ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ #Annamalai ಫೋಟೋವನ್ನು ಮೇಕೆ ಕತ್ತಿಗೆ ನೇತು ಹಾಕಿ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
DMK workers/supporters have beheaded a goat with a photo of Annamalai.
This is the hatred: how dare Annamalai contest the election? And, these people are talking about saving Democracy. pic.twitter.com/6Lvq7HEg6H
— Anshul Saxena (@AskAnshul) June 5, 2024
ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಅಪ್ಲೋಡ್ ಮಾಡಿ ಮುಖ್ಯಮಂತ್ರಿ ಸ್ಟಾಲಿನ್ #CM Stalin ನಿಮಗೆ ನಾಚಿಕೆಯಾಗಬೇಕು. ನಿಮ್ಮ ಅನಾಗರಿಕ ವರ್ತನೆ ಸ್ವೀಕಾರಾರ್ಹವಲ್ಲ. ದಯವಿಟ್ಟು ನಿಮ್ಮ ಕಾರ್ಯಕರ್ತರಿಗೆ ಮೂಲಭೂತ ಸಭ್ಯತೆಯನ್ನು ಪ್ರದರ್ಶಿಸಿಲು ಹೇಳಿ. ತಮಿಳುನಾಡು ಪೊಲೀಸರು ವೀಕ್ಷಕರಾಗುವ ಬದಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.
Also read: ಜೂನ್ 8ರಂದು ಮೋದಿ ಪ್ರಮಾಣ ವಚನ ಸಾಧ್ಯತೆ | 8 ಸಂಖ್ಯೆಯ ಮಹತ್ವವೇನು?
ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ 1,18,068 ಮತಗಳ ಅಂತರದಿಂದ ಸೋತಿದ್ದರು. ಡಿಎಂಕೆ ಗಣಪತಿ ರಾಜ್ಕುಮಾರ್ ಅವರು 5,68,200 ಮತಗಳನ್ನು ಪಡೆದರೆ ಅಣ್ಣಾಮಲೈ 4,50,132 ಮತಗಳನ್ನು ಗಳಿಸಿದ್ದಾರೆ. ಎಐಡಿಎಂಕೆಯ ಸಿಂಗಯ್ ಜಿ ರಾಮಚಂದ್ರನ್ ಅವರು 2,36,490 ಮತಗಳು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post