ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ/ಬೆಂಗಳೂರು |
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿ ಟಿ. ಜಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಹಿರಿಯೂರು ನಗರಸಭೆ ಕಂದಾಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಪ್ಪ ಅವರನ್ನು ರಾಣೆಬೆನ್ನೂರಿನಲ್ಲಿ ರಾಜ್ಯ ಸಂಘದ ಅಧ್ಯಕ್ಷರಾಗಿರುವ ಪ್ರಭಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪರಿಷತ್ತು ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಯಪ್ಪ, ಪೌರಕಾರ್ಮಿಕರ ಸೇವೆ ಮಾಡಲು ತಮಗೆ ಈ ಆಯ್ಕೆ ಮೂಲಕ ಮತ್ತಷ್ಟು ಬಲಬಂದಂತಾಗಿದೆ. ಪೌರಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಅವರ ಏಳಿಗೆಗೆ ಬದ್ಧರಾಗಿ ನಿಲ್ಲುವುದಾಗಿ ತಿಳಿಸಿದ್ದು, ತಮ್ಮ ಆಯ್ಕೆಗೆ ಸಹಕರಿಸಿದ ರಾಜ್ಯ, ಜಿಲ್ಲಾ, ತಾಲೂಕು ಸೇರಿದಂತೆ ಸಂಘದ ಎಲ್ಲಾ ಮುಖಂಡರಿಗೆ ಈ ಸಂದರ್ಭದಲ್ಲಿ ಕೃತಜ್ಞತೆಗಳನ್ನು ಜಯಪ್ಪ ಹೇಳಿದ್ದಾರೆ.
Also read: ನ.17ರವರೆಗೂ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಶಿವಮೊಗ್ಗದ ಪರಿಸ್ಥಿತಿಯೇನು?
ಜಯಪ್ಪ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹಿರಿಯೂರು ಸೇರಿದಂತೆ ರಾಜ್ಯದ ಇತರೆ ಪುರಸಭೆ ಹಾಗೂ ಪ.ಪಟ್ಟಣ ಸಿಬ್ಬಂದಿ ವರ್ಗ ಅಭಿಮಾನಿಗಳು ಅಭಿನಂದಿಸಿ ಶುಭ ಕೋರಿದರು.
ಪ್ರಸ್ತುತ ಹಿರಿಯೂರಿನ ನಗರಸಭೆ ಕಂದಾಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಟಿ. ಜಯಪ್ಪ, ಈ ಹಿಂದೆ ಚಿತ್ರದುರ್ಗ ನರಗಸಭೆಯಲ್ಲಿ ಜಿಲ್ಲಾಧಿಕಾರಿ ಕಾರ್ಯಾಲಯದಲ್ಕಿ ಚಿತ್ರದುರ್ಗ ಪಟ್ಟಣ ಪಂಚಾಯಿತಿ ನಾಯಕನಹಟ್ಟಿ ಮುಖ್ಯಾಧಿಕಾರಿ ಚನ್ನಗಿರಿ ಪುರಸಭೆ ಮುಖ್ಯಾಧಿಕಾರಿ ನೆಲಮಂಗಲ ಪುರಸಭೆ ಮುಖ್ಯಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post