ಕಲ್ಪ ಮೀಡಿಯಾ ಹೌಸ್
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಲಾಕ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿ ಆದೇಶ ಹೊರಡಿಸಿದೆ.

ಇಂದಿನಿಂದ ಮೇ 4ರವರೆಗೆ ಚಿಕ್ಕಮಗಳೂರು ಜಿಲ್ಲೆ ಸಂಪೂರ್ಣ ಸ್ತಬ್ಧವಾಗಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗುವುದು. ಮೆಡಿಕಲ್, ದಿನಸಿ ಅಂಗಡಿಗಳು, ಹಣ್ಣು-ತರಕಾರಿ ಮಾರಲು ಮಾತ್ರ ಅವಕಾಶ ನೀಡಲಾಗಿದ್ದು, ಮೀನು-ಮಾಂಸದ ಅಂಗಡಿಗಳಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡಲಾಗಿದೆ.

ಈಗಾಗಲೇ ಪೊಲೀಸರು ನಗರದಲ್ಲಿ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸುವ ಕಾರ್ಯದಲ್ಲಿ ನಿರತರಾಗಿರುವುದು ಸಾಮನ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















