ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚನ್ನಪಟ್ಟಣ: ಚಿಕ್ಕ ವಯಸ್ಸಿನಲ್ಲಿಯೇ ನಿಸ್ವಾರ್ಥ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ತಾಲೂಕಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಇಲ್ಲಿನ ನವ್ಯ ಫೌಂಡೇಷನ್ ಅಧ್ಯಕ್ಷೆ ಆರ್. ನವ್ಯಶ್ರಿ ಅವರಿಗೆ ಬೆಂಗಳೂರಿನ ಪ್ರತಿಷ್ಠಿತ ಎಕ್ಷೈಡ್ ಗ್ರೂಪ್ ಸೂಪರ್ ವುಮನ್-2021 ಪ್ರಶಸ್ತಿ ನೀಡಿ ಗೌರವಿಸಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಮಾಜ ಸೇವೆ ಕ್ಷೇತ್ರದಲ್ಲಿ ಆರ್. ನವ್ಯಶ್ರೀ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ವಲಯ ಮುಖ್ಯಸ್ಥ ಲಿಂಗರಾಜ್ ವಿ. ಹಿರೇಮಠ್, ಸಾಧಕರನನು ಗುರುತಿಸಿ, ಅವರಿಗೆ ಪ್ರಶಸ್ತಿ ನೀಡುವ ಮೂಲಕ, ಇತರರೂ ಸಾಧನೆ ಮಾಡಬೇಕೆನ್ನುವ ಪ್ರೇರಣೆ ನೀಡುವುದು ಸಂಸ್ಥೆಯ ಉದ್ದೇಶವಾಗಿದೆ. ಮಹಿಳಾ ದಿನಾಚರಣೆ ಎಲ್ಲ ಮಹಿಳೆಯರಿಗೂ ಸ್ಫೂರ್ತಿಯಾಗಬೇಕು. ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಬೇಕು. ಆಮೂಲಕ ಮಹಿಳಾ ಸಬಲೀಕರಣವಾಗಬೇಕು ಎಂದು ಹೇಳಿದರು.
ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಬಿ.ಕೆ. ಹರ್ಷವರ್ಧನ್, ವಿಭಾಗೀಯ ಅಧಿಕಾರಿ ಶಂಭುಲಿಂಗೇಶ್ವರ, ಎಕ್ಸೈಡ್ ಗ್ರೂಪ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post