ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಕಾಮನಕೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ 15 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಎಸ್’ಎಸ್’ಎಲ್’ಸಿ ಪರೀಕ್ಷೆ ಸಿದ್ದನಾಗಿದ್ದ ಬಾಲಕನಿಗೆ ಯಾವುದೇ ಸೋಂಕಿತರ ಸಂಪರ್ಕದಲ್ಲಿಲ್ಲದಿದ್ದರೂ ಸೋಂಕು ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.
ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದ 55 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಪರೀಕ್ಷೆ 25 ರಿಂದ ಶುರುವಾಗಲಿದ್ದು, ಸೋಂಕಿತ ಎಸ್’ಎಸ್’ಎಲ್’ಸಿ ವಿದ್ಯಾರ್ಥಿ ಗುಣಮುಖನಾದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುವುದು. ಇಲ್ಲವಾದಲ್ಲಿ ಜುಲೈನಲ್ಲಿ ನಡೆಯಲಿರುವ ಪೂರಕ ಪರೀಕ್ಷೆ ಸಮಯದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಶಾಲೆ ರಜಾ ಇರುವ ಕಾರಣ ವಿದ್ಯಾರ್ಥಿಗಳ ಸಂಪರ್ಕವಿಲ್ಲದಿರುವುದು ನಿಟ್ಟುಸಿರು ಬಿಟ್ಟಂತಾಗಿದೆ.
Get In Touch With Us info@kalpa.news Whatsapp: 9481252093
Discussion about this post