No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಮುಂದಿನ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸುತ್ತೇವೆ: ಮಾಜಿ ಸಿಎಂ ಕುಮಾರಸ್ವಾಮಿ

kalpa News by kalpa News
March 8, 2022
in ರಾಜಕೀಯ, ರಾಮನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚನ್ನಪಟ್ಟಣ  |

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಚುನಾವಣೆ ಮೈತ್ರಿ ಇಲ್ಲ ಎಂದು ಪುನರುಚ್ಚರಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, Former CM H.D. Kumaraswamy ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿ ಏನು ಸಾಧನೆ ಮಾಡಿದೆ ಎಂದು ಅವರ ಜತೆ ಕೈಜೋಡಿಸಲಿ? ರಾಜ್ಯಕ್ಕೆ ಬಿಜೆಪಿ ಕೊಟ್ಟ ಕೊಡುಗೆ ಏನು? ಮುಂದಿನ ಚುನಾವಣೆಯನ್ನ ಸ್ವತಂತ್ರವಾಗಿ ಎದುರಿಸುತ್ತೇವೆ. ಕಾಂಗ್ರೆಸ್, ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆಯುತ್ತೇವೆ. ಅವರಿಗಿಂತ ಜೆಡಿಎಸ್ ಪಕ್ಷ ಒಂದು ಕೈ ಮೇಲುಗೈ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಚುನಾವಣೆ ವಾತಾವರಣ ನಿರ್ಮಾಣ ಆಗುತ್ತಿದೆ. ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆ ಹೊಂದಾಣಿಕೆ ಪ್ರಶ್ನೆ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಠಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಈ ರೀತಿಯ ಸುದ್ದಿ ಹರಡಿಸಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿ ಮಾಡಲು ಈ ಸುದ್ದಿ ಹರಡಿಸುತ್ತಿವೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು ಕುಮಾರಸ್ವಾಮಿ ಅವರು.

ನಿನ್ನೆ ದಿನ ಕಲಬುರ್ಗಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೇನೆ. ನಾನು ರೈಟು, ಲೆಫ್ಟು ಇಲ್ಲ. ಸ್ಟ್ರೈಟ್ ಎನ್ನುವುದು ನಮ್ಮ ನಿಲುವು ಎಂದು. ಹೀಗಾಗಿ ಹೊಂದಾಣಿಕೆ ಪ್ರಶ್ನೆ ಇಲ್ಲ. ಹೊಂದಾಣಿಕೆ ಸಲುವಾಗಿ ನಾವು ಯಾರ ಮನೆ ಬಾಗಿಲಿಗೂ ಹೋಗಿಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ತರಾಟೆ:
ಮೇಕೆದಾಟು ಪಾದಯಾತ್ರೆ ಮಾಡಿ 1000 ರು. ಹಣದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರು, ಕೇಂದ್ರ ಜಲ ಸಂಪನ್ಮೂಲ ಸಚಿವರ ಹೇಳಿಕೆ ಬಗ್ಗೆ ಏನು ಹೇಳುತ್ತಾರೆ? ಆ ಪಾದಯಾತ್ರೆಯ ಹಣೆಬರಹ ಎಲ್ಲಿಗೆ ಬಂದಿದೆ ಈಗ ಅನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಅವರು ಹೇಳಿದರು.

ಹತ್ತು ದಿನಗಳ ಕಾಲ ಭರ್ಜರಿ ಮೃಷ್ಟಾನ್ನ ಭೋಜನ, ಭೂರಿ ಭೋಜನಾ ತಿಂದು ಪಾದಯಾತ್ರೆ ಮಾಡಿದ್ದೇ ಇವರ ಸಾಧನೆ. ಬಜೆಟ್ ನಲ್ಲಿ ಒಂದು ಸಾವಿರ ಕೋಟಿ ತಗೊಂದು ಏನು ಮಾಡುತಾರೆ? ಈ ಸಾವಿರ ಕೋಟಿಯಲ್ಲಿ ಕೆಲಸ ಮಾಡಲು ಸಾಧ್ಯವೇ? ನಾಳೆ ಬೆಳಗ್ಗೆಯೇ ಮೇಕೆದಾಟು ಯೋಜನೆ ಕೆಲಸ ಆರಂಭವಾಗುತ್ತದಾ? ಎರಡು ರಾಷ್ಟ್ರೀಯ ಪಕ್ಷಗಳು ಜನರಿಗೆ ಮಕ್ಮಲ್ ಟೋಪಿ ಹಾಕುತ್ತಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಜನರಿಗೆ ಮಕ್ಮಲ್ ಟೋಪಿ ಹಾಕುವುದು ಮತ್ತು ನೀರಾವರಿ ವಿಷಯದಲ್ಲಿ ಮೂರು ನಾಮ ಹಾಕಿರುವ ಕೆಲಸವನ್ನಷ್ಟೇ ಇವರು ಮಾಡಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಚರ್ಚೆ ಮಾಡುತ್ತೇನೆ. ಇನ್ನೂ 15 ದಿನಗಳ ಕಾಲ ಸಮಯವಿದೆ, ನನಗೆ ತಾಳ್ಮೆ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾರ್ಮಿಕವಾಗಿ ಹೇಳಿದರು.

ಮಕ್ಕಳಿಗಾಗಿ ಇಂದು ಬಂದಿದ್ದೇನೆ:
ನನ್ನ ಕ್ಷೇತ್ರ ನನಗೆ ಮುಖ್ಯ. ಹಾಗಾಗಿ ವಿಧಾನಸಭಾ ಕಲಾಪ ಇದ್ದರೂ ಮಕ್ಕಳಿಗಾಗಿ ಬಂದಿದ್ದೇನೆ. ಶಾಲೆ ಕಟ್ಟದವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾರೂ ನಾಟಕ ಮಾಡುವುದು ಬೇಡ. ಕೆಲವರು ಚನ್ನಪಟ್ಟಣದಲ್ಲಿ ಚೆನ್ನಾಗಿ ನಾಟಕ ಆಡುತ್ತಿದ್ದಾರೆ. ಅವರು ಯಾರು ಎನ್ನುವುದು ಜನರಿಗೆ ಗೊತ್ತಿದೆ. ಯಾರಿಂದಲೂ ಚನ್ನಪಟ್ಟಣ ಜನತೆ ದಾರಿ ತಪ್ಪಿಸಲು ಆಗಲ್ಲ ಎಂದು ಕುಮಾರಸ್ವಾಮಿ ಕೆಲವರಿಗೆ ಟಾಂಗ್ ನೀಡಿದರು

Also read: ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ರಾತ್ರಿ 10ರವರೆಗೆ ಮದ್ಯಮಾರಟಕ್ಕೆ ಅನುಮತಿ: ಡಿಸಿ

ಬ್ರಮ್ಮಣಿಪುರದಲ್ಲಿ ಯಾರೋ ಒಬ್ಬರು ಎಂಜಿನಿಯರ್ ರನ್ನು ಕರೆದುಕೊಂಡು ಹೋಗಿದ್ದರು. ನಾನು ಈಗಾಗಲೇ ಕಾವೇರಿ ನೀರಾವರಿ ನಿಗಮದಿಂದ ಹೊಸದಾಗಿ 53 ಕೋಟಿ ಅನುದಾನ ಸೇರಿದಂತೆ 100 ಕೋಟಿ ವೆಚ್ಚದಲ್ಲಿ ನಿಗಮದ ಕೆಲ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ಕೊಟ್ಟಿದ್ದೇನೆ. ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಆದರೆ ಇಲ್ಲಿ ಎಂಎಲ್ಸಿ ಬರೀ ಕೆರೆ ವೀಕ್ಷಣೆಗೆ ನಿಂತಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಕೆಲಸ ನಾನು ಮಾತ್ರ ಮಾಡುತ್ತಿದ್ದೇನೆ. ಅವರು ಪಾಪ ಸ್ಕೋಪ್ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರು.

ಎಂಪಿ ಏನು ಕೊಟ್ಟರು?

ಈ ಹಿಂದೆ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಲವು ಹಳ್ಳಿಗಳಲ್ಲಿ ಅನಾಹುತ ಆಯಿತು. ರೈತರು ಬೆಳೆದ ಬೆಳೆಗಳು ಹಾನಿಗೆ ಒಳಗಾಗಿತ್ತು. ನಾನು ಬರುವ ಸುದ್ದಿ ತಿಳಿದು ಲೋಕಸಭಾ ಸದಸ್ಯರು ಕೂಡ ಬಂದಿದ್ದರು. ಅವರು ಬಂದು ಜನರಿಗೆ ಏನು ಕೊಟ್ಟರು? ಎನ್ನುವುದು ಗೊತ್ತಿಲ್ಲ. ನಾನು ವೈಯಕ್ತಿಕವಾಗಿ ಪರಿಹಾರ ಹಣ ನೀಡಿದ್ದೇ ಅಷ್ಟೇ. ರೈತರ ಸಂಕಷ್ಟಕ್ಕೆ 6 ಲಕ್ಷ ಪರಿಹಾರ ಹಣ ನೆರವು ನೀಡಿದ್ದೆ. ಅವತ್ತು ವಿಧಾನಪರಿಷತ್ ಸದಸ್ಯರು ಎಲ್ಲಿ ಹೋಗಿದ್ದರು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಿನ್ನೆಯ ದಿನ ಕಲಬುರಗಿ ಹೋಗಿದ್ದೆ. ಅಪ್ಜಲಪುರದಲ್ಲಿ ಎಷ್ಟು ಜನರು ಸೇರಿದ್ದರು ಎಂಬುದನ್ನು ಜನ ನೋಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ ಬೇರೆ ಬೇರೆ ಜಿಲ್ಲೆಗಳಿಂದ ಕರೆಸಿ ಜನರನ್ನು ಸೇರಿಸಿದ್ದರು. 300,400 ಬಸ್ ಗಳಲ್ಲಿ ಜಿಲ್ಲೆ ಜಿಲ್ಲೆಯಿಂದ ಜನರನ್ನು ಕರೆತಂದಿದ್ದರು. ಆದರೆ ಕಲಬುರಗಿಗೆ ನಾನು ಹೋದಾಗ ಎಷ್ಟು ಜನ ಸೇರಿದ್ದರು, ಅವರೆಲ್ಲ ಸ್ವಪ್ರೇರಣೆಯಿಂದ ಬಂದಿದ್ದರು ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChannapattanaFormer CM H D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaMinister VenkataramanappaNews in KannadaNews KannadaPolitical NewsState Newsಚನ್ನಪಟ್ಟಣಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ರಾತ್ರಿ 10ರವರೆಗೆ ಮದ್ಯಮಾರಟಕ್ಕೆ ಅನುಮತಿ: ಡಿಸಿ

Next Post

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜನ ಔಷಧಿ ಕೇಂದ್ರ: ಸಚಿವ ಸುಧಾಕರ್

kalpa News

kalpa News

Next Post
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜನ ಔಷಧಿ ಕೇಂದ್ರ: ಸಚಿವ ಸುಧಾಕರ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL