ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ #DrDhananjayaSarji ಅವರು ಶೃಂಗೇರಿ ಶ್ರೀಶಂಕರ ಮಠಕ್ಕೆ ಭೇಟಿ ನೀಡಿ ತಾಯಿ ಶಾರದಾಂಬೆ ಹಾಗೂ ಜಗದ್ಗುರುಗಳ ಆರ್ಶೀವಾದ ಪಡೆದರು.
ಶೃಂಗೇರಿ #Sringeri ಶಾರದಾ ಪೀಠಕ್ಕೆ ಭೇಟಿ ನೀಡಿ ಜ್ಞಾನ ದೇವತೆ ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಮತ್ತು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ದರ್ಶನ ಮಾಡಿ ಆಶೀರ್ವಾದ ಪಡೆದರು.
ಈ ವೇಳೆ ಮಾಜಿ ಸಚಿವ ಡಿ.ಎನ್. ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಕಳದಲ್ಲಿ ಸುನಿಲ್ ಕುಮಾರ್ ಮತಯಾಚನೆ
ಎನ್’ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರನ್ನು ಬೆಂಬಲಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಮತಯಾಚನೆ ಮಾಡಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಅಮೃತ ಭಾರತಿ ವಿದ್ಯಾಲಯ, ಮತ್ತು ಎಸ್’ಆರ್’ಎಸ್ ವಿದ್ಯಾಸಂಸ್ಥೆಗೆ ತೆರಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮತಯಾಚಿಸಿದರು.
ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು, ವಿದ್ಯಾ ಸಂಸ್ಥೆಯ ಆಡಳಿತ ವರ್ಗ, ಉಪನ್ಯಾಸಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಕೊಪ್ಪದಲ್ಲಿ ಕಾರ್ಯಕರ್ತರ ಸಭೆ
ಇನ್ನು, ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಮಂಡಲ ಬಿಜೆಪಿ ಕಚೇರಿಯಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ನೈರುತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಮಾಜಿ ಸಚಿವರಾದ ಡಿ.ಎನ್. ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಕೊಪ್ಪ ಮಂಡಲ ಬಿಜೆಪಿ ಅಧ್ಯಕ್ಷರಾದ ದಿನೇಶ್ ಹೊಸೂರು, ಕಾರ್ಯದರ್ಶಿಗಳಾದ ಬಿಸೇಜ್ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಎಸ್. ಮಹಾಬಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್. ರಾಮಸ್ವಾಮಿ, ಜಿಲ್ಲಾ ಕಾರ್ಯದರ್ಶಿಗಳಾದ ಬಿ.ಎಸ್. ನಟೇಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರುತಿ ರೋಹಿತ್, ಚುನಾವಣಾ ತಾಲೂಕು ಸಂಚಾಲಕರಾದ ಮಂಜುನಾಥ್ ಹೊಸೂರು, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post