ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಕೊಂದು, ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಚೆಂಗಂ ತಾಲೂಕಿನ ಒರಂತವಾಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಪಳನಿಸ್ವಾಮಿ ಎಂದು ಗುರುತಿಸಲಾಗಿದೆ.
ಈ ವ್ಯಕ್ತಿ ಮನೆಯ ಛಾವಣಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದ್ದು, ಆತನ 37 ವರ್ಷದ ಪತ್ನಿ, ಮೂವರು ಪುತ್ರಿಯರು ಮತ್ತು ಓರ್ವ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 9 ವರ್ಷ ವಯಸ್ಸಿನ ಇನ್ನೊಂದು ಹೆಣ್ಣು ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
Also read: ಗನ್ ಪಾಯಿಂಟ್’ನಲ್ಲಿ ಮಹಿಳೆಯ ಸರ ದೋಚಿದ ದುಷ್ಕರ್ಮಿ: ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಘಟನೆಗೆ ನಿಖರ ಕಾರಣ ವರದಿಯಾಗಿಲ್ಲ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















