ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಯಿತು.
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಕ್ರಂ ಅಮಟೆ ವಿತರಣೆ ಮಾಡಿದರು.
2022-23 ನೇ ಸಾಲಿನಲ್ಲಿ ಎಸ್’ಎಸ್’ಎಲ್’ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಒಟ್ಟು 30 ಮಕ್ಕಳಿಗೆ ಪೊಲೀಸ್ ಸಹಕಾರ ಸಂಘದ ವತಿಯಿಂದ ಪ್ರೋತ್ಸಾಹ ಧನ ಮತ್ತು ಪ್ರಶಂಸನಾ ಪತ್ರಗಳನ್ನು ವಿತರಿಸಿ, ಮುಂದಿನ ಜೀವನದಲ್ಲಿ ಯಶಸ್ಸು ಸಾಧಿಸಲು ಶುಭ ಹಾರೈಸಿದರು.
Also read: ಪೋಷಕರ ತ್ಯಾಗ ಅರಿತು ಓದಿ, ಸಾಧನೆ ಮಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ ಸಲಹೆ
ಇದಲ್ಲದೇ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಎಸ್’ಎಸ್’ಎಲ್’ಸಿ ಇಂದ ಉನ್ನತ ವಿದ್ಯಾಭ್ಯಾಸಕ್ಕೆ ದಾಖಲಾಗಿರುವ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಒಟ್ಟು 66 ಮಕ್ಕಳಿಗೆ ಪ್ರೋತ್ಸಾಹ ನೀಡಲು ಅವರ ವಿದ್ಯಾಭ್ಯಾಸಕ್ಕಾಗಿ ಪೊಲೀಸ್ ಇಲಾಖೆಯ ವಿದ್ಯಾನಿಧಿ ಯೋಜನೆಯಡಿಯಲ್ಲಿ ಸಹಾಯ ಧನ ಮತ್ತು ಪ್ರಶಂಸನಾ ಪತ್ರಗಳನ್ನು ಸಹ ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















