ಕೇವಲ ಸರ್ಕಾರ ಕೊಡುವ ಗೌರವಧನ ಪಡೆಯಲು ಕಚೇರಿಗೆ ಪ್ರತಿದಿನ ಬಂದು ಕೂರಲು ಮನಸ್ಸು ಒಪ್ಪಲಿಲ್ಲ, ಇಂತಹ ಸಮಯದಲ್ಲಿ ಸರ್ಕಾರದೊಂದಿಗೆ ನಿಲ್ಲಬೇಕು ಸರ್ಕಾರದ ಮೇಲೆ ಒತ್ತಡ ತರಬಾರದು ಎಂದು ನಿರ್ಧರಿಸಿ ಪರ್ಯಾಯ ಮಾರ್ಗದೆಡೆಗೆ ಆಲೋಚನೆ ಮಾಡಿದಾಗ ನರೇಗಾ ಅನುದಾನ ಬಳಸಿಕೊಳ್ಳುವ ಆಲೋಚನೆ ಹೊಳೆಯಿತು, ಇದರಿಂದ ಕೊನೆಯ ಭಾಗಕ್ಕೆ ನೀರು ಕೊಡಲು ಅನುಕೂಲವಾಯಿತು ಎಂದು ಹೇಳಿದರು.

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ ನಿರ್ದೇಶಕರಾದ ನಾಗರಾಜಪ್ಪ ಮಾತನಾಡಿ, ಪವಿತ್ರ ರಾಮಯ್ಯ ಅವರು ಮೂಲತಃ ರೈತ ಸಂಘದಿಂದ ಬಂದವರು ಅವರಿಗೆ ರೈತರ ಪ್ರತಿಯೊಂದು ಸಮಸ್ಯೆಗಳ ಬಗ್ಗೆ ಅರಿವಿದೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನ ಒದಗಿಸಲು ಕೈಜೋಡಿಸುತ್ತೆವೆ ಒಬ್ಬ ಹೆಣ್ಣು ಮಗಳಾಗಿ ಮಾಡುತ್ತಿರುವ ಸಾಧನೆ ಎಲ್ಲರೂ ಮೆಚ್ಚುವಂತಹದ್ದು ಎಂದು ಹೇಳಿದರು, ಇದರೊಂದಿಗೆ ಈ ಸ್ಥಳದಲ್ಲಿ ಕೃಷಿ ಪದವಿ ಕಾಲೇಜು ಮಾಡಲು ಎಲ್ಲಾ ರೀತಿಯ ಅನುಕೂಲವಿದ್ದು ಸ್ಥಳೀಯ ಜನಪ್ರತಿನಿಧಿ ಗಳೊಂದಿಗೆ ಮಾತನಾಡಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ರೈತ ಮುಖಂಡ ತೇಜಸ್ವಿ ಪಟೇಲ್ ಮಾತನಾಡಿ, ರಾಜ್ಯ ಸರ್ಕಾರ ಅನುದಾನ ನೀಡಿದರೆ ಅಚ್ಚುಕಟ್ಟು ಅಭಿವೃದ್ದಿಗೆ ಅಧ್ಯಕ್ಷರು ಹಗಲು ರಾತ್ರಿ ಶ್ರಮಿಸುತ್ತಾರೆ, ಯಾವುದೇ ಭ್ರಷ್ಟಾಚಾರ ವಿಲ್ಲದೆ ಆಡಳಿತ ನಡೆಸುತ್ತಾರೆ ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡುತ್ತಾರೆ ಉದಾಹರಣೆಯೊಂದಿಗೆ ಹೇಳುವುದಾದರೆ 1 ರೂಪಾಯಿ ಅವರ ಕೈಗೆ ನೀಡಿದರೆ 1 ರೂಪಾಯಿ 20 ಪೈಸೆ ಕೆಲಸ ಮಾಡುವ ಚಾಕಚಕ್ಯತೆ ಅವರಲ್ಲಿದೆ ಎಂಬ ಮಾತನ್ನು ಹಂಚಿಕೊಂಡರು.

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಆನಂದ್ ಕುಮಾರ್ ಮಾತನಾಡಿ, ನಿಮ್ಮ ಭಾಷಣ ಕೇಳಿದರೆ ನಿಮ್ಮ ರೈತರೊಂದಿಗಿನ ಒಡನಾಟ ಯಾವ ಮಟ್ಟದಲ್ಲಿದೆ ಎಂಬುದು ತೋರ್ಪಡಿಸುತ್ತದೆ, ಕೃಷಿಯ ಬಗ್ಗೆ ಇರುವ ಅಪಾರವಾದ ಜ್ಞಾನ ರೈತರ ಬಗೆಗಿನ ಕಾಳಜಿ ನಿಜಕ್ಕೂ ನನಗೆ ಅಚ್ಚರಿಗೆ ನೂಕಿದೆ, ನೀವು ಖಂಡಿತ ಕೃಷಿ ವಿಜ್ಞಾನಿಗಳಿಗೆ  ಸರಿಸಮನಾಗಿ ನಿಲ್ಲುತ್ತೀರಿ ನಿಮ್ಮ ಅನುಭವ ನಮ್ಮೆಲ್ಲರಿಗೂ ಮಾದರಿ ಎಂದು ಅಭಿಮಾನ ವ್ಯಕ್ತ ಪಡಿಸಿದರು ನಂತರ ವಿಶ್ವವಿದ್ಯಾಲಯ ಪ್ರಾಂಗಣದಲ್ಲಿ ಕಾಡಾ ವತಿಯಿಂದ ಅಭಿವೃದ್ದಿ ಕೆಲಸಗಳು ಅಗಬೇಕಿದ್ದು ಅನುದಾನ ನೀಡುವಂತೆ ಮನವಿ ಮಾಡಿ ಒತ್ತಾಯಿಸಿದರು.

ಗ್ರಾಮದ ರೈತರು ಮಾತನಾಡಿ, ನಮ್ಮ ಗ್ರಾಮದಲ್ಲಿ ಬಟ್ಟೆ ತೊಳೆಯಲು ಸೋಪಾನ ಕಟ್ಟೆ ವ್ಯವಸ್ಥೆ ಇಲ್ಲ ಎಂದಾಗ ನರೇಗಾ ಯೋಜನೆಯಡಿ ಅದನ್ನು ಮಾಡಲು ಅವಕಾಶವಿದ್ದು ಯೋಜನೆ ಬಳಸಿಕೊಳ್ಳುವಂತೆ ಕಿವಿ ಮಾತು ಹೇಳಿದರು ಜೊತೆಗೆ ಪ್ರತಿಯೊಬ್ಬ ರೈತರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ದೊರಕುವ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಸೂಚನೆ ಕೊಟ್ಟರು.

ಈ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಗ್ರಾಮಸ್ಥರು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧನಂಜಯ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CADAChannagiriDavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚನ್ನಗಿರಿಭದ್ರಾ ಕಾಡಾ ಪ್ರಾಧಿಕಾರ
Previous Post

ಪಡಿತರ ಚೀಟಿಯ ಎಲ್ಲಾ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ

Next Post

ಶಿವಮೊಗ್ಗ: ಉತ್ತಮ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File photo

ಶಿವಮೊಗ್ಗ: ಉತ್ತಮ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!