ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಹಬ್ಬಗಳಂತಹ ವಿಶೇಷ ಸಂದರ್ಭದಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಸ್ಥಳಗಳನ್ನು ಗುರುತಿಸಿ ವ್ಯಾಪಾರ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವಂತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಸುಮೇರ್ ಖಾನ್ ಒತ್ತಾಯಿಸಿದರು.
ಈ ಕುರಿತಂತೆ ಮಾತನಾಡಿದ ಮನವಿ ಮಾಡಿರುವ ಅವರು, ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಸಂತೇ ಮೈದಾನಕ್ಕೆ ಸ್ಥಳಾಂತರಿಸಿರುವುದರಿಂದ ಬೀದಿ ಬದಿ ವ್ಯಾಪಾರವನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದ ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ ಸ್ಥಿತಿಗೆ ತಲುಪಿದಂತಾಗಿದೆ ಎಂದು ಅಳಲು ತೋಡಿಕೊಂಡರು.

Also read: ಡಾ. ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ ಟಿವಿ ಕಪಾಲಿ ಶಾಸ್ತ್ರಿ ಪ್ರಶಸ್ತಿ ಪ್ರದಾನ

ಇನ್ನಾದರೂ ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರು ಬಡ ಬೀದಿ ಬದಿ ವ್ಯಾಪಾರಿಗಳ ಸಂಕಷ್ಟವನ್ನು ಅರಿತು, ಮುಂದೆ ಬರುವ ಆಯುಧಪೂಜೆ, ದೀಪಾವಳಿ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಸ್ಥಳ ಗುರುತಿಸಿ ವ್ಯಾಪಾರ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.










Discussion about this post