ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ನಾನಾಗಿದ್ದಿದ್ದರೆ 1 ನಿಮಿಷದಲ್ಲಿ ರಾಜೀನಾಮೆ #Resignation ಕೊಡ್ತಿದ್ದೆ, ನಿಮಗೆ ನಾಚಿಕೆ ಆಗಲ್ವ ಎಂದು ಮಾಜಿ ಸಚಿವ ಸುಧಾಕರ್ #DrKSudhakar ಅವರು ಶಾಸಕ ಪ್ರದೀಪ್ ಈಶ್ವರ್ #PradeepEshwar ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಾಗೆಪಲ್ಲಿಯಲ್ಲಿ ಮಾತನಾಡಿದ ಅವರು, ನಾವು ಮಾಡಿದ್ದಂತಹ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ರದ್ದು ಮಾಡಿ ಕೋಲಾರಕ್ಕೆ #Kolar ನಿಮ್ಮ ಸರ್ಕಾರ ಮರಳಿ ಸೇರಿಸಿದೆ. ನಮ್ಮ ಜಿಲ್ಲೆಯ ಹೈನುಗಾರರು ಏನು ಮಾಡಿದ್ರಿ? ಎಂದು ಪ್ರಶ್ನಿಸಿದರು.
ಜಿಲ್ಲೆಯ ಜನ ಕಾಂಗ್ರೆಸ್ ಶಾಸಕರುಗಳನ್ನು ಗೆಲ್ಲಿಸಲಿಲ್ವಾ? ಚಿಕ್ಕಬಳ್ಳಾಪುರ #Chikkaballapur ಚಿಂತಾಮಣಿ, ಬಾಗೇಪಲ್ಲಿ ಇನ್ನೂ ಗೆದ್ದ ಮೇಲೆ ಗೌರಿಬಿದನೂರಿನವರು ಸಹ ಕಾಂಗ್ರೆಸ್ ಗೆ ಸೇರಿಕೊಂಡಿದ್ದಾರೆ. ಒಬ್ಬರು ಮಂತ್ರಿ ಸಹ ಆಗಿದ್ದಾರೆ. ಇವರು ಏನು ಮಾಡ್ತಿದ್ದಾರೆ? ಸ್ವಾಭಿಮಾನ ಇಲ್ವಾ ಜಿಲ್ಲೆಯಲ್ಲಿ ಹುಟ್ಟಿಲ್ವಾ? ನನ್ನಂತಹವನು ಆಗಿದ್ದರೆ 1 ನಿಮಿಷದಲ್ಲಿ ರಾಜೀನಾಮೆ ಕೊಡ್ತಿದ್ದೆ. ನಿಮಗೆ ನಾಚಿಕ ಆಗಲ್ವ ಎಂದು ಪ್ರಶ್ನಿಸಿದ್ದಾರೆ.
ಮೆಡಿಕಲ್ ಕಾಲೇಜು ಹೋದಾಗ ನಾನು ರಾಜೀನಾಮೆ ಕೊಡಲಿಲ್ವಾ?, ಅಧಿಕಾರಕ್ಕಾಗಿ ನಾನು ಅಂಟಿಕೊಂಡಿರಲಿಲ್ಲ. ನಾನು ಜನ ರೈತರ ಪರ ನಿಂತಿದ್ದೀನಿ ಅಂತ ಟಾಂಗ್ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post