ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡಿರುವ ಹುಲಿ ಸುತ್ತಮುತ್ತ ಪ್ರದೇಶಗಳಲ್ಲಿ ಓಡಾಡುತ್ತಿರುವುದು ಪತ್ತೆಯಾಗಿದ್ದು, ಪ್ರವಾಸಿಗರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಅರಣ್ಯ ಇಲಾಖೆ ಸೂಚನೆ ನೀಡಿದೆ.
ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದ್ದು, ಇದರಿಂದಾಗಿ ಗಾಯಗೊಂಡಿರುವ ಹುಲಿ ಕಳೆದ ನಾಲ್ಕೈದು ದಿನಗಳಿಂದ ನೋವಿನಲ್ಲೇ ಸಂಚರಿಸುತ್ತಿದೆ. ಆದರೂ ಜಿಂಕೆ ಮತ್ತು ಕಡವೆಗಳನ್ನು ಬೇಟೆಯಾಡಿರುವುದು ಕಂಡುಬಂದಿದ್ದು, ಸುತ್ತಮುತ್ತ ಪ್ರಾಣಿಗಳ ಅವಶೇಷಗಳು ಪತ್ತೆಯಾಗಿವೆ.
ಹುಲಿಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಕಳೆದ ಮೂರುನಾಲ್ಕು ದಿನಗಳಿಂದ ಹರಸಾಹಸ ಪಡುತ್ತಿದ್ದಾರೆ. ಹುಲಿಯ ಚಲನವಲನಗಳನ್ನು ಗಮನಿಸಲು ವಿವಿಧ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
Also read: ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ
ಭದ್ರತಾ ದೃಷ್ಟಿಯಿಂದ ತೋಟದ ಕಾರ್ಮಿಕರು ಕೆಲಸಕ್ಕೆ ತೆರಳಬಾರದು ಎಂದು ಸೂಚನೆ ನೀಡಲಾಗಿದೆ. ಪಂಡರವಳ್ಳಿ, ಕೊಳಗಾಮೆ, ಏಳುನೂರ್ ಖಾನ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಸ್ತೆಗಳಲ್ಲಿ ಸಂಚರಿಸಲು ಹೆದರುತ್ತಿದ್ದಾರೆ.
ಇದೇ ವೇಳೆ, ಉರುಳು ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















