No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

ಮೇ 10ರಂದು ರಾಜಧಾನಿಯಲ್ಲಿ ರಂಗಾರೋಹಣ | ಗುರು ವಿದುಷಿ ಸುಪರ್ಣಾ ವೆಂಕಟೇಶ ಸಾರಥ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2026
in Special Articles
0
ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಶಿವಮೊಗ್ಗ ರಘುರಾಮ  |

ಯಾವುದೇ ಸಂಕಲ್ಪಗಳು ಸಂಪೂರ್ಣವಾಗಿ ಸಿದ್ಧಿಗೊಳ್ಳಬೇಕು ಎಂದರೆ ಅದಕ್ಕೆ ಮೊದಲಿಗೆ ತಾಯಿಯ ಸಂಕಲ್ಪ ಮತ್ತು ಕೃಪೆ ಎಂಬುದು ಬಹಳ ಮುಖ್ಯ. ಜಗತ್ತಿನ ಎಲ್ಲಾ ಸಾಧಕರ ಯಶಸ್ಸು ಮತ್ತು ಕೀರ್ತಿಯ ಹಿಂದೆ ಅವರವರ ತಾಯಿಯ ದಿಟ್ಟ ಸಂಕಲ್ಪಗಳು ಪ್ರಧಾನವಾದ ಪಾತ್ರವನ್ನು ವಹಿಸಿವೆ. ನನ್ನ ಮಗು ಏನಾಗಬೇಕು ಎಂಬುದನ್ನು ಕನಸು ಕಟ್ಟಿಕೊಂಡು ಅದನ್ನು ಸಹಕಾರ ಮಾಡಲು ಜೀವನ ಪಯರ್ಂತ ತ್ಯಾಗವನ್ನು ಮಾಡುವ ತಾಯಿ, ತನ್ನ ಮಗು ಸಾಧನೆಯ ಮೆಟ್ಟಿಲು ಏರುತ್ತ ಏರುತ್ತ ಇದ್ದಂತೆ ಪಡುವ ಸಂಭ್ರಮ ಹೇಳತೀರದು.

ಬೆಂಗಳೂರಿನ #Bengaluru ಗೃಹಿಣಿ ಶಿಲ್ಪಾ ಚನ್ನಕೇಶವ ಅವರಿಗೂ ಒಂದು ಕನಸು ಇತ್ತು. ತಾನು ಬಾಲ್ಯದಲ್ಲಿ ಕಲಿಯಲು ಸಾಧ್ಯವಾಗದ ನೃತ್ಯ ಕಲೆಯನ್ನು ಮಗಳು ಕರಗತ ಕಲಿಯಬೇಕು. ಶಾಲಾ ಪಠ್ಯಕ್ರಮವಲ್ಲದೇ ಕಲಾ ರಂಗದಲ್ಲೂ ಏನಾದರೂ ಒಂದಷ್ಟು ಸಾಧನೆ ಮಾಡಬೇಕು ಎಂದು. ಅವರ ಮಹದಾಸೆಗೆ ಪೂರಕವಾಗಿ ಪತಿ ಚೆನ್ನಕೇಶವ ರೆಡ್ಡಿ ಸಹಕಾರ ನೀಡಿದರು. ಈ ದಂಪತಿಯ ಏಕೈಕ ಪುತ್ರಿ.

Also Read>> ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

ಚಾರ್ವಿಶ್ರೀಗೆ ಎಳವೆಯಿಂದಲೇ ಗುರು ಸುಪರ್ಣಾ ವೆಂಕಟೇಶರ ಬಳಿ ಅಭ್ಯಾಸಕ್ಕೆ ಸಮರ್ಪಣೆ ಮಾಡಿದರು. ಇದೀಗ ಮಲ್ಲೇಶ್ವರದ ನಿರ್ಮಲ ರಾಣಿ ಶಾಲೆಯಲ್ಲಿ 10ನೇ ತರಗತಿ ಅಭ್ಯಾಸ ಮಾಡುತ್ತಿರುವ ಚಾರ್ವಿ, ರಂಗಪ್ರವೇಶ #Rangapravesha ಮಾಡುವ ಹಂತಕ್ಕೆ ಬಂದು ನಿಂತಿರುವುದು ಇಡೀ ಕುಟುಂಬದ ಸಂಭ್ರಮಕ್ಕೆ ಕಳಸವಿಟ್ಟಂತಿದೆ.ಗುರು ಸುಪರ್ಣಾ ವೆಂಕಟೇಶ ಅವರ ಗರಡಿಯಲ್ಲಿ ಪಳಗುತ್ತಿರುವ ಚಾರ್ವಿಶ್ರೀ ಈಗಾಗಲೇ ಭರತನಾಟ್ಯ ಜ್ಯೂನಿಯರ್ ಮತ್ತು ಗಂಧರ್ವ ಮಹಾವಿದ್ಯಾಲಯದ ಭರತನಾಟ್ಯ #Bharanatyam ಮಧ್ಯಮ ಪ್ರಥಮ, ಮಧ್ಯಮ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿದ್ದಾಳೆ. ಕಥಕ್ ನೃತ್ಯದಲ್ಲೂ ಆಸಕ್ತಿ ಹೊಂದಿರುವ ಈಕೆ ಶ್ವೇತಾ ವೆಂಕಟೇಶರ ಬಳಿಯಲ್ಲಿ ಜ್ಯೂನಿಯರ್ ಹಂತದ ಅಭ್ಯಾಸ ಮಾಡುತ್ತಿದ್ದಾಳೆ. ಗಂಧರ್ವ ಮಹಾವಿದ್ಯಾಲಯದ ಪ್ರವೇಶಿಕಾ, ಪ್ರಥಮ ಹಂತದ ಪರೀಕ್ಷೆಗಳಲ್ಲೂ ಉತ್ತಮ ಸಾಧನೆ ಮಾಡಿರುವುದು ಗಮನೀಯವಾಗಿದೆ.

ಹತ್ತಾರು ಕಡೆ ಪ್ರದರ್ಶನ
ಶಾಲಾ ಶಿಕ್ಷಣದಲ್ಲೂ #SchoolEducation ಅತ್ಯುನ್ನತ ಸ್ಥಾನವನ್ನೇ ಕಾಪಾಡಿಕೊಂಡಿರುವ ಚಾರ್ವಿಶ್ರೀ, ವಿವಿಧ ಶಾಲಾ-ಕಾಲೇಜುಗಳ ನೃತ್ಯ ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ಪಡೆದಿದ್ದಾಳೆ. ವಿವಿಧ ದೇವಾಲಯಗಳಲ್ಲಿ ನೃತ್ಯ, ಸಾಯಿ ನೃತ್ಯೋತ್ಸವ, ಸ್ಮರಣಂ, ಸುರ್ವೆ ಫೆಸ್ಟಿವಲ್, ಕಲೆಗಳ ಉತ್ಸವ, ಡ್ಯಾನ್ಸ್ ಬ್ಯಾಲೆ, ರಾಮಾಯಣ, ದಶಾವತಾರ, ಭಾವ ಯಾಮಿ ರಘುರಾಮಂ, ಹೊಸದಿಲ್ಲಿಯಲ್ಲಿ ನಡೆದ ಎನ್ವಿರಾನ್ಮೆಂಟಲ್‌ಲಿಸ್ಟ್ ಕಾನ್ಫರೆನ್ಸ್ ಸೇರಿದಂತೆ ಹಲವು ವೇದಿಕೆಗಳಲ್ಲಿ ಈಕೆಯ ನರ್ತನ ಕಲಾ ಪ್ರದರ್ಶನವಾಗಿದೆ.ಗುರು ಸ್ಮರಣೆ
ಸೀನಿಯರ್ ಮತ್ತು ವಿದ್ವತ್ ಪರೀಕ್ಷೆ ತೆಗೆದುಕೊಂಡು, ಅದಕ್ಕಾಗಿ ಸತತ ಅಭ್ಯಾಸ ಮಾಡುತ್ತೇನೆ. ಅಮ್ಮನ ಕನಸುಗಳನ್ನು ಈಡೇರಿಸುತ್ತೇನೆ ಎಂಬ ಸಂಕಲ್ಪವನ್ನು ಈ ಬಾಲೆ ಮಾಡಿದ್ದಾಳೆ. ನರ್ತನವನ್ನು ಪ್ರಧಾನವಾಗಿ ಇರಿಸಿಕೊಳ್ಳುವುದರೊಂದಿಗೆ ಆರ್ಕಿಟೆಕ್ಟ್ ಆಗಬೇಕು ಎಂಬ ಬಹುದೊಡ್ಡ ಕನಸು ಈಕೆಗೆ ಇದೆ. ತನ್ನ ಇಲ್ಲ ಸಾಧನೆಯ ಹಿಂದೆ ಅಮ್ಮನ ಸಂಪೂರ್ಣ ಸಹಕಾರ, ತಂದೆಯ ಬೆಂಬಲ ಮತ್ತು ಗುರುಗಳಾದ ಸುಪರ್ಣಾ ಮತ್ತು ಶ್ವೇತಾ ವೆಂಕಟೇಶ ಅವರ ಕಾರುಣ್ಯಗಳನ್ನು ಈಕೆ ತನ್ನ ಬಾಲ ಭಾಷೆಗಳಲ್ಲೇ ಧನ್ಯತೆಯಿಂದ ಸ್ಮರಿಸಿಕೊಳ್ಳುತ್ತಾಳೆ.ಮೇ 10ರಂದು ಕಾರ್ಯಕ್ರಮ
ಬೆಂಗಳೂರಿನ ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಇನ್ನೊಂದು ಉದಯೋನ್ಮುಖ ಪ್ರತಿಭೆ ರಂಗಾರೋಹಣಕ್ಕೆ ಈಗ ಅಣಿಯಾಗಿದೆ. ಗುರು, ವಿದುಷಿ ಸುಪರ್ಣಾ ವೆಂಕಟೇಶ ಅವರ ಶಿಷ್ಯೆ ಚಾರ್ವಿ ಶ್ರೀ ರೆಡ್ಡಿ ಮೇ . 10ರಂದು ಭರತನಾಟ್ಯ ರಂಗ ಪ್ರವೇಶ ಮಾಡಲಿದ್ದಾರೆ. ನಗರದ ಮಲ್ಲೇಶ್ವರಂ ವಯ್ಯಲಿ ಕಾವಲ್‌ನ ಪಾರ್ಕ್ ಬಡಾವಣೆಯಲ್ಲಿರುವ ಶ್ರೀ ಕೃಷ್ಣದೇವರಾಯ #SriKrishnadevaraya ಕಲಾ ಮಂದಿರದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

Also Read>> ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಆರ್.ಕೆ. ಶಿಲ್ಪಾ ಮತ್ತು ಚನ್ನ ಕೇಶವ ರೆಡ್ಡಿ ಅವರ ಪುತ್ರಿ ಚಾರ್ವಿ, ತನ್ನ 6ನೇ ವರ್ಷದಿಂದಲೇ ಗುರು ಸುಪರ್ಣಾ ಅವರಲ್ಲಿ ನೃತ್ಯ ಕಲಿಕೆ ಆರಂಭಿಸಿದ್ದು, ಸತತ ಒಂದು ದಶಕದ ಅವಧಿಯ ಅಭ್ಯಾಸದ ನಂತರ ತನ್ನ ನೃತ್ಯ ಕೌಶಲವನ್ನು ರಂಗಪ್ರವೇಶದ ಮೂಲಕ ಪಡಮೂಡಿಸುತ್ತಿರುವುದು ಆಶಾದಾಯಕ ನಡೆಯಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಸ್ -ವ್ಯಾಸ ವಿವಿಯ ಪ್ರೊ. ಕರುಣಾ ವಿಜೇಂದ್ರ, ಐಸಿಸಿಆರ್ ಪ್ರಾದೇಶಿಕ ನಿರ್ದೇಶಕ ಪ್ರದೀಪ ಕುಮಾರ್, ಎಚ್.ಎನ್. ಇಂಜಿನಿಯರಿಂಗ್ ಕಾಲೇಜು ಚೇರ್ಮನ್ ವೆಂಕಟ ಶಿವಾರೆಡ್ಡಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕ ವಿದ್ವಾನ್ ವಿನಯ್ ಶರ್ವ ಸಾಕ್ಷಿ ಆಗಲಿದ್ದಾರೆ.

ನಟುವಾಂಗದಲ್ಲಿ ಗುರು ಸುಪರ್ಣಾ, ಗಾಯನದಲ್ಲಿ ವಿದ್ವಾನ್ ಬಾಲ ಸುಬ್ರಹ್ಮಣ್ಯ ಶರ್ಮಾ, ಕೊಳಲಿನಲ್ಲಿ ವಿದ್ವಾನ್ ರಘು ಸಿಂಹ, ವೀಣೆಯಲ್ಲಿ ವಿದ್ವಾನ್ ಪ್ರಶಾಂತ್ ಇತರರು ಸಹಕಾರ ನೀಡಲಿರುವುದು ವಿಶೇಷವಾಗಿದೆ. ರಂಗ ಕಲಾಸಕ್ತರು ಭಾಗವಹಿಸುವಂತೆ ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ತಾಂತ್ರಿಕ ನಿರ್ದೇಶಕ ಸಾಯಿ ವೆಂಕಟೇಶ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUBharatanatyamCarnatic classical musicKannada News WebsiteLatest News KannadaRangapraveshaಕಥಕ್ ನೃತ್ಯಕರ್ನಾಟಕ ಶಾಸ್ತ್ರೀಯ ಸಂಗೀತಗುರು ಸ್ಮರಣೆನಟುವಾಂಗಬೆಂಗಳೂರುಭರತನಾಟ್ಯರಂಗಪ್ರವೇಶರಂಗಾರೋಹಣಶ್ರೀ ಕೃಷ್ಣದೇವರಾಯ
Share203Tweet127Send
Previous Post

ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

Next Post

ಟೀಮ್‌ ಈಶ್ವರ್‌ ಮಲ್ಪೆಯಿಂದ ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟೀಮ್‌ ಈಶ್ವರ್‌ ಮಲ್ಪೆಯಿಂದ ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಟೀಮ್‌ ಈಶ್ವರ್‌ ಮಲ್ಪೆಯಿಂದ ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

May 13, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

May 13, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL